AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಬೈ ಎಲೆಕ್ಷನ್: ಕೊನೆಯ ಕ್ಷಣದಲ್ಲಿ ಪ್ರಚಾರಕ್ಕೆ ಮನಸು ಮಾಡಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಇದೇ ವಾರಾಂತ್ಯ (ಏಪ್ರಿಲ್ 17ರಂದು) ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಪ್ರಮುಖ ವಿಪಕ್ಷ ಕಾಂಗ್ರೆಸ್​ ಸೇರಿದಂತೆ ಕಣದಲ್ಲಿ ಅಭ್ಯರ್ಥಿಗಳು ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಹೋರಾಟ ನಡೆಸಿದ್ದಾರೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಕೊರೊನಾಗೆ ಬಲಿಯಾದ ಕಾರಣ ಬೈ ಎಲೆಕ್ಷನ್​ ನಡೆಯುತ್ತಿದ್ದು, ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್​ ಅಂಗಡಿ ಅವರ ಪತ್ನಿ ಮಂಗಳಾ ಅವರು ಸ್ಪರ್ಧಿಸಿದ್ದಾರೆ. ಈ ಮಧ್ಯೆ, ಬಿಜೆಪಿಯಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳು ನಡೆದಿದ್ದು, ಪಕ್ಷ ಆಮೂಲಾಗ್ರವಾಗಿ […]

ಬೆಳಗಾವಿ ಬೈ ಎಲೆಕ್ಷನ್: ಕೊನೆಯ ಕ್ಷಣದಲ್ಲಿ ಪ್ರಚಾರಕ್ಕೆ ಮನಸು ಮಾಡಿದ ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 12, 2021 | 12:15 PM

Share

ಬೆಳಗಾವಿ: ಇದೇ ವಾರಾಂತ್ಯ (ಏಪ್ರಿಲ್ 17ರಂದು) ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಪ್ರಮುಖ ವಿಪಕ್ಷ ಕಾಂಗ್ರೆಸ್​ ಸೇರಿದಂತೆ ಕಣದಲ್ಲಿ ಅಭ್ಯರ್ಥಿಗಳು ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಹೋರಾಟ ನಡೆಸಿದ್ದಾರೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಕೊರೊನಾಗೆ ಬಲಿಯಾದ ಕಾರಣ ಬೈ ಎಲೆಕ್ಷನ್​ ನಡೆಯುತ್ತಿದ್ದು, ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್​ ಅಂಗಡಿ ಅವರ ಪತ್ನಿ ಮಂಗಳಾ ಅವರು ಸ್ಪರ್ಧಿಸಿದ್ದಾರೆ. ಈ ಮಧ್ಯೆ, ಬಿಜೆಪಿಯಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳು ನಡೆದಿದ್ದು, ಪಕ್ಷ ಆಮೂಲಾಗ್ರವಾಗಿ ಕಣದಲ್ಲಿ ಹೋರಾಡಬೇಕಿದೆ.

ಬೆಳಗಾವಿಯಲ್ಲಿ ರಾಜಕೀಯವಾಗಿ ಭಾರೀ ವರ್ಚಸ್ಸು ಹೊಂದಿರುವ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಕಳಂಕಹೊತ್ತಿದ್ದು, ಪ್ರಚಾರ ಕಣದಿಂದ ದೂರಸರಿದಿದ್ದಾರೆ. ಅವರ ಅನುಪಸ್ಥಿತಿ ಎದ್ದುಕಾಣುತ್ತಿದೆ. ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಜಾರಕಿಹೊಳಿ ಬ್ರದರ್ಸ್ ಪ್ರಾಬಲ್ಯ ಹೆಚ್ಚಾಗಿರುತ್ತದೆ.​ ಸತೀಶ್ ಜಾರಕಿಹೊಳಿ ಖುದ್ದಾಗಿ ಕಾಂಗ್ರೆಸ್​ ವತಿಯಿಂದ ಸ್ಪರ್ಧಿಸುತ್ತಿದ್ದಾರೆ. ಉಳಿದ ಬ್ರದರ್ಸ್​ ಪೈಕಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಇಂದು ಪ್ರಚಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಬಸವೇಶ್ವರ್ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 4 ಗಂಟೆಗೆ ಬಿಜೆಪಿ ಮುಖಂಡರ, ಕಾರ್ಯಕರ್ತರ ಸಭೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಬಾಲಚಂದ್ರ ಜಾರಕಿಹೊಳಿ‌ ಪ್ರಚಾರ ನಡೆಸಲಿದ್ದಾರೆ. ಸಿಡಿ ಪ್ರಕರಣದ ಬಳಿಕ ಚುನಾವಣಾ ಪ್ರಚಾರದಿಂದ ದೂರವೇ ಉಳಿದಿದ್ದ ಬಾಲಚಂದ್ರ ಜಾರಕಿಹೊಳಿ‌ ಕೊನೆಯ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕಿಳಿಯುತ್ತಿರುವುದು ಕುತೂಹಲ ಕಾರಿಯಾಗಿದೆ. ಮತ್ತೊಂದು ಕುತೂಹಲದ ಸಂಗತಿಯೆಂದರೆ ಇದೇ ಸಿಡಿ ಪ್ರಕರಣ ಸಮ್ಮುಖದಲ್ಲಿ.. ಇದುವರೆಗೂ ಕಾಂಗ್ರೆಸ್​ನಲ್ಲಿದ್ದ ಲಖನ್​ ಜಾರಕಿಹೊಳಿ ಇದೀಗ ಬಿಜೆಪಿ ಪರ ವಾಲಿರುವುದು ಚುನಾವಣೆ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಕಾದುನೋಡಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?