AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

ಎಂಟು ವರ್ಷದ ಹಿಂದೆ ಹೋರಾಡಿ ದೇವಸ್ಥಾನ ತೆರವಾಗದಂತೆ ನೋಡಿಕೊಂಡಿದ್ದ ಸ್ಥಳೀಯರು, ಈಗ ಮತ್ತೆ ದೇವಸ್ಥಾನ ತೆರವುಗೊಳ್ಳುವ ಭೀತಿ ಎದುರಿಸುವಂತಾಗಿದೆ.

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು
ಆಂಜನೇಯ ದೇವಸ್ಥಾನ
TV9 Web
| Edited By: |

Updated on:Sep 14, 2021 | 11:05 AM

Share

ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ ಹೋರಾಡಿ ದೇವಸ್ಥಾನ ತೆರವಾಗದಂತೆ ನೋಡಿಕೊಂಡಿದ್ದ ಸ್ಥಳೀಯರು, ಈಗ ಮತ್ತೆ ದೇವಸ್ಥಾನ ತೆರವುಗೊಳ್ಳುವ ಭೀತಿ ಎದುರಿಸುವಂತಾಗಿದೆ. ಧಾರವಾಡ: ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ರಾಮಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಆತಂಕ ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ, ಅವಳಿ ನಗರದ ಭಕ್ತರಲ್ಲಿ ಆತಂಕ ಶುರುವಾಗಿದೆ. ಧಾರವಾಡ ಜಿಲ್ಲೆಯಲ್ಲಿ 324 ಮಂದಿರ ಮಸೀದಿ ತೆರವುಗೊಳಿಸಲು ಆದೇಶ ನೀಡಲಾಗಿದೆ. ಈಗಾಗಲೇ 43 ಧಾರ್ಮಿಕ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಆದರೆ ಈಗ 281 ಅನಧಿಕೃತವಾಗಿರುವ ಪ್ರಾರ್ಥನಾ ಮಂದಿರ ತೆರವುಗೊಳಿಸುವುದೇ ದೊಡ್ಡ ಸವಾಲಾಗಿದೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ರಾಮಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಆತಂಕ ಶುರುವಾಗಿದೆ. ಇದು ಪುರಾತನ ಕಾಲದ ಸ್ವಯಂಭು ಲಿಂಗವಾಗಿದ್ದು, ಬಿಆರ್​ಟಿಸಿ ಮೇಲ್ಸೇತುವೆ ಕಾಮಗಾರಿ ಸಮಯದಲ್ಲು ತೆರವುಗೊಳ್ಳದ ಗುಡಿ, ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ತೆರವಿನ ಬಗ್ಗೆ ಆಡಳಿತ ಮಂಡಳಿಯಿಂದ ಚರ್ಚೆಯಾಗುತ್ತಿದೆ.

ಅಶ್ವತ್ಥಾಮ ದೇವಸ್ಥಾನಕ್ಕೂ ತೆರವು ಆತಂಕ ಶುರು ಹತ್ತು ವರ್ಷಗಳ ಹಿಂದೆ ರಸ್ತೆ ಅಗಲೀಕರಣ ವೇಳೆ ಬೆಳಗಾವಿ ಹೃದಯ ಭಾಗದಲ್ಲಿರುವ ಪಾಂಗಳುಗಲ್ಲಿಯ ಅಶ್ವತ್ಥಾಮ ದೇವಸ್ಥಾನ ತೆರುವಿಗೆ ಜಿಲ್ಲಾಡಳಿತ ಮುಂದಾಗಿದ್ದಾಗ ಸ್ಥಳೀಯರು ಹೋರಾಟ ಮಾಡಿ ದೇವಸ್ಥಾನ ಉಳಿಸಿಕೊಂಡಿದ್ದರು. ಇದೀಗ ಮತ್ತೆ ತೆರವುಗೊಳ್ಳುವ ಭೀತಿಯಲ್ಲಿ ಅಶ್ವತ್ಥಾಮ ದೇವಸ್ಥಾನ ಭಕ್ತರು ಕಾಲ ಕಳೆಯುವಂತಾಗಿದೆ. 150ಕ್ಕೂ ಅಧಿಕ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ.

ದಾವಣಗೆರೆ: 23 ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಿದ ಜಿಲ್ಲಾಡಳಿತ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ಶುರುವಾಗಿದೆ. ಅದರಂತೆ ದಾವಣಗೆರೆ ಜಿಲ್ಲಾಡಳಿತ ಈಗಾಗಲೇ 23 ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಿದೆ. ಈ ಹಿಂದೆ 13 ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿತ್ತು. ಸದ್ಯ ಉಳಿದ ಹತ್ತು ಕಟ್ಟಡಗಳ ತೆರವಿಗೆ ಮಾಹಿತಿ ಸಂಗ್ರಹಿಸಲಾಗಿದೆ. ಜಿಲ್ಲಾಡಳಿದಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದ್ದು, ಈ ಹತ್ತು ಧಾರ್ಮಿಕ ಕಟ್ಟಡಗಳ ವಿಚಾರವಾಗಿ ಕೆಲ ಪ್ರಕರಣಗಳಲ್ಲಿ ಸ್ಥಳೀಯರು ಕೋರ್ಟ್ ಮೊರೆ ಹೋಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಚಾಮರಾಜನಗರದ 36 ದೇಗುಲ ಪೈಕಿ 1 ಉಳಿಸಿಕೊಂಡ ಜಿಲ್ಲಾಡಳಿತ; ಮೈಸೂರು, ಬೆಂಗಳೂರಿನಲ್ಲಿ ವಿವಾದ ಹೆಚ್ಚಿಸುತ್ತಿದೆ ತೆರವು ಕಾರ್ಯ

Published On - 10:35 am, Tue, 14 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್