AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್​ ಸಿದ್ದಪಡಿಸಲಾಗುವುದು: ಬಸವರಾಜ ಬೊಮ್ಮಾಯಿ

ಕೇಂದ್ರ, ರಾಜ್ಯದ ಯೋಜನೆ ಗಮನಿಸಿ ಬಜೆಟ್​ ಸಿದ್ಧಪಡಿಸುತ್ತೇನೆ. ಬಜೆಟ್​ನಲ್ಲಿ ಏನಾಗುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಲ್ಲಿ ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Karnataka Budget 2022: ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್​ ಸಿದ್ದಪಡಿಸಲಾಗುವುದು: ಬಸವರಾಜ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 12, 2022 | 5:03 PM

Share

ಬೆಳಗಾವಿ: ಬಜೆಟ್ ಪ್ರಕ್ರಿಯೆ ಶುರುವಾಗಿದ್ದು ಇಲಾಖಾವಾರು ಸಭೆ ನಡೆಸಿದ್ದೇನೆ. ಸೋಮವಾರ, ಮಂಗಳವಾರವೂ ಸಭೆಗಳನ್ನು ಮುಂದುವರಿಸುವೆ. ಫೆಬ್ರವರಿ 25ರ ನಂತರ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್ (Karnataka Budget)​ ಸಿದ್ದಪಡಿಸಲಾಗುವುದು. ಕೇಂದ್ರ, ರಾಜ್ಯದ ಯೋಜನೆ ಗಮನಿಸಿ ಬಜೆಟ್​ ಸಿದ್ಧಪಡಿಸುತ್ತೇನೆ. ಬಜೆಟ್​ನಲ್ಲಿ ಏನಾಗುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಲ್ಲಿ ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಕೋರ್ಟ್​ನಲ್ಲಿ, ವಾದ ಪ್ರತಿವಾದ ನಡೆಯುತ್ತಿದೆ. ಹೈಕೋರ್ಟ್​ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಸರ್ಕಾರ ಕ್ರಮವಹಿಸಲಿದೆ. ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭಿಸಬೇಕು. ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಭೇಟಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. 750 ಎಕರೆ ರಕ್ಷಣಾ ಇಲಾಖೆ ಜಾಗದ ಬಗ್ಗೆ ಮಾತಾಡಿದ್ದೇನೆ. ಬೆಳಗಾವಿಯಲ್ಲಿ‌ನ 750 ಎಕರೆ ರಕ್ಷಣಾ ಇಲಾಖೆಯ ಜಾಗದ ಬಗ್ಗೆ ಮಾತನಾಡಲಾಗಿದೆ. ಮಾಹಿತಿ ತರಿಸಿ ಶೀಘ್ರ ನಿರ್ಣಯಿಸುವುದಾಗಿ ಹೇಳಿದ್ದಾರೆ. ಮಿಲಿಟರಿ ಶಾಲೆ ರಕ್ಷಣಾ ಇಲಾಖೆ ಸುಪರ್ದಿಗೆ ಮನವಿ ಮಾಡಿದ್ದೇವೆ. ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ, ಶಾಲೆ ಪರ ಆದಷ್ಟು ಬೇಗ ನಿರ್ಣಯ ಕೈಗೊಳ್ಳುತ್ತೇವೆ ಎಂದು ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ಗೆ ಸಿದ್ಧತೆ ಆರಂಭಿಸಿದ್ದಾರೆ. ಬಜೆಟ್​ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಫೆ.9 ರಂದು ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದರು.

ಇದನ್ನೂ ಓದಿ: Karnataka Budget 2022: ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ: ಕಂದಾಯ ಸಚಿವ ಆರ್ ಅಶೋಕ್ ಜೊತೆ ಸಭೆ

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

Published On - 4:44 pm, Sat, 12 February 22

Follow Us
Web contact
Web contact

TV9 Kannada

Read More
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ