AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲ ಅಧಿವೇಶನ: ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ

ಬೆಳಗಾವಿಯಲ್ಲಿ ನಡೆಯಲಿರುವ 2024ರ ಚಳಿಗಾಲದ ಅಧಿವೇಶನದ ಸಮಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳ ಆಯೋಜಿಸಲು ಯೋಜಿಸಿದೆ. ಉದ್ಧವ್ ಠಾಕ್ರೆ ಬಣದ ಶಿವಸೇನೆ ಈ ಮೇಳಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಗಡಿ ವಿವಾದ ಹಿನ್ನೆಲೆಯಲ್ಲಿ ಈ ಘಟನೆಗಳು ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಚಳಿಗಾಲ ಅಧಿವೇಶನ: ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ
ಬೆಳಗಾವಿಯಲ್ಲಿ ಎಂಇಎಸ್​ ಮಹಾಮೇಳಕ್ಕೆ ಶಿವಸೇನೆ ಬೆಂಬಲ
Sahadev Mane
| Edited By: |

Updated on:Dec 04, 2024 | 9:23 AM

Share

ಬೆಳಗಾವಿ, ಡಿಸೆಂಬರ್​ 04: ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ ಡಿಸೆಂಬರ್​ 9 ರಿಂದ 20ವರೆಗೆ 2024ನೇ ಸಾಲಿನ ಚಳಿಗಾಲದ ಅಧಿವೇಶನ (Winter session) ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಬೆಳಗಾವಿಯಲ್ಲಿ ಮಹಾಮೇಳ ನಡೆಸಲು ಮುಂದಾಗಿದೆ. ಎಂಇಎಸ್​ನ ಮಹಾಮೇಳಕ್ಕೆ ಉದ್ಧವ ಠಾಕ್ರೆ ಬಣದ ಶಿವಸೇನೆ ಬೆಂಬಲ ವ್ಯಕ್ತಪಡಿಸಿದೆ. ಅಧಿವೇಶನ ಮೊದಲ ದಿನವೇ ಅನುಮತಿ ಇಲ್ಲದೆ ​ಮಹಾಮೇಳ ನಡೆಸಲು ಎಂಇಎಸ್ ಸಿದ್ಧತೆ ನಡೆಸಿದೆ.

ಈ ಮಹಾಮೇಳ ನಡೆಸಲು ಅನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕೆಂದು ಕೊಲ್ಲಾಪುರ ಜಿಲ್ಲಾಧಿಕಾರಿಗೆ ಉದ್ಧವ ಠಾಕ್ರೆ ಬಣದ ಶಿವಸೇನೆ ಮನವಿ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಆದರೆ, ಬೆಳಗಾವಿಯಲ್ಲಿ ಮಹಾಮೇಳ ಮಾಡಲು ಎಂಇಎಸ್​ಗೆ ಮೂರು ವರ್ಷದಿಂದ ಅಲ್ಲಿನ ಜಿಲ್ಲಾಡಳಿತ ಅನಮತಿ ನೀಡುತ್ತಿಲ್ಲ. ಮಹಾರಾಷ್ಟ್ರದ ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸುತ್ತಿದ್ದಾರೆ. ಈ ಬಾರಿ ಎಂಇಎಸ್ ಮಹಾಮೇಳಕ್ಕೆ ಮತ್ತು ಮಹಾರಾಷ್ಟ್ರ ನಾಯಕರು ಬೆಳಗಾವಿ ಪ್ರವೇಶಕ್ಕೆ ಅನುಮತಿ ಕೊಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಈ ಬಾರಿಯೂ ಎಂಇಎಸ್ ಮಹಾಮೇಳಗೆ ಅನುಮತಿ ಕೊಡದಿದ್ದರೇ, ಮಹಾರಾಷ್ಟ್ರದಲ್ಲಿರುವ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನಕ್ಕೆ ಬರುವ ಕರ್ನಾಟಕದ ಸಚಿವರು ಮತ್ತು ಶಾಸಕರಿಗೆ ನಾವು ಅಡ್ಡಿ ಪಡಿಸುತ್ತೇವೆ. ಡಿಸೆಂಬರ್ 9 ರಂದು ಎರಡೂ ರಾಜ್ಯಗಳ ಮಧ್ಯದ ರಸ್ತೆ ಬಂದ್ ಮಾಡುತ್ತೇವೆ. ಕರ್ನಾಟಕದ ರಾಜಕಾರಣಿಗಳು ಮಹಾರಾಷ್ಟ್ರ ಪ್ರವೇಶ ಮಾಡಲು ಬಿಡುವುದಿಲ್ಲ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದೆ. ಈ ಮೂಲಕ ಉದ್ಧವ ಠಾಕ್ರೆ ಬಣದ ಶಿವಸೇನೆ ಪರೋಕ್ಷವಾಗಿ ಕರ್ನಾಟಕ ಸರ್ಕಾರಕ್ಕೆ ಧಮ್ಕಿ ಹಾಕಿದೆ.

ಗಡಿ ವಿಚಾರವಾಗಿ ಎಂಇಎಸ್​ ಕರ್ನಾಟಕದ ಜೊತೆ ಕ್ಯಾತೆ ತೆಗೆಯುತ್ತಾ ಬಂದಿದೆ. ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್​ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಮುಂದಾಗುತ್ತದೆ. ಆದರೆ, ಬೆಳಗಾವಿ ಜಿಲ್ಲಾಧಿಕಾರಿಯವರು ಇದಕ್ಕೆ ಅನುಮತಿ ನೀಡುವುದಿಲ್ಲ. ಅನುಮತಿ ಇಲ್ಲದಿದ್ದರೂ ಎಂಇಎಸ್​ ಕರಾಳ ದಿನಾಚರಣೆ ಆಚರಿಸುತ್ತದೆ.

1,500 ಮಂದಿ ವಿರುದ್ಧ ದೂರು

ಈ ಬಾರಿ ಕನ್ನಡ ರಾಜ್ಯೋತ್ಸವ ದಿನ ಕರಾಳ ದಿನ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಮಹರಾಷ್ಟ್ರ ಏಕೀಕರಣ ಸಮಿತಿಯ 46 ಜನ ಮುಖಂಡರು ಸೇರಿದಂತೆ 1,500 ಜನರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಾಜಿ ಶಾಸಕ ಮನೋಹರ ಕಿಣೇಕರ, ಎಮ್​ಇಡಿ ಮುಖಂಡ ಶುಭಂ ಶಳಕೆ, ರಮಾಕಾಂತ ಕೊಂಡುಸ್ಕರ, ವಿಕಾಸ ಕಲಘಟಗಿ ಶಿವಸೇನೆ ಮುಖಂಡ ಪ್ರಕಾಶ ಮರಗಾಳೆ ಸೇರಿದಂತೆ 46 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Wed, 4 December 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ