AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಹಾಡಹಗಲೇ ಬಾಲಕಿ ಕಿಡ್ನಾಪ್​ಗೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ ಜನ

ಆ ಬಾಲಕಿ ಎಂದಿನಂತೆ ಶಾಲೆಗೆ ಹೋಗಿ ಬಂದು ಟ್ಯೂಶನ್​ಗೆ ಹೊರಟ್ಟಿದ್ದಾಳೆ. ಏಕಾಂಗಿಯಾಗಿ ನಡೆದುಕೊಂಡು ಹೋಗ್ತಿದ್ದ ಬಾಲಕಿಯನ್ನ ನಡು ರಸ್ತೆಯಲ್ಲಿ ಕಿಡ್ನಾಪ್ ಮಾಡಲು ಅಪರಿಚಿತ ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆ ನಡೆದಿದ್ದು, ಬೆಳಗಾವಿ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಈ ಹಿನ್ನಲೆ ಮಕ್ಕಳನ್ನ ಹೊರ ಕಳುಹಿಸದ ಪರಿಸ್ಥಿತಿ ನಿರ್ಮಾಣವಾಗಿದೆ.

Belagavi News: ಹಾಡಹಗಲೇ ಬಾಲಕಿ ಕಿಡ್ನಾಪ್​ಗೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ ಜನ
ಬೆಳಗಾವಿಯಲ್ಲಿ ಬಾಲಕಿ ಅಪಹರಣಕ್ಕೆ ಯತ್ನ
Sahadev Mane
| Edited By: |

Updated on:Jul 13, 2023 | 7:08 AM

Share

ಬೆಳಗಾವಿ: ನಗರದ ಹಿಂದವಾಡಿ ಪೋಸ್ಟ್ ಆಫೀಸ್ ಬಳಿ ಮೊನ್ನೆ(ಜು.11) ಸಂಜೆ 10 ವರ್ಷದ ಬಾಲಕಿ ಶಾಲೆಗೆ ಹೋಗಿ ಮನೆಗೆ ಬಂದು ಫ್ರೆಶ್ ಆಗಿ ಎಂದಿನಂತೆ ಪಕ್ಕದ ಕಾಲೋನಿಯಲ್ಲಿದ್ದ ಟ್ಯೂಶನ್​ಗೆ ತೆರಳಿದ್ದಾಳೆ. ತಮ್ಮ ಮನೆಯ ಪಕ್ಕದ ರಸ್ತೆಗೆ ಬರುತ್ತಿದ್ದಂತೆ ಏಕಾಏಕಿ ಹಿಂದಿನಿಂದ ಬಂದ ಓರ್ವ ವ್ಯಕ್ತಿ ಬಾಲಕಿಯನ್ನ ಹೆಗಲ ಮೇಲೆ ಹೊತ್ತುಕೊಂಡು(Kidnap) ಓಡಲು ಶುರು ಮಾಡಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದ್ದಾಳೆ. ಅಷ್ಟೇ ಅಲ್ಲದೇ ಪಾಪಿಯ ಕಪಾಳಕ್ಕೂ ಹೊಡೆದಿದ್ದಾಳೆ. ಗಾರ್ಡನ್​ನಲ್ಲಿ ವಾಕಿಂಕ್ ಮಾಡುತ್ತಿದ್ದ ಕೆಲವರು ಬಾಲಕಿ ಕಿರುಚುತ್ತಿದ್ದ ಧ್ವನಿ ಕೇಳಿ ಕೂಡಲೇ ಓಡೋಡಿ ಬಂದಿದ್ದಾರೆ. ಸಾರ್ವಜನಿಕರು ಬರುತ್ತಿದ್ದನ್ನ ಗಮನಿಸಿದ ಅಪರಿಚಿತ ವ್ಯಕ್ತಿ ಕೂಡಲೇ ಬಾಲಕಿಯನ್ನ ಕೆಳಗಿಳಿಸಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇತ್ತ ಬಾಲಕಿಯನ್ನ ರಕ್ಷಣೆ ಮಾಡಿ ಪೋಷಕರಿಗೆ ಹೇಳಿದ ಸ್ಥಳೀಯರು ನಂತರ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್​ಗೆ ಯತ್ನ ಎಂದು ಕೇಸ್ ದಾಖಲಿಸಿದ್ದಾರೆ.

ಕೃತ್ಯ ಕಾಲೋನಿಯ ಮನೆಗಳಿಗೆ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಇನ್ನು ಮೊನ್ನೆ ಸಂಜೆ ನಡೆದ ಅಪಹರಣಕ್ಕೆ ಯತ್ನ ಮಾಡಿರುವ ಕೃತ್ಯ ಕಾಲೋನಿಯ ಮನೆಗಳಿಗೆ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನ ಆಧರಿಸಿ ತಂಡಗಳನ್ನ ಮಾಡಿ ತನಿಖೆಯನ್ನ ಆರಂಭಿಸಿದ್ದ ಪೊಲೀಸರು ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಯನ್ನ ಸೆರೆ ಹಿಡಿದಿದ್ದಾರೆ. ಮಾರ್ಕೆಟ್ ಠಾಣೆ ವ್ಯಾಪ್ತಿಯ ಖಡೇಬಜಾರ್‌ನಲ್ಲಿ ಆರೋಪಿ ಪೊಲೀಸರ ವಶಕ್ಕೆ ಪಡೆದಿದ್ದು, ಬೆಳಗಾವಿಯ ಮಾರುತಿ ನಗರದ ಗಜಾನನ ಪಾಟೀಲ್ (35) ಬಂಧಿತ ಆರೋಪಿ. ಖಡೇಬಜಾರ್ ವಿಭಾಗದ ಎಸಿಪಿ ಅರುಣ್‌ಕುಮಾರ ಕೋಳೂರ ಅವರಿಂದ ಆರೋಪಿ ವಿಚಾರಣೆ. ಈ ವೇಳೆ ತನಗೆ ಮದುವೆ ಆಗಿರಲಿಲ್ಲ, ಹೀಗಾಗಿ ಬಾಲಕಿಯನ್ನ ಎತ್ತಿಕೊಂಡು ಹೋಗುತ್ತಿದ್ದಾಗಿ ಬಾಯಿ ಬಿಟ್ಡ ಪಾಪಿ.

ಇದನ್ನೂ ಓದಿ:ಮಾಲೂರಿನಲ್ಲಿ ಉದ್ಯಮಿ ಬಾಬು ಅಪಹರಣ ಪ್ರಕರಣ ಸುಖಾಂತ್ಯ; ಉದ್ಯಮಿಯನ್ನ ಬಿಟ್ಟು ಕಳುಹಿಸಿದ ಕಿಡ್ನಾಪರ್ಸ್, ಕಾರಣ ಇಲ್ಲಿದೆ

ಮಕ್ಕಳನ್ನ ಹೊರ ಬಿಡಲು ಭಯ ಪಡುವ ಸ್ಥಿತಿ ನಿರ್ಮಾಣ

ಇನ್ನು ಘಟನೆಯನ್ನ ಕಣ್ಣಾರೆ ಕಂಡಿರುವ ಕಾಲೋನಿ ನಿವಾಸಿಗಳು ಬೆಚ್ಚಿ ಬಿದ್ದಿದ್ದು ಮಕ್ಕಳನ್ನ ಹೊರ ಬಿಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಅಪಹರಣ ಯತ್ನ ದೂರು ದಾಖಲಿಸಿದಾಗ ಪ್ರತಿಕ್ರಿಯೆ ನೀಡಿದ್ದ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಕಿಡ್ನಾಪ್​ಗೆ ಯತ್ನ ಕೇಸ್ ಟಿಳಕವಾಡಿಯಲ್ಲಿ ದಾಖಲಿಸಿಕೊಂಡು ತಂಡ ರಚನೆ ಮಾಡಿ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದೇವೆ. ಆರೋಪಿಯ ಸುಳಿವು ಸಿಕ್ಕಿದ್ದು ಶಿಘ್ರದಲ್ಲಿ ಆರೋಪಿಯನ್ನ ಬಂಧಿಸಲಾಗುವುದು ಎಂದು ಹೇಳಿದ್ದು, ಅದರಂತೆ ನಿನ್ನೆ ಬಂಧಿಸಲಾಗಿ ವಿಚಾರಣೆ ಕೂಡ ನಡೆಯುತ್ತಿದೆ ಎನ್ನಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 am, Thu, 13 July 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?