AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು

ನೇಮಕಾತಿಗೆ ಅನುಮತಿ ಸಿಗುವ ಮುನ್ನವೇ 138 ಜನ ಪೌರಕಾರ್ಮಿಕರನ್ನು ನಿಯಮ ಉಲ್ಲಂಘಿಸಿ ನೇಮಕ‌ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಆರೋಪ ಮಾಡಿದ್ದರು. ಇತ್ತ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಾವು ಅಕ್ರಮವಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ. ಇವರಿಬ್ಬರ ಜಗಳದಲ್ಲಿ ಪೌರಕಾರ್ಮಿಕರು ಸಂಬಳ ಇಲ್ಲದೇ ಪರದಾಡುತ್ತಿದ್ದಾರೆ.

ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು
ಬೆಳಗಾವಿ ಮಹಾನಗರ ಪಾಲಿಕೆ
Sahadev Mane
| Edited By: ವಿವೇಕ ಬಿರಾದಾರ|

Updated on: Nov 08, 2023 | 12:13 PM

Share

ಬೆಳಗಾವಿ ನ.08: ಬೆಳಗಾವಿ ಮಹಾನಗರ ಪಾಲಿಕೆ (Belagavi Municipal Corporation) ವಿಚಾರವಾಗಿ ಬಿಜೆಪಿ (BJP) ಮತ್ತು ಕಾಂಗ್ರೆಸ್​ (Congress) ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಗಂಡ-ಹೆಂಡತಿ ಜಗಳದ ನಡುವೆ ಕೂಸು ಬಡವಾಯಿತು ಎಂಬಂತೆ, ಬಿಜೆಪಿ ಮತ್ತು ಕಾಂಗ್ರೆಸ್​ ನಯಕರ ಜಗಳದಲ್ಲಿ ಪೌರ ಕಾರ್ಮಿಕರು ಕಂಗಾಲ ಆಗಿದ್ದಾರೆ. ಹೌದು ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪೌರ ಕಾರ್ಮಿಕರ ಪರದಾಡುತ್ತಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ 138 ಪೌರ ಕಾರ್ಮಿಕರಿಗೆ ಕಳೆದ ಒಂದು ವರ್ಷದಿಂದ ಸಂಭಳವೇ ನೀಡಿಲ್ಲ.

ನೇಮಕಾತಿಗೆ ಅನುಮತಿ ಸಿಗುವ ಮುನ್ನವೇ 138 ಜನ ಪೌರಕಾರ್ಮಿಕರನ್ನು ನಿಯಮ ಉಲ್ಲಂಘಿಸಿ ನೇಮಕ‌ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಆರೋಪ ಮಾಡಿದ್ದರು. ಇತ್ತ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಾವು ಅಕ್ರಮವಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ. ಇವರಿಬ್ಬರ ಜಗಳದಲ್ಲಿ ಪೌರಕಾರ್ಮಿಕರು ಸಂಬಳ ಇಲ್ಲದೇ ಪರದಾಡುತ್ತಿದ್ದಾರೆ.

ಹೀಗಾಗಿ ಪೌರ ಕಾರ್ಮಿಕರು ಸಂಬಳಕ್ಕಾಗಿ ಒತ್ತಾಯಿಸಿ ಕೆಲಸಕ್ಕೆ ಗೈರಾಗುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗಾಗಿ ದೀಪಾವಳಿ ಹಬ್ಬಕ್ಕೂ ದೀಪ ಬೆಳಗಿಸುವಷ್ಟು ಶಕ್ತಿ ಇಲ್ಲ ಅಂತ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ. ಬಿಜೆಪಿ 138 ಪೌರ ಕಾರ್ಮಿಕರ ನೇಮಕಾತಿಯಲ್ಲಿ ಗೋಲ್ ನಡೆಸಿದ್ದಾರೆ. ಪೌರಕಾರ್ಮಿಕರ ನೇಮಕಾತಿಯಲ್ಲಿ ಪೌರ ಕಾರ್ಮಿಕರಿಂದ ದುಡ್ಡು ವಸೂಲಿ ಮಾಡಿದವರು ಯಾರು? ನಗರವನ್ನು ಸ್ವಚ್ಛ ಮಾಡುವ ಶ್ರಮಿಕಲನ್ನು ಇಕ್ಕಟ್ಟಿಗೆ ಸಿಲುಕಿಸಿದ ಮಹಾನುಭಾವರು ಯಾರು ? ಅವರ ವಿರುದ್ಧ ಬಿಜೆಪಿ ನಾಯಕರು ಕ್ರಮ ಏಕೆ ಕೈಗೊಳ್ಳುತ್ತಿಲ್ಲ? ಪೌರ ಕಾರ್ಮಿಕರಿಂದ ದುಡ್ಡು ವಸೂಲಿ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಸಚಿವ ಹಾಗೂ ಪೌರಾಡಳಿತ ಸಚಿವರು ಇತ್ತೀಚಿಗೆ ಬೆಳಗಾವಿಗೆ ಬಂದು ಪಾಲಿಕೆ ಅಧಿಕಾರಿಗಳ ಜೊತೆ ಸಭೆ ಮಾಡಿ, ಪಾಲಿಕೆಯಲ್ಲಿ ನಡೆದಿರುವ ಪುಮಾದಗಳ ಬಗ್ಗೆ ಪಟ್ಟಿ ಮಾಡಿಕೊಂಡು ಹೋಗಿದ್ದು, 138 ಪೌರ ಕಾರ್ಮಿಕರ ನೇಮಕಾತಿ ವಿಚಾರ ಈಗ ಬಿಜೆಪಿಯನ್ನು ಇಟ್ಟಿಗೆ ಸಿಲುಕಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sahadev Mane
Sahadev Mane
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ