AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ

ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕರ್ನಾಟಕ ಸರ್ಕಾರ ನೆರವಿಗೆ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ
ಪ್ರಮೋದ್ ಮುತಾಲಿಕ್
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Dec 30, 2023 | 1:52 PM

Share

ಚಿಕ್ಕೋಡಿ, ಡಿಸೆಂಬರ್ 30: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಶಬರಿಲೆ ಅಯ್ಯಪ್ಪಸ್ವಾಮಿ (Sabarimala Ayyappa Temple) ಮಾಲಾಧಾರಿಗಳ ಮೇಲೆ ಶೋಷಣೆಯಾಗ್ತಿದೆ ಎಂದು ಚಿಕ್ಕೋಡಿಯಲ್ಲಿ (Chikkodi) ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ (Pramod Mutalik) ಶನಿವಾರ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶ ಆದ್ಮಾತಿಕ ದೇಶ. ಇಡೀ ದೇಶದಲ್ಲಿ ದೇವಸ್ಥಾನಗಳು, ದೇವರ ಕ್ಷೇತ್ರಗಳು ಬಹಳಷ್ಟಿವೆ. ವಿಷೇಶವಾಗಿ ದಕ್ಷಿಣ ಭಾರತದಲ್ಲಿ ತಿರುಪತಿ ತಿಮ್ಮಪ್ಪನಷ್ಟೇ ಪ್ರಖ್ಯಾತಿ ಪಡೆದಿರೋ ಅಯ್ಯಪ್ಪ ದೇವಸ್ಥಾನ ಇದೆ. ಆರು ರಾಜ್ಯಗಳಿಂದ ಐದು ಕೋಟಿ‌ ಜನರು ಅಲ್ಲಿ ಭೇಟಿ ನೀಡ್ತಾರೆ ಎಂದರು.

ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ

ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ ಉಪಯೋಗಕ್ಕೆ ಬಳಸಿಕೊಳ್ಳುತ್ತಿದೆ. ದೇವಸ್ಥಾನ ಮಂಡಳಿಯನ್ನು ಆ ಸರ್ಕಾರ ಹೆದರಿಸುವ ಕೆಲಸ ಮಾಡ್ತಿದೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.

ಇಷ್ಟೆಲ್ಲಾ ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕರ್ನಾಟಕ ಸರ್ಕಾರ ನೆರವಿಗೆ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಸಾವಿರಾರು ಕೋಟಿ ಆದಾಯದ ಸಂಪೂರ್ಣ ಹಣ ಭಕ್ತರ ಅನುಕೂಲಕ್ಕಾಗಿ ಉಪಯೋಗಿಸಬೇಕು. ಅನ್ನವಿತರಣೆ ಕಾರ್ಯಕ್ರಮ ಈ ಹಿಂದೆ ಇದ್ದಂತೆ ಜರುಗಬೇಕು. ಹಿಂದೂ ಸಂಘಟನೆಗಳು ಅನ್ನದಾನವನ್ನು ಉಚಿತವಾಗಿ ಮಾಡುತ್ತಿದ್ದರು. ಆದ್ರೆ ಕೆರಳ ಸರ್ಕಾರ ಬ್ಯಾನ್ ಮಾಡಿ, ಪೊಲೀಸ್ ವ್ಯವಸ್ಥೆಗೆ ನೀಡಿದೆ. ಇದರಿಂದಾಗಿ ಅನೇಕ ಭಕ್ತಾಧಿಗಳಿಗೆ ಅನ್ನ ಸಿಗ್ತಾ ಇಲ್ಲ. ಅಯ್ಯಪ್ಪ ದೇವಸ್ಥಾನದ ಮಂಡಳಿಗೆ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಸರಿಪಡಿಸುವಂತೆ ನಾವು ಮನವಿ ಮಾಡಿಕೊಳ್ಳುವವರಿದ್ದೇವೆ. ಭಕ್ತರಿಗೆ ನೀರಿನ ವ್ಯವಸ್ಥೆ ಹಾಗೂ ಸ್ನಾನ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ. ಮೊದಲಿದ್ದ ಮಾದರಿಯಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಮುತಾಲಿಕ್ ಒತ್ತಾಯಿಸಿದರು.

ಇದನ್ನೂ ಓದಿ: Revenue for Sabarimala: ಶಬರಿಮಲೆಗೆ 310.40 ಕೋಟಿ ರೂ. ಆದಾಯ

ಕಾಂಗ್ರೆಸ್​​ನದ್ದು ಕನ್ನಡ ವಿರೋಧಿ ಸರ್ಕಾರ: ಮುತಾಲಿಕ್

ಕಾಂಗ್ರೆಸ್ ಸರ್ಕಾರ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಕನ್ನಡ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಬೋರ್ಡ್ ಹಾಕಿ ಅಂತ ಕನ್ನಡಿಗರು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಖಂಡಿಸುತ್ತೇನೆ. ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಯಾವುದೇ ಷರತ್ತು ಇಲ್ಲದೇ ಬಿಡುಗಡೆ ಮಾಡಬೇಕು ಎಂದು ಮುತಾಲಿಕ್ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!