AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ, ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ವಿರುದ್ಧ ದೂರು

ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ದ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ದಾರೆ. 

Belagavi News: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ, ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ವಿರುದ್ಧ ದೂರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 19, 2022 | 2:14 PM

Share

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ದ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆಯಿಂದ ದೂರು ನೀಡಿದ್ದಾರೆ.  ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಇಬ್ಬರ ಮೇಲೆ ಸೆಕ್ಷನ್ 384, 448, 504, 506, 34ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. 384 – ಸುಲಿಗೆ, 448 – ಮನೆಗೆ ಅತಿಕ್ರಮ ಪ್ರವೇಶ, 504 – ಶಾಂತಿಭಂಗಗೊಳಿಸುವ ಉದ್ದೇಶದ ನಿಂದನೆ, 506 – ಬೆದರಿಕೆ, 34 – ಕ್ರಿಮಿನಲ್ ಉದ್ದೇಶ, ಸಕ್ಷೆನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ತನ್ನಗೆ ತನ್ನ ಕುಟುಂಬಕ್ಕೆ ನವ್ಯಶ್ರೀಯಿಂದ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ತಡರಾತ್ರಿ ದೂರು ದಾಖಲಾಗಿದೆ.

ಈ ಹಿಂದೆ ಬೆಳಗಾವಿಗೆ ಆಗಮಿಸಿದ್ದ ನವ್ಯಶ್ರೀ, ಆಗ ಸಚಿವರ ಪಿಎಸ್ ಆಗಿದ್ದ ರಾಜಕುಮಾರ್ ಅವರ ಪರಿಚಯ ಮಾಡಿಕೊಂಡಿದ್ದರು. ಪರಿಚಯದಿಂದ ಇಬ್ಬರ ನಡುವೆ ಸ್ನೇಹವಾಗಿತ್ತು. ನನಗೆ ಮದುವೆಯಾಗಿ ಮಕ್ಕಳು ಇರುವುದು ಆಕೆಗೆ ಗೊತ್ತಿದ್ದರು ಪ್ರೀತಿ, ಪ್ರೇಮವೆನ್ನುತ್ತಿದ್ದಳು. ನಮ್ಮಿಬ್ಬರ ಮಧ್ಯೆ ದೈಹಿಕ ಸಂಪರ್ಕವೂ ಆಗಿದೆ. ಇದ್ದಕ್ಕಿದಂತೆ ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿಕೊಂಡು ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್​ ಇಬ್ಬರೂ ಸೇರಿ ನನಗೆ ಬೆದರಿಕೆ ಹಾಕುವುದರೊಂದಿಗೆ ಹಣಕ್ಕಾಗಿ ಡಿಮ್ಯಾಂಡ್​ ಮಾಡಿದರು. 50 ಲಕ್ಷ ರೂ. ಕೊಡು ಇಲ್ಲವೆಂದಾದರೇ ಖಾಸಗಿ ವಿಡಿಯೋವನ್ನು ನಿನ್ನ ಹೆಂಡತಿಗೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಇಬ್ಬರೂ ಮಾನಸಿಕ ಹಿಂಸೆ ನೀಡಿದ್ದಾರೆ. ಸುಳ್ಳು ಕೇಸ್​ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಹೇಳುತ್ತಿದ್ದರು ಎಂದು ಸಂತ್ರಸ್ತ ದೂರಿನಲ್ಲಿ ಹೇಳಿದ್ದಾರೆ.

ರಾಜಕುಮಾರ್ ಟಾಕಳೆ ನನ್ನ ಗಂಡ: ನವ್ಯಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಖಾಸಗಿ ವಿಡಿಯೋ ಹಾಕಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತೇನೆ ಎಂದು ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿಕೆ ನೀಡಿದರು. ಕಳೆದ 15 ದಿನಗಳಿಂದ ನಾನು ಭಾರತದಲ್ಲಿ ಇರಲಿಲ್ಲ. ರಾಜಕುಮಾರ್ ಟಾಕಳೆ ನನ್ನ ಗಂಡ. ರಾಜಕುಮಾರ್ ಟಾಕಳೆರನ್ನ ನಾನು ಮದುವೆಯಾಗಿದ್ದೇನೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ದಾಖಲೆಗಳನ್ನ ಕೊಡ್ತೀನಿ. ಇಡೀ ರಾಜ್ಯದಲ್ಲಿ ನನ್ನ ಬಗ್ಗೆ ಯಾವುದೇ ದೂರು ಇಲ್ಲ. ರಾಜಕಾರಣದಲ್ಲಿ ಮುಂದೆ ಬರ್ತಿನಿ ಎಂದು ಈ ರೀತಿ ಮಾಡಿದ್ದಾರೆ ಎಂದು ನಗರದಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿದರು.

ಕಾಂಗ್ರೆಸ್ ಯುವ ಕಾರ್ಯಕರ್ತೆ ಬೆಳಗಾವಿಯಲ್ಲಿ ಪ್ರತ್ಯಕ್ಷ:

ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ಬೆಳಗಾವಿಯಲ್ಲಿ ಪ್ರತ್ಯಕ್ಷವಾಗಿದ್ದು, ನಿನ್ನೆಯಷ್ಟೇ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ದೂರು ನೀಡಿದ್ದರು. ಇದೀಗ ರಾಜಕುಮಾರ ವಿರುದ್ಧ ದೂರು ದಾಖಲಿಸಲು ಬೆಳಗಾವಿಗೆ ನವ್ಯಶ್ರೀ ಆಗಮಿಸಿದ್ದಾರೆ. ನವ್ಯಶ್ರೀ ವಿಚಾರ ಗೊತ್ತಾಗುತ್ತಿದ್ದಂತೆ ಹೊಟೆಲ್ ಸಿಬ್ಬಂದಿ ಅವರನ್ನು ಖಾಲಿ ಮಾಡಿಸಿದರು.

Published On - 11:39 am, Tue, 19 July 22

Follow Us
Web contact
Web contact

TV9 Kannada

Read More
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!