AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ದರ್ಶನಕ್ಕಾಗಿ ಬೆಟ್ಟಕ್ಕೆ ಹೋಗುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿ

ಆಷಾಢ ಮಾಸದಲ್ಲಿ ಚಾಮುಂಡಿಶ್ವೇರಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರುತ್ತವೆ. ಆಷಾಢ ಮಾಸದ ಶುಕ್ರವಾರ ಮತ್ತು ವರ್ಧಂತಿ ದಿನಗಳಂದು ಮತ್ತು ರವಿವಾರದಂದು ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಹೀಗಾಗಿ, ಮೈಸೂರು ನಗರ ಪೊಲೀಸರು ಭಕ್ತಾದಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನಕ್ಕಾಗಿ ಬೆಟ್ಟಕ್ಕೆ ಹೋಗುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿ
ಚಾಮುಂಡೇಶ್ವರಿ ದೇವಸ್ಥಾನ
ವಿವೇಕ ಬಿರಾದಾರ
|

Updated on:Jun 21, 2025 | 8:34 PM

Share

ಮೈಸೂರು, ಜೂನ್​ 21: ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮಾಸ (Ashada Masa) ಆರಂಭವಾಗಲಿದೆ. ಆಷಾಢ ಮಾಸದಲ್ಲಿ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ (Chamundi Hill) ತೆರಳಿ, ಚಾಮುಂಡೇಶ್ವರಿ (Chamundeshwari) ಅಮ್ಮನವರ ದರ್ಶನ ಪಡೆಯುತ್ತಾರೆ. ವಿಶೇಷವಾಗಿ ಆಷಾಢ ಶುಕ್ರವಾರ, ವರ್ಧಂತಿ ದಿನಗಳಂದು ಮತ್ತು ರವಿವಾರದಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಮೈಸೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಸಾರ್ವಜನಿಕರ ವಾಹನ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಈ ಕುರಿತು ಮೈಸೂರು ನಗರ ಪೊಲೀಸರು ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದು, ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಆಷಾಧ ಶುಕ್ರವಾರದಂದು ಸಾರ್ವಜನಿಕರ ಅನುಕೂಲಕ್ಕಾಗಿ ಲಲಿತ ಮಹಲ್ ಹೋಟೆಲ್ ಬಳಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಅಲ್ಲಿ ತಮ್ಮ ವಾಹನಗಳ್ಳನ್ನು ಪಾರ್ಕ್​ ಮಾಡಿ ನಂತರ ಕೆಎಸ್​ಆರ್​ಟಿಸಿ ಬಸ್​ಗಳ ಮೂಲಕ ಬೆಟ್ಟಕ್ಕೆ ಹೋಗಬೇಕು ಎಂದು ಮನವಿ ಮಾಡಿದ್ದಾರೆ. ಮತ್ತು ಪಾರ್ಕಿಂಗ್ ಸ್ಥಳ ಪರಿಶೀಲನೆಗಾಗಿ ಕ್ಯೂರ್ ಕೋಡ್ ಬಳಸಿ ಎಂದಿದ್ದಾರೆ.

ಚಾಮುಂಡೇಶ್ವರಿ ದರ್ಶನಕ್ಕೆ ಟಿಕೆಟ್​ ದರ ನಿಗದಿ

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್​ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ
Image
11 ದಿನಗಳ ದಸರಾ ಅಪಶಕುನವಾ? ಡಾ. ಶೆಲ್ವ ಪಿಳೈ ಅಯ್ಯಂಗಾರ್ ವಿವರಣೆ ಇಲ್ಲಿದೆ
Image
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
Image
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
Image
ಬಟ್ಟೆ ವ್ಯಾಪರಿಯನ್ನ ಮನೆಗೆ ಕರೆಸಿಕೊಂಡ ಯುವತಿ: ಲಾಕ್ ಆಗಿದ್ದು ಪೊಲೀಸಪ್ಪ

ಫೇಸ್​ಬುಕ್​ ಪೋಸ್ಟ್​

ಇದನ್ನೂ ಓದಿ: ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಹಣ ವಸೂಲಿ: ಸರ್ಕಾರದ ನಡೆಗೆ ಭುಗಿಲೆದ್ದ ಆಕ್ರೋಶ

ವಿಶೇಷ ದರ್ಶನ

ಇದೇ ಮೊದಲ ಬಾರಿಗೆ ವಿಶೇಷ ದರ್ಶನಕ್ಕಾಗಿ 2,000 ರೂ.ಗಳ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಎಸಿ ಬಸ್‌ನಲ್ಲಿ ಬೆಟ್ಟಕ್ಕೆ ತೆರಳಬಹುದು. ಜತೆಗೆ ವಿಶೇಷ ದರ್ಶನದ ವ್ಯವಸ್ಥೆ ಇರಲಿದೆ. ಲಾಡು ಪ್ರಸಾದ, ಮರುಬಳಕೆ ಮಾಡಬಹುದಾದ ವಾಟರ್ ಬಾಟಲ್ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ತಿಳಿಸಿದ್ದರು. ವಿಶೇಷ ದರ್ಶನಕ್ಕಾಗಿ 2,000 ರೂ.ಗಳ ಟಿಕೆಟ್ ವ್ಯವಸ್ಥೆ ಮಾಡಿದ್ದಕ್ಕೆ ಬಿಜೆಪಿ ಮುಖಂಡರು ಮತ್ತು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Sat, 21 June 25

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!