AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲ ಅಧಿವೇಶನ: ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ

ಬೆಳಗಾವಿಯಲ್ಲಿ ನಡೆಯಲಿರುವ 2024ರ ಚಳಿಗಾಲದ ಅಧಿವೇಶನದ ಸಮಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳ ಆಯೋಜಿಸಲು ಯೋಜಿಸಿದೆ. ಉದ್ಧವ್ ಠಾಕ್ರೆ ಬಣದ ಶಿವಸೇನೆ ಈ ಮೇಳಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಗಡಿ ವಿವಾದ ಹಿನ್ನೆಲೆಯಲ್ಲಿ ಈ ಘಟನೆಗಳು ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಚಳಿಗಾಲ ಅಧಿವೇಶನ: ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ
ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ
Sahadev Mane
| Edited By: |

Updated on:Dec 04, 2024 | 9:23 AM

Share

ಬೆಳಗಾವಿ, ಡಿಸೆಂಬರ್​ 04: ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ ಡಿಸೆಂಬರ್​ 9 ರಿಂದ 20ವರೆಗೆ 2024ನೇ ಸಾಲಿನ ಚಳಿಗಾಲದ ಅಧಿವೇಶನ (Winter session) ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಬೆಳಗಾವಿಯಲ್ಲಿ ಮಹಾಮೇಳ ನಡೆಸಲು ಮುಂದಾಗಿದೆ. ಎಂಇಎಸ್​ನ ಮಹಾಮೇಳಕ್ಕೆ ಉದ್ಧವ ಠಾಕ್ರೆ ಬಣದ ಶಿವಸೇನೆ ಬೆಂಬಲ ವ್ಯಕ್ತಪಡಿಸಿದೆ. ಅಧಿವೇಶನ ಮೊದಲ ದಿನವೇ ಅನುಮತಿ ಇಲ್ಲದೆ ​ಮಹಾಮೇಳ ನಡೆಸಲು ಎಂಇಎಸ್ ಸಿದ್ಧತೆ ನಡೆಸಿದೆ.

ಈ ಮಹಾಮೇಳ ನಡೆಸಲು ಅನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕೆಂದು ಕೊಲ್ಲಾಪುರ ಜಿಲ್ಲಾಧಿಕಾರಿಗೆ ಉದ್ಧವ ಠಾಕ್ರೆ ಬಣದ ಶಿವಸೇನೆ ಮನವಿ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಆದರೆ, ಬೆಳಗಾವಿಯಲ್ಲಿ ಮಹಾಮೇಳ ಮಾಡಲು ಎಂಇಎಸ್​ಗೆ ಮೂರು ವರ್ಷದಿಂದ ಅಲ್ಲಿನ ಜಿಲ್ಲಾಡಳಿತ ಅನಮತಿ ನೀಡುತ್ತಿಲ್ಲ. ಮಹಾರಾಷ್ಟ್ರದ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸುತ್ತಿದ್ದಾರೆ. ಈ ಬಾರಿ ಎಂಇಎಸ್ ಮಹಾಮೇಳಕ್ಕೆ ಮತ್ತು ಮಹಾರಾಷ್ಟ್ರ ನಾಯಕರು ಬೆಳಗಾವಿ ಪ್ರವೇಶಕ್ಕೆ ಅನುಮತಿ ಕೊಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಈ ಬಾರಿಯೂ ಎಂಇಎಸ್ ಮಹಾಮೇಳಗೆ ಅನುಮತಿ ಕೊಡದಿದ್ದರೇ, ಮಹಾರಾಷ್ಟ್ರದಲ್ಲಿರುವ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನಕ್ಕೆ ಬರುವ ಕರ್ನಾಟಕದ ಸಚಿವರು ಮತ್ತು ಶಾಸಕರಿಗೆ ನಾವು ಅಡ್ಡಿ ಪಡಿಸುತ್ತೇವೆ. ಡಿಸೆಂಬರ್ 9 ರಂದು ಎರಡೂ ರಾಜ್ಯಗಳ ಮಧ್ಯದ ರಸ್ತೆ ಬಂದ್ ಮಾಡುತ್ತೇವೆ. ಕರ್ನಾಟಕದ ರಾಜಕಾರಣಿಗಳು ಮಹಾರಾಷ್ಟ್ರ ಪ್ರವೇಶ ಮಾಡಲು ಬಿಡುವುದಿಲ್ಲ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದೆ. ಈ ಮೂಲಕ ಉದ್ಧವ ಠಾಕ್ರೆ ಬಣದ ಶಿವಸೇನೆ ಪರೋಕ್ಷವಾಗಿ ಕರ್ನಾಟಕ ಸರ್ಕಾರಕ್ಕೆ ಧಮ್ಕಿ ಹಾಕಿದೆ.

ಗಡಿ ವಿಚಾರವಾಗಿ ಎಂಇಎಸ್​ ಕರ್ನಾಟಕದ ಜೊತೆ ಕ್ಯಾತೆ ತೆಗೆಯುತ್ತಾ ಬಂದಿದೆ. ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್​ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಮುಂದಾಗುತ್ತದೆ. ಆದರೆ, ಬೆಳಗಾವಿ ಜಿಲ್ಲಾಧಿಕಾರಿಯವರು ಇದಕ್ಕೆ ಅನುಮತಿ ನೀಡುವುದಿಲ್ಲ. ಅನುಮತಿ ಇಲ್ಲದಿದ್ದರೂ ಎಂಇಎಸ್​ ಕರಾಳ ದಿನಾಚರಣೆ ಆಚರಿಸುತ್ತದೆ.

1,500 ಮಂದಿ ವಿರುದ್ಧ ದೂರು

ಈ ಬಾರಿ ಕನ್ನಡ ರಾಜ್ಯೋತ್ಸವ ದಿನ ಕರಾಳ ದಿನ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಮಹರಾಷ್ಟ್ರ ಏಕೀಕರಣ ಸಮಿತಿಯ 46 ಜನ ಮುಖಂಡರು ಸೇರಿದಂತೆ 1,500 ಜನರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಾಜಿ ಶಾಸಕ ಮನೋಹರ ಕಿಣೇಕರ, ಎಮ್​ಇಡಿ ಮುಖಂಡ ಶುಭಂ ಶಳಕೆ, ರಮಾಕಾಂತ ಕೊಂಡುಸ್ಕರ, ವಿಕಾಸ ಕಲಘಟಗಿ ಶಿವಸೇನೆ ಮುಖಂಡ ಪ್ರಕಾಶ ಮರಗಾಳೆ ಸೇರಿದಂತೆ 46 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Wed, 4 December 24

ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ