AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕಸದ ತೊಟ್ಟಿಯಲ್ಲಿ ಸಿಕ್ಕ ವಿಶೇಷ ಚೇತನ ಕಂದನಿಗೆ ಇಟಲಿ ದಂಪತಿಯ ಅಪ್ಪುಗೆ

ಬೆಳಗಾವಿಯಲ್ಲಿ ಕಸದ ತೊಟ್ಟಿಯಲ್ಲಿ ಸಿಕ್ಕ ವಿಶೇಷ ಚೇತನ ಮಗುವನ್ನು ಇಟಲಿಯ ದಂಪತಿ ದತ್ತು ಪಡೆದಿದ್ದಾರೆ. ದಂಪತಿ ಶಿಶುವಿನ ಆರೈಕೆ ಮತ್ತು ಚಿಕಿತ್ಸೆಯಲ್ಲೂ ಸಹಾಯ ಮಾಡಿದ್ದಾರೆ. ಚಿಕ್ಕುಂಬಿ ಮಠದ ಅನಾಥಾಶ್ರಮದಿಂದ ವಿದೇಶಕ್ಕೆ ಹೋದ 13ನೇ ಮಗು ಇದಾಗಿದೆ. ಇಟಲಿ ದಂಪತಿಯ ಮಾನವೀಯ ಕ್ರಿಯೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಕಸದ ತೊಟ್ಟಿಯಲ್ಲಿ ಸಿಕ್ಕ ವಿಶೇಷ ಚೇತನ ಕಂದನಿಗೆ ಇಟಲಿ ದಂಪತಿಯ ಅಪ್ಪುಗೆ
ವಿಶೇಷ ಚೇತನ ಕಂದನಿಗೆ ಇಟಲಿ ದಂಪತಿಯ ಅಪ್ಪುಗೆ
Sahadev Mane
| Edited By: |

Updated on:Feb 18, 2025 | 10:52 AM

Share

ಬೆಳಗಾವಿ, ಫೆಬ್ರವರಿ 18: ಕಸದ ತೊಟ್ಟಿಯಲ್ಲಿ ಸಿಕ್ಕ ಮಗುವನ್ನು ಇಟಲಿ (Italy) ಮೂಲದ ದಂಪತಿ ದತ್ತು ಪಡೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ಕಂದಮ್ಮ ಬೆಳಗಾವಿಯಿಂದ (Belagavi) ಇಟಲಿಗೆ ಹಾರಿದೆ.

ವಿಶೇಷ ಚೇತನ ಎಂಬ ಕಾರಣಕ್ಕೆ ಹೆತ್ತವರು ಎರಡು ವರ್ಷದ ಹಿಂದೆ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದು ಹೋಗಿದ್ದರು. ಆಗ, ಸ್ಥಳೀಯರ ಮಾಹಿತಿ ಮೇರೆಗೆ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಮಗು ಬೆಳಗಾವಿಯ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿ ಮಠದ ಕೇಂದ್ರದ (ಅನಾಥಾಶ್ರಮ) ಆರೈಕೆಯಲ್ಲಿತ್ತು.

ಆಶ್ರಮದಲ್ಲಿನ ಯಾವುದಾರು ಒಂದು ಮಗುವನ್ನು ದತ್ತು ಪಡೆಯಲು ನಿರ್ಧರಿಸಿದ್ದ ಇಟಲಿ ದಂಪತಿ ಆರು ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ದರು. ಒಂದು ವರ್ಷದ ಹಿಂದೆ ವಿಶೇಷ ಚೇತನ ಮಗುವಿನ ಬಗ್ಗೆ ಆಶ್ರಮದಿಂದ ಮಾಹಿತಿ ಪಡೆದಿದ್ದರು. ಬಳಿಕ, ವಿಶೇಷ ಚೇತನ ಮಗುವಿನ ಆರೈಕೆ, ಚಿಕಿತ್ಸೆಗೆ ಇಟಲಿ ಮೂಲದ ಪಿಜಿಷಿಯನ್ ಡಾ.ಕೂಸ್ತಾಂನ್ಸಾ ಮತ್ತು ಬುಯಾರ್ ಡೆಡೆ ದಂಪತಿ ಸಹಾಯ ಮಾಡುತ್ತಿದ್ದರು.

ಇದೀಗ, ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಂಡ ಹಿನ್ನೆಲೆಯನ್ನು ದಂಪತಿ ಮಗುವನ್ನು ದತ್ತು ಪಡೆದಿದ್ದಾರೆ. ಬೆಳಗಾವಿಯ ಚಿಕ್ಕುಂಬಿ ಮಠದ ಆಶ್ರಮದಿಂದ ವಿದೇಶಕ್ಕೆ ಹಾರಿರುವ 13 ನೇ ಮಗು ಇದಾಗಿದೆ.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಹುಲಿ ದತ್ತು ಪಡೆದ ಸಂಯುಕ್ತಾ ಹೊರನಾಡು

“ನಂಬಿಕಸ್ಥರು, ಸುಸಂಸ್ಕೃತರೆಂಬ ಕಾರಣಕ್ಕೆ ಭಾರತೀಯ ಮಗು ದತ್ತು ಪಡೆಯುತ್ತಿದ್ದೇವೆ. ವಿಶೇಷ ಚೇತನ ಮಗುವಿನ ಭವಿಷ್ಯ ರೂಪಿಸಿದ ಧನ್ಯತೆಯ ಕಾರಣಕ್ಕೆ ನಮ್ಮ ಆಯ್ಕೆ ಇದಾಗಿದೆ” ಎಂದು ಡಾ.ಕೂಸ್ತಾಂನ್ಸಾ ದಂಪತಿ ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Tue, 18 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್