AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ

ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟು‌ವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ವೇಳೆ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟು‌ಗೆ ಬುದ್ಧಿವಾದ ಹೇಳಿ ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಇದೀಗ ಈ ನಾಡದ್ರೋಹಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ
ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ
Sahadev Mane
| Edited By: |

Updated on:Mar 12, 2024 | 11:03 PM

Share

ಬೆಳಗಾವಿ, ಮಾ.12: ನಾಡದ್ರೋಹಿ ಎಂಇಎಸ್​ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದವರನ್ನ ಬೆಳಗಾವಿ(Belagavi)ಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಎಂಇಎಸ್​ನ ಶುಭಂ ಶಳಕೆ ಸೇರಿ ಮೂವರು ಎರಡು ದಿನಗಳ ಹಿಂದೆ ಉದ್ಯಮಿ ಶ್ರೀಕಾಂತ್ ದೇಸಾಯಿ ಎಂಬುವವರ ಕಾರ್ಖಾನೆ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದರು. ಈ ಹಿನ್ನಲೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಮೂವರನ್ನು ಬಂಧಿಸಲಾಗಿದೆ.

ಕುಸ್ತಿ ಅಖಾಡದಲ್ಲೂ ‘ಜೈ ಮಹಾರಾಷ್ಟ್ರ’ ಎಂದಿದ್ದ ಕುಸ್ತಿಪಟು‌

ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟು‌ವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ವೇಳೆ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟು‌ಗೆ ಬುದ್ಧಿವಾದ ಹೇಳಿ ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಅಷ್ಟೇ ಅಲ್ಲ, ಫ್ಲೆಕ್ಸ್ ಹರಿದು ಜೈ ಮಹಾರಾಷ್ಟ್ರ ಎಂದು ಗೋಡೆ ಬರಹ ಕೂಡ ಬರೆದಿದ್ದರು. ಇತ್ತ ಭಾಷಾ ವೈಷಮ್ಯ ಭಿತ್ತುವ ನಿಟ್ಟಿನಲ್ಲಿ ಶುಭಂ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಕೂಡಲೇ ಎಚ್ಚೆತ್ತ ಡಿಸಿಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ಮೂವರು ನಾಡದ್ರೋಹಿಗಳನ್ನ ಬಂಧಿಸಿ  ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ:ಜೈ ಮಹಾರಾಷ್ಟ್ರ ಎಂದವನಿಗೆ ಬುದ್ಧಿವಾದ ಹೇಳಿದ್ದಕ್ಕೆ ಉದ್ಯಮಿ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆಗೆ ಯತ್ನ

ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಈ ವೇಳೆ ಮೈಕ್​ನಲ್ಲಿ ಜೈ ಶಿವಾಜಿ, ಜೈ ಮಹಾರಾಷ್ಟ್ರ ಎಂದು ಕುಸ್ತಿಪಟು ಘೋಷಣೆ ಕೂಗಿದನು. ಉದ್ಯಮಿ ಶ್ರೀಕಾಂತ್ ತಕ್ಷಣ ಕುಸ್ತಿಪಟುವಿನಿಂದ ಮೈಕ್ ಕಿತ್ತುಕೊಂಡಿದ್ದಾರೆ. ನಾವು ಒಂದೇ ನಾಡಿನ ಮಕ್ಕಳು, ನಾವೆಲ್ಲ ಸಹೋದರರಂತೆ. ಇಷ್ಟೇ ಅಲ್ಲದೆ ನೀನು ಸಮಸ್ಯೆ ಸೃಷ್ಟಿ ಮಾಡುತ್ತಿದ್ದೀಯಾ ಎಂದು ಬುದ್ದಿವಾದ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Tue, 12 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್