AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ ತಾಲೂಕಿನಲ್ಲಿನ 8 ಸೇತುವೆ ಮುಳುಗಡೆ: 18 ಗ್ರಾಮಗಳಿಗೆ ಸಂಪರ್ಕ ಕಡಿತ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಭೀಕರ ಪ್ರವಾಹ ಉಂಟಾಗಿದೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ 8 ಸೇತುವೆಗಳು ಜಲಾವೃತಗೊಂಡು 18 ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಜನರು ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತಾಗಿದೆ.

Sahadev Mane
| Edited By: |

Updated on:Aug 19, 2025 | 9:25 AM

Share

ಬೆಳಗಾವಿ, ಆಗಸ್ಟ್​ 19: ಮಹಾರಾಷ್ಟ್ರದ (Maharashtra) ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಹರಿಯುವ ಪಂಚನದಿಗಳಾದ ಕೃಷ್ಣಾ (Krishna River), ಘಟಪ್ರಭಾ, ಮಲಪ್ರಭಾ, ವೇದಗಂಗಾ, ಮತ್ತು ದೂಧಗಂಗಾ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನಲ್ಲಿನ 8 ಕೆಳ ಹಂತದ ಸೇತುವೆಗಳು ಒಂದೇ ರಾತ್ರಿ ಜಲಾವೃತಗೊಂಡಿವೆ. ಇದರಿಂದ ತಾಲೂಕಿನಲ್ಲಿ 18 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜನರು ಪರ್ಯಾಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದಾರೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡಿದೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಮಲ್ಲಿಕವಾಡ-ದತ್ತವಾಡ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಕ್ಸಂಬಾ-ದತ್ತವಾಡ, ಕಲ್ಲೋಳ-ಯಡೂರ ಮತ್ತು ಬಾವನಸೌದತ್ತಿ-ಮಾಂಜರಿ ಸೇತುವೆ ಮುಳುಗಡೆಯಾಗಿದೆ.

ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಗೆ ಅಡ್ಡಲಾಗಿ ಕಟ್ಟಿರುವ ಮಲಿಕವಾಡ-ದತ್ತವಾಡ ಸೇತುವೆ ಎರಡೇ‌ ತಿಂಗಳಲ್ಲಿ ಆರನೇ ಬಾರಿಗೆ ಮುಳುಗಡೆಯಾಗಿದೆ. ತುಂಬಿ ಹರಿಯುತ್ತಿರುವ ದೂದಗಂಗಾ ನದಿಗೆ ಮಹಿಳೆಯರು ಪೂಜೆ ಸಲ್ಲಿಸಿ, ರೈತರಿಗೆ, ಜನರಿಗೆ ಒಳ್ಳೆಯದನ್ನು ಮಾಡುಅಂತ ಬೇಡಿಕೊಂಡರು.

ಮುಳುಗಡೆಯಾದ ದರ್ಗಾ

ಮತ್ತೊಂದಡೆ, ಚಿಕ್ಕೋಡಿ ತಾಲೂಕಿನ ಮುಲ್ಲಾನಕಿ ಗ್ರಾಮದಲ್ಲಿರುವ ಹಜರತ್‌‌ ಮನ್ಸೂರ್ ಅಲಿ ದರ್ಗಾ ದೂದಗಂಗಾ ನದಿಯಲ್ಲಿ ಮುಳುಗಡೆಯಾಗಿದೆ. ಏಕಾಏಕಿ ನೀರು ಏರಿಕೆಯಾಗಿದ್ದರಿಂದ ನದಿ ಪಕ್ಕದ ಪಂಪ್ ಸೆಟ್, ಮೋಟರ್​ಗಳು ಕೊಚ್ಚಿಕೊಂಡು ಹೋಗುತ್ತಿವೆ. ದೂದಗಂಗಾ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.

ಇದನ್ನೂ ನೋಡಿ: ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ​ ನೀರು ಬಿಡುಗಡೆ

ಇನ್ನು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಸವದತ್ತಿ ಹೊರ ವಲಯದಲ್ಲಿರುವ ನವಿಲುತೀರ್ಥ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದ 10ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಮಲಪ್ರಭಾ ಡ್ಯಾಂ ನಲ್ಲಿ 2078.75ನೀರು ಸಂಗ್ರಹವಾಗಿದೆ. ಜಲಾಶಯ 2079.50 ಸಾಮರ್ಥ್ಯ ಹೊಂದಿದೆ. ಮಲಪ್ರಭಾ ನದಿ ಪಾತ್ರದ ಜನರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳದಲ್ಲಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 am, Tue, 19 August 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು