ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಚಾಲನೆ: ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಿತೇನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ನಿತಿನ್ ಗಡ್ಕರಿ ಅಂದರೆ ‘ಸಡಕ್ ಕೆ ಭಾಷಾ’ ಎಂದು ಕೊಂಡಾಡಿದ್ದಾರೆ. 

ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಚಾಲನೆ: ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ‌, ಸಚಿವ ನಿತಿನ್ ಗಡ್ಕರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 22, 2024 | 3:27 PM

ಬೆಳಗಾವಿ, ಫೆಬ್ರವರಿ 22: 6,975 ಕೋಟಿ ರೂ. ಮೌಲ್ಯದ 400 ಕಿ.ಮೀ. ರಸ್ತೆ ಕಾಮಗಾರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ವಿವಿಧ ಯೋಜನೆಗಳಿಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಕೇಂದ್ರ ಸಚಿವ ನಿತೇನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರನ್ನು ನೋಡಿದರೆ ಹೆಮ್ಮೆ ಆಗುತ್ತದೆ. ನಿತಿನ್ ಗಡ್ಕರಿ ಅಂದರೆ ಸಡಕ್ ಕೆ ಭಾಷಾ ಎಂದು ಕೊಂಡಾಡಿದ್ದಾರೆ.

ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ

ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುತ್ತಾರೆ. ಕಳೆದ 9 ತಿಂಗಳಲ್ಲಿ 5 ಬಾರಿ ಗಡ್ಕರಿ ಅವರನ್ನ ಭೇಟಿ ಮಾಡಿರುವೆ. ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನ ಕಾರ್ಯರೂಪಕ್ಕೆ ತರಲು ಸೂಚಿಸಿದ್ದಾರೆ. ಅದರಲ್ಲಿ ಕೆಲವೊಂದಿಷ್ಟು ಕಾಮಗಾರಿ ಆರಂಭ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್; 376 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಶಂಕು ಸ್ಥಾಪನೆ

ಕೇಂದ್ರ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗ ದ್ವೇಷದ ಭಾವನೆ ಇರುತ್ತದೆ. ಆದರೆ ನಿತಿನ್ ಗಡ್ಕರಿ ಅವರ ಸಚಿವಾಲಯದಲ್ಲಿ ಹಾಗಾಗಿಲ್ಲ. ಅದು ನಮಗೆ ನಮ್ಮದೇ ಸರ್ಕಾರ ಎನ್ನುವ ಭಾವನೆ ಬರುತ್ತದೆ. ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ. ಇದೇ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಬಿಜೆಪಿ, ಕಾಂಗ್ರೆಸ್ ಶಾಸಕರಿಗೆ ಸಮಾನ ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಗೋಕಾಕ ಫಾಲ್ಸ್, ಬೆಳಗಾವಿ ನಗರದ ಅಭಿವೃದ್ಧಿಗೆ ಸಹ ಕೊಡುತ್ತೇವೆ. ಕೇಂದ್ರ ಸಾರಿಗೆ ಸಚಿವಾಲಯದಿಂದ ರಾಜ್ಯದ ರಸ್ತೆಗಳು ಸುಧಾರಣೆ ಆಗಬೇಕು. ಈ ರಸ್ತೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗಬೇಕು. ಇದರಿಂದ ಅನೇಕ ಉದ್ಯಮಿಗಳು ಬರಬೇಕೆಂದು ಕೇಂದ್ರ ಸರ್ಕಾರ ಕನಸಿದೆ ಎಂದಿದ್ದಾರೆ.

ಇದನ್ನೂ ಓದಿ: Pralhad Joshi: ಕರ್ನಾಟಕ ಸೇರಿದಂತೆ ದೇಶದ ವಿವಿಗಳಿಗೆ ಕೇಂದ್ರದಿಂದ 3600 ಕೋಟಿ ರೂ. ಅನುದಾನ ಬಿಡುಗಡೆ: ಪ್ರಲ್ಹಾದ್ ಜೋಶಿ

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಎಲ್ಲ ಜಿಲ್ಲೆಗಳ‌ 376 ಕಿ.ಮೀ ಉದ್ದದ ರಸ್ತೆಗಳಿಗೆ 6975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಈರಣ್ಣ ಕಡಾಡಿ, ಮಂಗಳಾ ಅಂಗಡಿ ಅಮರೇಶ ನಾಯಕ್, ಕರಡಿ ಸಂಗಣ್ಣ, ಪಿ.ಸಿ.ಗದ್ದಿಗೌಡರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Thu, 22 February 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ