AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಶಂಕಿತ ಉಗ್ರರಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿರುವ ಶಂಕೆ, ಮಹಾರಾಷ್ಟ್ರ ಎಟಿಎಸ್​ನಿಂದ ಸ್ಥಳ ಪರಿಶೀಲನೆ

ಕಳೆದ ವಾರ ಪೆಟ್ರೋಲಿಂಗ್ ವೇಳೆ ಇಬ್ಬರು ಶಂಕಿತ ಉಗ್ರರನ್ನು ಪುಣೆಯ ಕೊಥ್​ರೂಡ್​ ಪೊಲೀಸರು ಬಂಧಿಸಿದ್ದರು. ಸದ್ಯ ಬಂಧಿತರು ಮಹಾರಾಷ್ಟ್ರದ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಎಟಿಎಸ್​ನಿಂದ ತೀವ್ರ ವಿಚಾರಣೆ ನಡೆಯುತ್ತಿದೆ.

ಬಂಧಿತ ಶಂಕಿತ ಉಗ್ರರಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿರುವ ಶಂಕೆ, ಮಹಾರಾಷ್ಟ್ರ ಎಟಿಎಸ್​ನಿಂದ ಸ್ಥಳ ಪರಿಶೀಲನೆ
ಬಂಧಿತ ಶಂಕಿತ ಉಗ್ರರು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಶಂಕೆ ವ್ಯಕ್ತವಾಗಿದೆ (ಸಾಂದರ್ಭಿಕ ಚಿತ್ರ) Image Credit source: iStock Photo
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: Rakesh Nayak Manchi|

Updated on: Jul 29, 2023 | 4:01 PM

Share

ಚಿಕ್ಕೋಡಿ, ಜುಲೈ 29: ಇತ್ತೀಚೆಗೆ ಪುಣೆಯ ಕೊಥ್​ರೂಡ್​ ಪೊಲೀಸರಿಂದ ಬಂಧಿತರಾಗಿರುವ ಇಬ್ಬರು ಶಂಕಿತ ಉಗ್ರರು (Suspected Terrorist) ಕರ್ನಾಟಕದಿಂದ 70 ಕಿ.ಮೀ ದೂರದ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ ಅರಣ್ಯ (Amboli Forest) ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ (Trail Blast) ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಆ ರಾಜ್ಯದ ಎಟಿಎಸ್​ನಿಂದ ತೀವ್ರ ವಿಚಾರಣೆ ನಡೆಯುತ್ತಿದೆ.

ಶಂಕಿತ ಉಗ್ರರು ಕರ್ನಾಟಕದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಮಹಾರಾಷ್ಟ್ರದ ಅಂಬೋಲಿ ಅರಣ್ಯಕ್ಕೆ ಪ್ರಯಾಣ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರಕ್ಕೆ ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ

ಕಳೆದ ವಾರ ಪೆಟ್ರೋಲಿಂಗ್ ನಡೆಸುತ್ತಿದ್ದ ಪುಣೆಯ ಕೊಥ್​ರೂಡ್​ ಪೊಲೀಸರು ಬೈಕ್ ಕಳ್ಳತನ ಶಂಕೆಯಡಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್​​​ ಹಮೀದ್ ಖಾನ್ ಮತ್ತು ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ.

ಇದೇ ಕಾರಣಕ್ಕೆ, ಪೊಲೀಸರ ವಶದಲ್ಲಿದ್ದ ಶಂಕಿತ ಉಗ್ರರರನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಎಟಿಎಸ್‌ ವಿಚಾರಣೆ ನಡೆಸುತ್ತಿದೆ. ಈ ವೇಳೆ ಅಂಬೋಲಿ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ ಮಾಹಿತಿ ಬಹಿರಂಗವಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಎಟಿಎಸ್ ಜೂನ್ 27 ರಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ​​ಮಾಹಿತಿ ಇಲ್ಲ ಎಂದು ಬೆಳಗಾವಿ ಪೊಲೀಸರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ