AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಿಬಿಐ ದಾಳಿಯಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅನುಮಾನಾಸ್ಪದ ಸಾವು

2019ರ ಉದ್ಯೋಗಿಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಇತ್ತೀಚೆಗೆ ದಾಳಿ ನಡೆಸಿತ್ತು. ಇದಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಳಗಾವಿ: ಸಿಬಿಐ ದಾಳಿಯಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರ
Sahadev Mane
| Edited By: |

Updated on:Nov 25, 2023 | 6:26 PM

Share

ಬೆಳಗಾವಿ, ನವೆಂಬರ್ 25: ಬೆಳಗಾವಿ ದಂಡು ಮಂಡಳಿಯ (Belagavi Cantonment Board) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ ಆನಂದ್ (K Anand) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರ ಮೃತದೇಹ ಶನಿವಾರ ಬೆಳಗ್ಗೆ ದಂಡು ಮಂಡಳಿಯ ಕ್ಯಾಂಪಸ್​​ನಲ್ಲಿರುವ ಅಧಿಕೃತ ಕ್ವಾರ್ಟರ್ಸ್​ನಲ್ಲಿ ಪತ್ತೆಯಾಗಿದೆ. ಚೆನ್ನೈ ಮೂಲದ ಐಡಿಇಎಸ್ ಶ್ರೇಣಿಯ ಅಧಿಕಾರಿ ಆನಂದ್ ಅವರು (40) ಸುಮಾರು ಒಂದೂವರೆ ವರ್ಷದ ಹಿಂದೆ ನೇಮಕಗೊಂಡಿದ್ದರು. ಅವರು ಒಂಟಿಯಾಗಿ ವಾಸವಾಗಿದ್ದರು.

ಶನಿವಾರ ಬೆಳಗ್ಗೆ ನಿತ್ಯ ಕೆಲಸ ನಿಮಿತ್ತ ಸಿಬ್ಬಂದಿ ಕ್ವಾರ್ಟರ್ಸ್‌ಗೆ ಬಂದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

2019ರ ಉದ್ಯೋಗಿಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಇತ್ತೀಚೆಗೆ ದಾಳಿ ನಡೆಸಿತ್ತು.

ಇದನ್ನೂ ಓದಿ: ನೇಮಕಾತಿ ಅಕ್ರಮ ಆರೋಪ: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ದಾಳಿ

ನೇಮಕಾತಿ ಅಕ್ರಮ ವಿಚಾರ ಇತ್ತೀಚೆಗೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಗೆ ಖುದ್ದು ಸಿಬಿಐ ಅಧಿಕಾರಿಗಳೇ ಬಂದಿದ್ದರು. ಸ್ಥಳೀಯ ಮಟ್ಟದ ಅಧಿಕಾರಿಗಳನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ದಂಡು ಮಂಡಳಿಯ ವಿರುದ್ಧ, ಕ್ಲರ್ಕ್ ಹಾಗೂ ಸ್ಟೇನೋಗ್ರಾಫರ್ ಪರೀಕ್ಷೆಯಲ್ಲೂ ಸಹ ಅಕ್ರಮದ ಆರೋಪ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನೂ ಪರಿಶೀಲನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Sat, 25 November 23

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು