AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನಮ್ಮ ಎದೆ ಹಾಲು ಕುಡಿಸಿದ್ದಾಳೆ, ಇದರ ಬಗ್ಗೆ ಮಾತಾಡಿದರೆ ಹುಷಾರ್: ಹೆಗಡೆ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ, ಇತ್ತೀಚಿಗೆ ನನ್ನ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನಮ್ಮ ಎದೆ ಹಾಲು ಕುಡಿಸಿದ್ದಾಳೆ, ಇದರ ಬಗ್ಗೆ ಮಾತಾಡಿದರೆ ಹುಷಾರ್: ಹೆಗಡೆ ಎಚ್ಚರಿಕೆ
ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 17, 2024 | 3:38 PM

Share

ಬೆಳಗಾವಿ, ಜನವರಿ 17: ಇತ್ತೀಚಿಗೆ ನನ್ನ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್​ ಎಂದು ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ (Anantkumar Hegde)  ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಅವರು, ನಮ್ಮ ರಾಮ, ಹಿಂದೂಗಳು, ಹಿರಿಯರ ಬಗ್ಗೆ ಮಾತಾಡಿದರೆ ಸಹಿಸಲ್ಲ. ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ. ನಾನು ಕೂಡ ಮೈಸೂರು ಗರಡಿಯಲ್ಲಿಯೇ ಬೆಳೆದವನು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಟಾಂಗ್​​ ನೀಡಿದ್ದಾರೆ.

ನಮ್ಮವರಿಗೆ ಏಕವಚನದಲ್ಲಿ ಮಾತಾಡಿದರೆ ಏನು ಮಾಡಲಿ? ಯುದ್ಧಭೂಮಿಯಲ್ಲಿ ಶಾಸ್ತ್ರೀಯ ಸಂಗೀತ, ಭರತ ನಾಟ್ಯಕ್ಕೆ ಅವಕಾಶವಿಲ್ಲ. ಯುದ್ಧಭೂಮಿಯಲ್ಲಿ ಹೇಗೆ ಮಾತಾಡಬೇಕೋ ಹಾಗೇ ಮಾತಾಡಬೇಕು ಅಲ್ಲಿ ಹೋಗಿ ಭರತ ನಾಟ್ಯ ಮಾಡೋಕೆ ಆಗುತ್ತಾ ಎಂದಿದ್ದಾರೆ.

ಸ್ವಾಭಿಮಾನದಿಂದ ಮತ ಕೊಟ್ಟವರು ನೀವು

ನನಗೆ ಮತ ನೀಡಿದವರು ನೀವು. ನೀವು ಸ್ವಾಭಿಮಾನದಿಂದ ಮತ ನೀಡಿದ್ದು ನಿಜವಾದರೆ ನಾನು ಹೇಳಿದ್ದು ಸರಿ. ನಾನು ಬೇಡವೆಂದರೂ ನನ್ನ ಬೆನ್ನು ಬಿದ್ದವರು ನೀವು. ನಿಮ್ಮ ಪ್ರೀತಿಯಿಂದಲೇ ಇವತ್ತು ನಾನು ಇಲ್ಲಿದ್ದೇನೆ. ನಿಮಗೆ ನಾನು ಯಾವತ್ತೂ ಋಣಿ. ಕೊನೆಯವರೆಗೂ ನಾನು ನಿಮ್ಮೊಂದಿಗೆ ಇದ್ದೇನೆ. ಇದುವರೆಗೂ ನನ್ನ ಹಣೆ ಮೇಲೆ ಅಪವಾದವನ್ನು ದೇವರು ಬರೆದಿಲ್ಲ. ಇಲ್ಲಿ ನಿಮ್ಮ ಮುಂದೊಂದು ಭಾಷಣ. ಅಲ್ಲಿ ಹೋಗಿ ಬೇರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಇಂಥದ್ದು ಈ ನನ್ನ ರಕ್ತದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತರ ಶಾಪದಿಂದ ಗೋಪಾಷ್ಟಮಿ ದಿನವೇ ಇಂದಿರಾ ಕುಟುಂಬ ಬಲಿಯಾಯಿತು: ಅನಂತಕುಮಾರ್ ಹೆಗಡೆ

ಮಹಾಸಂಗ್ರಾಮ ಶುರುವಾಗಿದೆ. ‘ನಾವು ಗೆದ್ದೆವು’ ಅನ್ನೋದಲ್ಲ, ಗೆದ್ಸಿದ್ದೇವೆ ಅಂತಾ ಗಟ್ಟಿಯಾಗಿ ಬರಬೇಕು. ಗಂಡು ದನಿಯ ನೆಲವಿದು. ಗಟ್ಟಿಯಾಗಿ ಮಾತಾಡಬೇಕು. ಅಭ್ಯರ್ಥಿ ಯಾರೇ ಆಗಿರಲಿ. ಈ ಕ್ಷೇತ್ರದಲ್ಲಿ ರಾಷ್ಟ್ರೀಯ ದಾಖಲೆಯಾಗಬೇಕು. ಭಗವಂತ ನಮ್ಮ ಜೊತೆಗಿದ್ದಾನೆ. ಈ ಬಾರಿ ಗೆಲುವು ದೇವರಿಗೆ ಬೇಕಾಗಿದೆ. ಏಕೆಂದರೆ ಈ ಗೆಲವು ಆತನಿಗೂ ಬೇಕಾಗಿದೆ. ಎಲ್ಲ ದೇವಸ್ಥಾನಗಳ ಮುಕ್ತಿಯಾಗಬೇಕಿದೆ. ಇಲ್ಲವಾದರೆ ಅವನಿಗೂ ಇಲ್ಲಿ ಜಾಗ ಇರುವುದಿಲ್ಲ. ಹೀಗಾಗಿ ಈ ಬಾರಿಯ ಗೆಲುವು ಅವನೇ ಎಂದರು.

ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ಆರಂಭ ಎಂದಿದ್ದಕ್ಕೆ ಕೆಲವರಿಗೆ ಎಲ್ಲೆಲ್ಲೋ ಹರಿದು ಹೋಗಿದೆ

ಕಾಶಿ, ಮಥುರಾ ದೇವಸ್ಥಾನ ವಿಚಾರ ಬಾಕಿ ಇದೆ. ಎಲ್ಲ ಕಡೆಗೂ ಬದಲಾವಣೆ ಆಗುತ್ತಿದೆ. ಇಲ್ಲಿಯೂ ಎಲ್ಲವೂ ಬದಲಾವಣೆ ಆಗಲಿದೆ. ಜಗತ್ತಿನ ಅನೇಕ ಕಡೆ ದೀಪಾವಳಿ ಆಚರಿಸಲಾಗುತ್ತೆ. ಆದರೆ ನಮ್ಮಲ್ಲಿ ಕೊಂಕು ಮಾತನಾಡುವವರು ಇದ್ದಾರೆ. ವಿದೇಶಗಳಲ್ಲಿಯೂ ದೀಪಾವಳಿಗೆ ರಜೆ ಕೊಡಲಾಗುತ್ತೆ. ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ಆರಂಭ ಎಂದಿದ್ದಕ್ಕೆ ಕೆಲವರಿಗೆ ಎಲ್ಲೆಲ್ಲೋ ಹರಿದು ಹೋಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ