Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ-ಮಗಳು ಸೇರಿದಂತೆ ಬೆಳಗಾವಿಯ ನಾಲ್ವರು ದುರಂತ ಸಾವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು(ಜನವರಿ 29) ಕಾಲ್ತುಳಿತ‌ ಸಂಭವಿಸಿದ್ದು, ಇದರಲ್ಲಿ ಹಲವರು ಸಾವನ್ನಪ್ಪಿದ್ದು, ಇನ್ನು ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಕಾಲ್ತುಳಿತ‌ದಲ್ಲಿ ಕಾಣೆಯಾಗಿದ್ದ ಬೆಳಗಾವಿಯ ಇಬ್ಬರು ತಾಯಿ ಮಗಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ ಎಮದು ತಿಳಿದುಬಂದಿದೆ.

ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ-ಮಗಳು ಸೇರಿದಂತೆ ಬೆಳಗಾವಿಯ ನಾಲ್ವರು ದುರಂತ ಸಾವು
ಅರುಣ್, ಜ್ಯೋತಿ, ಮೇಘಾ
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on:Jan 29, 2025 | 4:48 PM

ಪ್ರಯಾಗ್‌ರಾಜ್‌/ಬೆಳಗಾವಿ, (ಜನವರಿ 29): ಮಹಾ ಕುಂಭಮೇಳದಲ್ಲಿಸಂಭವಿಸಿದ ಕಾಲ್ತುಳಿತದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮಿಸ್ಸಿಂಗ್ ಎಂದು ಬೆಳಿಗ್ಗೆಯಿಂದಲೇ ಸುದ್ದಿಯಾಗಿತ್ತು. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು ಪುತ್ರಿ ಮೇಘಾ ಹತ್ತರವಾಠ್‌ (25) ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ಆದ್ರೆ ಇದೀಗ ಈ ಇಬ್ಬರೂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎನ್ಜುವ ಮಾಹಿತಿ ತಿಳಿದುಬಂದಿದೆ. ಇನ್ನು ಇಬ್ಬರು ಮೃತಪಟ್ಟಿರುವ ಬಗ್ಗೆ ಕುಟುಂಬಸ್ಥರು ಖಚಿತಪಡಿಸಿದ್ದಾರೆ.

ಕಾಲ್ತುಳಿತದ ಬಳಿಕ ಇಂದು‌‌ ಬೆಳಗ್ಗೆ ತಾಯಿ-ಮಗಳನ್ನು ಪ್ರಯಾಗ್‌ರಾಜ್‌ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮಗಳು ಕೊನೆಯುಸಿರೆಳೆದಿದ್ದಾರೆ. ಚಿದಂಬರ್ ಎಂಬುವವರು ಅವರ ಜೊತೆಗೆ ಇರುವವರಿಂದ ಮಾಹಿತಿ ಸಿಕ್ಕಿದೆ. ಮೃತಪಟ್ಟಿದ್ದಾರೆ ಎಂದು ಅವರ ಜೊತೆಗೆ ಇದ್ದ ಚಿದಂಬರ ತಿಳಿಸಿದ್ದಾರೆ. ಸಾವು ಖಚಿತ ಪಡಿಸಿದ ಮೇಘಾ ಅವರ ತಂದೆ ದೀಪಕ್ ಹತ್ತರವಾಠ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: ಮಹಾಕುಂಭ ಕಾಲ್ತುಳಿತ: ಪ್ರಯಾಗ್​ರಾಜ್​ಗೆ ಬರುತ್ತಿದ್ದ ರೈಲುಗಳ ಮಾರ್ಗ ಬದಲಾವಣೆ, ವಿಶೇಷ ರೈಲುಗಳು ರದ್ದು

ಜನವರಿ 26ರಂದು ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೋಗಿದ್ದರು. ಬೆಳಗಾವಿಯಿಂದ ಒಟ್ಟು 13 ಜನ ಹೋಗಿದ್ದರು ಆದ್ರೆ, ಈಗ ಪತ್ನಿ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ ಹತ್ತರವಾಠ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿಯವರ ಸಾವಿನ ಸಂಖ್ಯೆ 4ಕ್ಕೇರಿಕೆ

ತಾಯಿ ಮಗಳು ಸಾವನ್ನಪ್ಪಿದ ಬಳಿಕ ಬೆಳಗಾವಿಯ ಮೂಲದ ಇನ್ನು ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾವನೂರ ಹಾಗೂ ಬೆಳಗಾವಿ ನಗರದ ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಸಾವನ್ನಪ್ಪಿದ್ದಾರೆ. ಇನ್ನು ಅರುಣ್​ ಹೆಂಡತಿ ಕಾಂಚನಾಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಭಾನುವಾರ 30 ಜನರ ಜೊತೆ ಮಹಾ ಕುಂಭಮೇಳಕ್ಕೆ ತೆರಳಿದ್ದರು.

Published On - 4:46 pm, Wed, 29 January 25

ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಅಪರಿಚಿತರು
ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಅಪರಿಚಿತರು
ಶಸ್ತ್ರಚಿಕಿತ್ಸೆಗೊಗಾಳಗಿರುವ ರಾಮಕೃಷ್ಣ ಪತ್ನಿಗೆ ಔಷಧಿಗೆ ₹ 10,000 ಬೇಕು
ಶಸ್ತ್ರಚಿಕಿತ್ಸೆಗೊಗಾಳಗಿರುವ ರಾಮಕೃಷ್ಣ ಪತ್ನಿಗೆ ಔಷಧಿಗೆ ₹ 10,000 ಬೇಕು
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ