AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಆಗಿಲ್ಲ; ಅಂಜಲಿ ನಿಂಬಾಳ್ಕರ್, ಯತ್ನಾಳ್, ಶಿವಲಿಂಗೇಗೌಡ ಬೇಸರ

10 ‌ದಿನದಲ್ಲಿ ಕೇವಲ 52 ಗಂಟೆ ವಿಧಾನಸಭೆ ಕಲಾಪ ನಡೆದಿದೆ. ಕಾಟಾಚಾರದ ಅಧಿವೇಶನ ನಡೆಸುತ್ತಿರುವುದು ತಪ್ಪು. ವಿರೋಧ ಪಕ್ಷ ನಾಯಕರಿಗೆ ಮಾತಾಡಲು ಅವಕಾಶ ಸಿಗಲಿಲ್ಲ ಎಂದು ಬೆಳಗಾವಿಯಲ್ಲಿ ಜೆಡಿಎಸ್​​ ಶಾಸಕ ಶಿವಲಿಂಗೇಗೌಡ ಬೇಸರ ತೋಡಿಕೊಂಡಿದ್ದಾರೆ.

ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಆಗಿಲ್ಲ; ಅಂಜಲಿ ನಿಂಬಾಳ್ಕರ್, ಯತ್ನಾಳ್, ಶಿವಲಿಂಗೇಗೌಡ ಬೇಸರ
ಶಾಸಕಿ ಅಂಜಲಿ ನಿಂಬಾಳ್ಕರ್
TV9 Web
| Edited By: |

Updated on: Dec 24, 2021 | 4:07 PM

Share

ಬೆಳಗಾವಿ: ಒಂದು ದಿನ ಅಷ್ಟೇ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಕೊಟ್ಟರು. ರಾಜಕೀಯವಾಗಿ ಚರ್ಚಿಸಬೇಕು ಎಂದು ಚರ್ಚೆ ಮಾಡಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆ ಹೇಳಬೇಕು ಎಂದು ಆಸೆ ಇತ್ತು. ಆದರೆ 10 ನಿಮಿಷವೂ ಕೂಡ ನಮಗೆ ಅವಕಾಶ ಕೊಡಲಿಲ್ಲ. ಚರ್ಚೆ ಮಾಡಲು ವಿಪಕ್ಷ ನಾಯಕರಿಗೂ ಅವಕಾಶ ನೀಡಿಲ್ಲ ಎಂದು ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನೀಡದ ಬಗ್ಗೆ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಅಷ್ಟೊಂದು ಮಹತ್ವ ಇಲ್ಲ ಎಂದು ಅವರು ಹೇಳಿದ್ದಾರೆ.

ಮತಾಂತರ ಬಿಲ್ ಪಾಸ್ ಮಾಡುವುದೇ ಇವರ ಗುರಿಯಾಗಿತ್ತು. ಬಿಲ್ ಪಾಸ್ ಮಾಡುವುದಕ್ಕೇ ಈ ಅಧಿವೇಶನವನ್ನು ಕರೆದಿದ್ದಾರೆ. 10 ‌ದಿನದಲ್ಲಿ ಕೇವಲ 52 ಗಂಟೆ ವಿಧಾನಸಭೆ ಕಲಾಪ ನಡೆದಿದೆ. ಕಾಟಾಚಾರದ ಅಧಿವೇಶನ ನಡೆಸುತ್ತಿರುವುದು ತಪ್ಪು. ವಿರೋಧ ಪಕ್ಷ ನಾಯಕರಿಗೆ ಮಾತಾಡಲು ಅವಕಾಶ ಸಿಗಲಿಲ್ಲ ಎಂದು ಬೆಳಗಾವಿಯಲ್ಲಿ ಜೆಡಿಎಸ್​​ ಶಾಸಕ ಶಿವಲಿಂಗೇಗೌಡ ಬೇಸರ ತೋಡಿಕೊಂಡಿದ್ದಾರೆ.

ಅಧಿವೇಶನ ಪ್ರಾರಂಭದಲ್ಲೆೇ ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚಿಸಬೇಕಿತ್ತು. ಉದ್ದೇಶಪೂರ್ವಕವಾಗಿ ಚರ್ಚೆ ಆಗಲಿಲ್ಲ. ಆಡಳಿತ ಪಕ್ಷದವರು ಸರಿಯಾಗಿ ಉತ್ತರ ಹೇಳಲು ಬಿಡಲಿಲ್ಲ. ಇನ್ಮುಂದೆ ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸುವುದಾದ್ರೆ ಅಧಿವೇಶನ ಕರೆಯಲಿ. ಜಾತ್ರೆ ಮಾಡೋಕೆ ಅಧಿವೇಶನ ಮಾಡೋದು ಬೇಡ. ಈ ಅಧಿವೇಶನ ಜಾತ್ರೆ ಆದಂತೆ ಆಯ್ತು. ನಮಗೆ ನಿರಾಸೆ ಆಗಿದೆ ಎಂದು ಅಧಿವೇಶನದ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ಹತ್ತು ದಿನ 52 ಗಂಟೆಗಳ ಕಾಲ ವಿಧಾನಸಭೆ ಅಧಿವೇಶನ ನಡೆಸಲಾಗಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿವರಣೆ

ಇದನ್ನೂ ಓದಿ: ಉತ್ತರ ಕರ್ನಾಟಕ ಹಾಗೂ ಬೇರೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ: ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ