AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಾಲೀಕನಿಗೆ ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನ

ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳಗಾವಿ: ಮಾಲೀಕನಿಗೆ ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನ
ಸಾಂದರ್ಭಿಕ ಚಿತ್ರ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Oct 16, 2023 | 1:55 PM

Share

ಬೆಳಗಾವಿ ಅ.16: ಗನ್​​ನಿಂದ ಹೊಡೆದು ಚಿನ್ನದಂಗಡಿ (Gold Shop) ದರೋಡೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿಯ (Belagavi) ಶಾಹು ನಗರದಲ್ಲಿ ನಡೆದಿದೆ. ಪ್ರಶಾಂತ್ ಹೊಂಡ್ರಾ ಎಂಬುವರು ಇಂದು (ಅ.16) ಬೆಳಿಗ್ಗೆ ತಮ್ಮ ಸಂತೋಷಿ ಜ್ಯುವೆಲರ್ಸ್​​ ಅಂಗಡಿ ಬಾಗಿಲು ತೆಗೆಯುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಆರೋಪಿಗಳು ಪ್ರಶಾಂತ್ ಅವರಿಗೆ ಗನ್ ತೋರಿಸಿ ನಂತರ ಗನ್​ನ ಹಿಂಬದಿಯಿಂದ ತಲೆಗೆ ಹೊಡೆದು ಹಲ್ಲೆ‌ ಮಾಡಿದ್ದಾರೆ. ಈ ವೇಳೆ ಗನ್​​ ಮ್ಯಾಗ್ಜಿನ್​​ನಿಂದ ಒಂದು ಗುಂಡು ಹೊರ ಬಿದ್ದಿದೆ.

ಅಂಗಡಿ ಮಾಲೀಕ ಕಿರುಚಾಡುತ್ತಿದ್ದಂತೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಪ್ರಶಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ, ಇಬ್ಬರು ಎಸಿಪಿ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಓರ್ವ ಆರೋಪಿ ಹೆಲ್ಮೆಟ್ ಹಾಕಿಕೊಂಡು ಮತ್ತೋರ್ವ ಆರೋಪಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಅಂಗಡಿ ಪ್ರವೇಶಿಸಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾವೇರಿ: ಮನೆ ದೋಚಲು ಬಂದು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳನಿಗೆ ಕಂಬಕ್ಕೆ ಕಟ್ಟಿ ಧರ್ಮದೇಟು

ಕುರಿ ಕಳ್ಳತನ ಮಾಡಿದ ಕಳ್ಳರನ್ನ ಹಿಡಿದ ಯುವಕರು

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕುರಿ ಕಳ್ಳತನ ಮಾಡಿದ್ದ, ಕಳ್ಳರನ್ನು ಹಿಡಿದ ಯುವಕರು ಗೂಸಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮದ ಕೆರೆ ದಡದಲ್ಲಿ ಮೇಯುತ್ತಿದ್ದ  ಕುರಿಗಳನ್ನು ಬೈಕ್​​ನಲ್ಲಿ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಇದನ್ನು ಕಂಡ ಯುವಕರು  ಬೈಕ್ ಅನ್ನ ಹಿಂಬಾಲಿಸಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ