AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ: ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ರಾಯಬಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಭಯಾನಕ ಘಟನೆ ನಡೆದಿದೆ. ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛಗೊಳಿಸಲು ಹೇಳಿದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಶಿಕ್ಷಕಿ, ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕೋಡಿ: ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಚಿಕ್ಕೋಡಿ: ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಸಹದೇವ್​ ಮಾನೆ
| Edited By: |

Updated on: Jan 12, 2025 | 3:36 PM

Share

ಚಿಕ್ಕೋಡಿ, ಜನವರಿ 12: ಅಂಗನವಾಡಿಯಲ್ಲಿ (Anganwadi) ಕೆಲಸ ಮಾಡುವ ಮಹಿಳಾ ಅಡುಗೆ ಸಹಾಯಕಿ ಗಂಡನಿಂದ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.

ಇದನ್ನೂ ಓದಿ: ಕೂಲಿಗಾಗಿ ಬೆಂಗಳೂರಿಗೆ ವಲಸೆ ಹೋಗುತ್ತಿದ್ದವರು ನಡು ದಾರಿಯಲ್ಲೇ ದುರಂತ ಸಾವು

ಇದೇ‌ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್​​ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಸದ್ಯ ಜೀವ ಭಯ ಇದೆ ರಕ್ಷಣೆ ನೀಡಿ ಅಂತಾ ಶಿಕ್ಷಕಿ ಕುಟುಂಬ ಕಣ್ಣೀರಿಡುತ್ತಿದೆ.

ಕಟ್ಟಿಕೊಂಡ ಹೆಂಡತಿಗೆ ವೈದ್ಯ ಪತಿಯಿಂದ ಟಾರ್ಚರ್

ಚಿಕ್ಕಮಗಳೂರು ನಗರದ ದೋಣಿಕಣ ಸಮೀಪದ ಮನೆಯಲ್ಲಿ ವೈದ್ಯ ತನ್ನ ಪತ್ನಿ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿ ಕಿರುಕುಳ ಕೊಡುತ್ತಿದ್ದರೆಂದು, ಅದರಲ್ಲೂ ಹುಚ್ಚಿ ಎಂದು ಬಿಂಬಿಸಿ ಮಾನಸಿಕ ಜೊತೆಯಲ್ಲಿ ದೈಹಿಕ ಕಿರುಕುಳವನ್ನು ನೀಡಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದ.

ಇದನ್ನೂ ಓದಿ: ಗಂಡ್ಮಕ್ಳು ಮಾತ್ರ ಕೆಟ್ಟವರು, ಹುಡ್ಗಿರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ..ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ

ಮಹಿಳೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿತ್ತು. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದರು. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ ಎನ್ನಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ