AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರದಿಂದ ಬೆಳಗಾವಿ ಗಡಿಗೆ ಆಗಮಿಸಿದ ಶಿವಸೇನೆ ಪುಂಡರು ಹೈಡ್ರಾಮ ನಡೆಸಿದ್ದು, ಮಹಾರಾಷ್ಟ್ರದ ಸಚಿವರ ವಿರುದ್ಧ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ
ಬೆಳಗಾವಿಯ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ
TV9 Web
| Edited By: |

Updated on: Dec 06, 2022 | 6:11 PM

Share

ಬೆಳಗಾವಿ: ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದಾಗಿ ಹೇಳಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರು (Maharashtra border in charge ministers) ಕೊನೆಯ ಕ್ಷಣದಲ್ಲಿ ಜಿಲ್ಲಾ ಭೇಟಿ (Maharashtra ministers belagavi visit)ಯನ್ನು ರದ್ದುಗೊಳಿಸಿದ್ದರು. ಇದಕ್ಕೆ ಆಕ್ರೋಶಗೊಂಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಬಣದ ಕಾರ್ಯಕರ್ತರು ಬೆಳಗಾವಿ ಗಡಿಗೆ ಆಗಮಿಸಿ ಮಹಾರಾಷ್ಟ್ರ ಸರ್ಕಾರ (Maharashtra Govt) ಮತ್ತು ಕರ್ನಾಟಕ ಸರ್ಕಾರದ (Karnataka Govt) ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಶಿವಸೇನೆಯ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಕೊಲ್ಹಾಪುರದಿಂದ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್‌ಪೋಸ್ಟ್ ಸಮೀಪಕ್ಕೆ ಆಗಮಿಸಿ ಮಹಾರಾಷ್ಟ್ರ ಸಚಿವರ ವಿರುದ್ಧ, ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಬೆಳಗಾವಿ ಗಡಿಗೆ ನುಗ್ಗಲು ಯತ್ನಿಸಿದ್ದಾರೆ.

ಬೆಳಗಾವಿಯ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರ ಹೈಡ್ರಾಮಾ ನಡೆಸಿದ್ದು, ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರಕ್ಕೆ ತೆರಳುವುದಾಗಿ ಹೇಳಿದ್ದ ಮಹಾರಾಷ್ಟ್ರದ ಸಚಿವರು ಜಿಲ್ಲೆಗೆ ಹೋಗದಿದ್ದಕ್ಕೆ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ್, ದೇಸಾಯಿ ವಿರುದ್ಧ ಘೋಷಣೆ ಕೂಗಿದರಲ್ಲದೆ, ಸಚಿವರಿಗೆ ಬಳೆ, ಅರಿಶಿನ ಕುಂಕುಮ ತಂದಿದ್ದಾರೆ. ಇದೇ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿ ಗಡಿಯೊಳಗೆ ನುಸುಳಲು ಯತ್ನಿಸಿದ್ದಾರೆ. ಈ ವೇಳೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕಾಗಲ್ ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಎಂಟ್ರಿಗೆ ಅವಕಾಶ ನೀಡುವಂತೆ ಮನವಿ ಕೊಡಲು ಬಂದ ಎಂಇಎಸ್ ಪುಂಡರು ಪೊಲೀಸರ ವಶಕ್ಕೆ

ಸಿಎಂ ಬೊಮ್ಮಾಯಿ ಜೊತೆ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ಚರ್ಚೆ

ಮಹಾರಾಷ್ಟ್ರದ ಸಚಿವರಿಗೆ ಪ್ರವೇಶ ನಿರ್ಬಂಧಿಸಿ‌ ಹಿರೇಬಾಗೇವಾಡಿ ಟೋಲ್​ಗೇಟ್ ಬಳಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆ ನಡೆಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದರು. ಈ ವೇಳೆ ಹಿರೇಬಾಗೇವಾಡಿ ಬಳಿ‌ ಘಟನೆಯ ಬಗ್ಗೆ ಫಡ್ನವಿಸ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದಿಂದ ಬರುವ ವಾಹನಗಳಿಗೆ ರಕ್ಷಣೆ ನೀಡುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಫಡ್ನವಿಸ್‌ ಮನವಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?