AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಾತುರಿಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ

ವಿಧೇಯಕ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಸರ್ಕಾರದ ಬಣ್ಣ ಬಯಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ತರಾತುರಿಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Dec 21, 2021 | 5:50 PM

Share

ಬೆಳಗಾವಿ: ಸರ್ಕಾರವು ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಏಕಾಏಕಿ ಮಂಡಿಸಿದೆ. ವಿಧೇಯಕ ಮಂಡನೆ ಬಗ್ಗೆ ಅಜೆಂಡಾದಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಸಚಿವರು ಉತ್ತರ ನೀಡುವಾಗ ಅರ್ಧಕ್ಕೆ ನಿಲ್ಲಿಸಿ ಮತಾಂತರ ನಿಷೇಧ ವಿಧೇಯಕ ಮಂಡನೆ ಕುರಿತು ಪ್ರಸ್ತಾಪಿಸಿದರು. ಕದ್ದು ಮುಚ್ಚಿ ವಿಧೇಯಕ ಮಂಡಿಸಿದ್ದು ಏಕೆ. ನಾವು ಇಲ್ಲದಿದ್ದಾಗ ವಿಧೇಯಕ ಮಂಡನೆ ಮಾಡಿದ್ದಾರೆ. ಈಗಾಗಲೇ ಇಂಥ ವಿಧೇಯಕಕ್ಕೆ ಗುಜರಾತ್‌ ಹೈಕೋರ್ಟ್‌ನಲ್ಲಿ ತಡೆ ನೀಡಲಾಗಿದೆ. ವಿಧೇಯಕ ಮೇಲಿನ ಚರ್ಚೆಯಲ್ಲಿ ನಾಳೆ (ಡಿ.22) ಭಾಗಿಯಾಗಿ ಸರ್ಕಾರದ ಬಣ್ಣ ಬಯಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನ್ಯಾಯಾಲಯಕ್ಕೆ ಹೋಗುವುದು ನಂತರದ ವಿಚಾರ. ಆದರೆ ಇವರು ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕಲ್ಲವೇ? ಚರ್ಚೆಯ ವೇಳೆ ಈ ಸರ್ಕಾರವನ್ನು ಬೆತ್ತಲೆ ಮಾಡುತ್ತೇವೆ ಎಂದರು. ಕಲಾಪವನ್ನು ಏಕೆ ಶುಕ್ರವಾರವೇ ಮುಗಿಸಬೇಕು? ಇನ್ನೂ ಒಂದು ವಾರ ಇದನ್ನು ವಿಸ್ತರಿಸಬಹುದಲ್ಲವೇ? ಇಲ್ಲವೇ ಈ ವಿಧೇಯಕವನ್ನು ಕೊನೆಯಲ್ಲಿ ತರಬಹುದಿತ್ತಲ್ಲವೇ? ಕೊನೆಯಲ್ಲಿ ಮಂಡಿಸುತ್ತಿದ್ದರೆ ಯಾರಾದ್ರೂ ಹೋಗಿಬಿಡ್ತಿದ್ರಾ? ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಂವಿಧಾನ ಪ್ರಕಾರ ಭಾರತೀಯರು ಯಾವ ಧರ್ಮವನ್ನಾದರೂ ಒಪ್ಪಿಕೊಳ್ಳಬಹುದು. ಇವರು ತಂದಿರುವ ವಿಧೇಯಕ ಸಂವಿಧಾನ ವಿರೋಧಿಯಾಗಿದೆ. ಈಗಾಗಲೇ ಒಂದು ಕಡೆ ಹೈಕೋರ್ಟ್ ಸ್ಟೇ ತಂದುಬಿಟ್ಟಿದೆ. ಮದುವೆಯಾಗುವುದು ಅವರ ಹಕ್ಕು. ಈ ವಿಧೇಯಕವು ಆರ್‌ಎಸ್ಎಸ್ ಅಜೆಂಡಾ. ಆರ್‌ಎಸ್ಎಸ್ ಹೇಳಿದಂತೆ ರಾಜ್ಯ ಸರ್ಕಾರ ನಡೆಯುತ್ತಿದೆ. ಈ ವಿಧೇಯಕ ಮಂಡನೆ ಮಾಡಿ, ಇಲ್ಲದಿದ್ದರೆ ನಿಮ್ಮ ಮಾನ ಮರ್ಯಾದೆ ಹೋಗುತ್ತದೆ ಎಂಬ ಮಾತಿಗೆ ಅನುಗುಣವಾಗಿ ಸರ್ಕಾರ ವರ್ತಿಸುತ್ತಿದೆ. ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಷ್ಟೆಲ್ಲಾ ಮಾಡುತ್ತಿದ್ದಾರೆ ಎಂದು ದೂರಿದರು.

ಸದನದಲ್ಲಿ ಪಾಕಿಸ್ತಾನದ ಬಗ್ಗೆ ಮಾತನಾಡಿದ ಈಶ್ವರಪ್ಪ ಅವರ ಮಾತಿನ ವೈಖರಿಯನ್ನೂ ಸಿದ್ದರಾಮಯ್ಯ ಖಂಡಿಸಿದರು. ಪಾಕಿಸ್ತಾನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಿಕೊಂಡು ನಾವು ವಿಧೇಯಕ ಮಂಡಿಸಲು ಆಗುವುದಿಲ್ಲ. ನಮ್ಮ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಾವು ನಡೆದುಕೊಳ್ಳಬೇಕಾಗುತ್ತದೆ. ಈಶ್ವರಪ್ಪಗೆ ಸಂವಿಧಾನ, ಆರ್ಟಿಕಲ್ 25 ಬಗ್ಗೆ ಗೊತ್ತಿದೆಯೇ ಎಂದು ಪ್ರಶ್ನಿಸಿದರು.

ಒಂದು ಸಂಸ್ಥೆ ನಡೆಸುವವರ ವಿರುದ್ಧ ಆಮಿಷ ಅಂದರೆ ಹೇಗೆ? ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಇದನ್ನು ವಿರೋಧಿಸಿ ನಾವು ಜನತಾ ಕೋರ್ಟ್‌ಗೆ ಹೋಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದರು.

ಇದನ್ನೂ ಓದಿ: Anti Conversion Bill Highlights: ಮತಾಂತರ ನಿಷೇಧ ಕಾಯ್ದೆಯ ಮುಖ್ಯ ಅಂಶಗಳು, ಪ್ರತಿಪಕ್ಷಗಳ ಆಕ್ಷೇಪಗಳಿವು ಇದನ್ನೂ ಓದಿ: Anti Conversion Bill 2021: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್