AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ

ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟು‌ವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ವೇಳೆ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟು‌ಗೆ ಬುದ್ಧಿವಾದ ಹೇಳಿ ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಇದೀಗ ಈ ನಾಡದ್ರೋಹಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ
ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 12, 2024 | 11:03 PM

Share

ಬೆಳಗಾವಿ, ಮಾ.12: ನಾಡದ್ರೋಹಿ ಎಂಇಎಸ್​ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದವರನ್ನ ಬೆಳಗಾವಿ(Belagavi)ಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಎಂಇಎಸ್​ನ ಶುಭಂ ಶಳಕೆ ಸೇರಿ ಮೂವರು ಎರಡು ದಿನಗಳ ಹಿಂದೆ ಉದ್ಯಮಿ ಶ್ರೀಕಾಂತ್ ದೇಸಾಯಿ ಎಂಬುವವರ ಕಾರ್ಖಾನೆ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದರು. ಈ ಹಿನ್ನಲೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಮೂವರನ್ನು ಬಂಧಿಸಲಾಗಿದೆ.

ಕುಸ್ತಿ ಅಖಾಡದಲ್ಲೂ ‘ಜೈ ಮಹಾರಾಷ್ಟ್ರ’ ಎಂದಿದ್ದ ಕುಸ್ತಿಪಟು‌

ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟು‌ವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ವೇಳೆ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟು‌ಗೆ ಬುದ್ಧಿವಾದ ಹೇಳಿ ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಅಷ್ಟೇ ಅಲ್ಲ, ಫ್ಲೆಕ್ಸ್ ಹರಿದು ಜೈ ಮಹಾರಾಷ್ಟ್ರ ಎಂದು ಗೋಡೆ ಬರಹ ಕೂಡ ಬರೆದಿದ್ದರು. ಇತ್ತ ಭಾಷಾ ವೈಷಮ್ಯ ಭಿತ್ತುವ ನಿಟ್ಟಿನಲ್ಲಿ ಶುಭಂ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಕೂಡಲೇ ಎಚ್ಚೆತ್ತ ಡಿಸಿಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ಮೂವರು ನಾಡದ್ರೋಹಿಗಳನ್ನ ಬಂಧಿಸಿ  ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ:ಜೈ ಮಹಾರಾಷ್ಟ್ರ ಎಂದವನಿಗೆ ಬುದ್ಧಿವಾದ ಹೇಳಿದ್ದಕ್ಕೆ ಉದ್ಯಮಿ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆಗೆ ಯತ್ನ

ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಈ ವೇಳೆ ಮೈಕ್​ನಲ್ಲಿ ಜೈ ಶಿವಾಜಿ, ಜೈ ಮಹಾರಾಷ್ಟ್ರ ಎಂದು ಕುಸ್ತಿಪಟು ಘೋಷಣೆ ಕೂಗಿದನು. ಉದ್ಯಮಿ ಶ್ರೀಕಾಂತ್ ತಕ್ಷಣ ಕುಸ್ತಿಪಟುವಿನಿಂದ ಮೈಕ್ ಕಿತ್ತುಕೊಂಡಿದ್ದಾರೆ. ನಾವು ಒಂದೇ ನಾಡಿನ ಮಕ್ಕಳು, ನಾವೆಲ್ಲ ಸಹೋದರರಂತೆ. ಇಷ್ಟೇ ಅಲ್ಲದೆ ನೀನು ಸಮಸ್ಯೆ ಸೃಷ್ಟಿ ಮಾಡುತ್ತಿದ್ದೀಯಾ ಎಂದು ಬುದ್ದಿವಾದ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Tue, 12 March 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ