ಬೆಳಗಾವಿ ಮಕ್ಕಳ ಮಾರಾಟ ಜಾಲದಿಂದ ರಕ್ಷಿಸಲಾಗಿದ್ದ ಮಗು ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಮಕ್ಕಳ ಮಾರಾಟ ಜಾಲ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಈ ಮಾರಾಟ ಜಾಲದಲ್ಲಿ ರಕ್ಷಿಸಲಾಗಿದ್ದ ಹೆಣ್ಣು ಮಗು ಮೃತಪಟ್ಟಿದೆ. ಬೆಳಗಾವಿಯ ಸದಾಶಿವನಗರದ ರುಧ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಬೆಳಗಾವಿ ಮಕ್ಕಳ ಮಾರಾಟ ಜಾಲದಿಂದ ರಕ್ಷಿಸಲಾಗಿದ್ದ ಮಗು ಸಾವು
ನಕಲಿ ವೈದ್ಯಅಬ್ದುಲ್ ಗಫಾರ್ ಲಾಡಖಾನ್, ಮಗು ಅಂತ್ಯಕ್ರಿಯೆ
Follow us
| Updated By: ವಿವೇಕ ಬಿರಾದಾರ

Updated on:Jun 22, 2024 | 12:41 PM

ಬೆಳಗಾವಿ, ಜೂನ್​ 22: ಮಕ್ಕಳ ಮಾರಾಟ (Child Trafficking) ಜಾಲದಿಂದ ರಕ್ಷಿಸಲಾಗಿದ್ದ 30 ದಿನದ ಹೆಣ್ಣು ಮಗು ತಡರಾತ್ರಿ ಬೆಳಗಾವಿ (Belagavi) ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದೆ. ಮಕ್ಕಳ ಮಾರಾಟ ಜಾಲದ ಕಿಂಗ್​ಪಿನ್​ ಆರೋಪಿ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ 30 ದಿನದ ಹೆಣ್ಣು ಮಗುವನ್ನು ಕೇವಲ 60 ಸಾವಿರ ರೂ.ಗೆ ನರ್ಸ್​ ಮಹಾದೇವಿ ಎಂಬುವರಿಗೆ ಮಾರಾಟ ಮಾಡಿದ್ದನು.

ನರ್ಸ್​ ಮಹಾದೇವಿ ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದನ್ನು ತಿಳಿದಿದ್ದ ಮಕ್ಕಳ ರಕ್ಷಣಾ ಘಟಕದವರು ಈಕೆಯನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳಲು ಬಲೆ ಹೆಣದಿದ್ದರು. ಅದರಂತೆ, ಮಕ್ಕಳ ರಕ್ಷಣಾ ಘಟಕದವರು ಮಗುವನ್ನು ಕೊಂಡುಕೊಳ್ಳಲು ಈಕೆಯನ್ನು ಸಂಪರ್ಕಿಸಿದ್ದಾರೆ. ಆಗ, ನರ್ಸ್​ ಮಹಾದೇವಿ ಮಗುವನ್ನು ಮಾರಾಟ ಮಾಡಲು ಒಪ್ಪಿದ್ದಾಳೆ. ಅದರಂತೆ, ನರ್ಸ್ ಮಹಾದೇವಿ ಚಿಕ್ಕೋಡಿಯಿಂದ ಬೆಳಗಾವಿಗೆ ಬಂದು, ನಾನೆ ಮಗುವಿನ ತಾಯಿ ಎಂದು 1.40 ಲಕ್ಷ ಮಾರಾಟ ಮಾಡುತ್ತಿದ್ದ ವೇಳೆ ಮಕ್ಕಳ ರಕ್ಷಣಾ ಘಟಕದವರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತು ಮಗುವನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಮಕ್ಕಳ ಮಾರಾಟ ಪ್ರಕರಣ: ಆರೋಪಿ ಅಬ್ದುಲ್​ನಿಂದ ಭ್ರೂಣಹತ್ಯೆ, ತನಿಖೆಯಲ್ಲಿ ಬಯಲು

ರಕ್ಷಿಸಿದ್ದ ಮಗುವನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆರೈಕೆ ಮಾಡಲಾಗ್ತಿತ್ತು. ಬೆಳವಣಿಗೆ ಕುಂಠಿತ, ತೂಕ ಹೆಚ್ಚಳವಾಗದೆ ಅನಾರೋಗ್ಯದಿಂದ ಮಗು ತಡರಾತ್ರಿ ಮೃತಪಟ್ಟಿದೆ. ಪೊಲೀಸರು, ಮಗುವಿನ ತಂದೆ, ತಾಯಿ ಸಮ್ಮುಖದಲ್ಲಿ ಬೆಳಗಾವಿಯ ಸದಾಶಿವನಗರದ ರುಧ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.

ಮದುವೆಗೂ ಮುನ್ನ ದೈಹಿಕ‌ ಸಂಪರ್ಕ ಹೊಂದಿದ್ದರಿಂದ ಮಗು ಜನಿಸಿತ್ತು. ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ 20 ಸಾವಿರ ಪಡೆದು ಆಪರೇಷನ್​ ಮಾಡಿ ಏಳು ತಿಂಗಳ ಹಸುಳೆಯನ್ನು ಹೊರ ತೆಗೆದಿದ್ದನು. ಬಳಿಕ ನರ್ಸ್​ ಮಹಾದೇವಿಗೆ ಮಾರಾಟ ಮಾಡಿದ್ದನು. ನಕಲಿ ವೈದ್ಯನ ಹಣದಾಹಕ್ಕೆ ನಾಲ್ಕು ಹಸುಳೆಗಳು ಮೃತಪಟ್ಟಿವೆ. ಇತ್ತೀಚಗಷ್ಟೇ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಫಾರ್ಮ್ ಹೌಸ್​ನಲ್ಲಿ ಮೂರು ಹತ್ಯೆಯಾದ ಭ್ರೂಣ ಪತ್ತೆಯಾಗಿದ್ದವು. ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:10 pm, Sat, 22 June 24

ತಾಜಾ ಸುದ್ದಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ