AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಾಲ ಹಿಂದಿರುಗಿಸದ್ದಕ್ಕೆ ಯೋಧನ ಮೇಲೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ

ಕೊಟ್ಟ ಸಾಲ ಹಿಂದಿರುಗಿಸದಿದ್ದಕ್ಕೆ ಯೋಧನ ಮೇಲೆ ಮತ್ತೊಬ್ಬ ಯೋಧ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಸಾಲ ಹಿಂದಿರುಗಿಸದ್ದಕ್ಕೆ ಯೋಧನ ಮೇಲೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ
ಸಾಲ ಹಿಂದಿರುಗಿಸದ್ದಕ್ಕೆ ಯೋಧನ ಮೇಲೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Sep 26, 2023 | 9:57 PM

Share

ಬೆಳಗಾವಿ, ಸೆ.26: ಕೊಟ್ಟ ಸಾಲ ಹಿಂದಿರುಗಿಸದಿದ್ದಕ್ಕೆ ಯೋಧನ ಮೇಲೆ ಮತ್ತೊಬ್ಬ ಯೋಧ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಸಪ್ಪ ಬಂಬರಗಾ (32) ಗಾಯಾಳು ಯೋಧನಾಗಿದ್ದು, ನಂಜುಂಡಿ ಬೂದಿಹಾಳ (32) ಬಂಧಿತ ಯೋಧರಾಗಿದ್ದಾರೆ. ಸದ್ಯ ಬಸಪ್ಪ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ: ಕೆಎಸ್​​ಆರ್​ಟಿಸಿ ಬಸ್ ಪಲ್ಟಿ, ವಿದ್ಯಾರ್ಥಿಗಳು ಸೇರಿ 20 ಪ್ರಯಾಣಿಕರಿಗೆ ಗಾಯ

ನಂಜುಂಡಿ ಬೂದಿಹಾಳ ಅವರು ಬಸಪ್ಪ ಬಂಬರಗಾ ಅವರಿಗೆ ಒಂದು ಲಕ್ಷ ರೂಪಾಯಿ ಸಾಲ ನೀಡಿದ್ದರು. ಈ ಹಣವನ್ನು ಬಸಪ್ಪ ಅವರು ಮರುಪಾವತಿಸಿಲ್ಲ. ಈ ವಿಚಾರವಾಗಿ ರಜೆ ಮೇಲೆ ಬಂದಿದ್ದಾಗ ಇಬ್ಬರ ನಡುವೆ ಜಗಳ ನಡೆದಿದೆ. ಪರಸ್ಪರ ಮಾತಿಗೆ ಮಾತು ಬೆಳೆದಾಗ ಕೋಪಗೊಂಡ ನಂಜುಂಡಿ ಲೈಸೆನ್ಸ್ ರಿವಾಲ್ವರ್​ನಿಂದ ಗುಂಡು ಹಾರಿಸಿದ್ದಾರೆ.

ಕೂಡಲೇ ಬಸಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಗೋಕಾಕ್ ತಾಲೂಕಿನ ಅಂಕಲಗಿ ಠಾಣಾ ಪೊಲೀಸರು ನಂಜುಂಡಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ