AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ

ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ
ಆರೋಪಿಗಳು ಅರೆಸ್ಟ್
Sahadev Mane
| Edited By: |

Updated on:Sep 27, 2023 | 10:38 AM

Share

ಬೆಳಗಾವಿ, ಸೆ.27: ರೈಲಿನಲ್ಲಿ ಪ್ರಯಾಣಿಸುವವರನ್ನೇ ಟಾರ್ಗೆಟ್​ ಮಾಡಿ 20ದಿನಗಳ ಹಿಂದೆ ಗೋವಾ -ಬೆಳಗಾವಿ(Belagavi-Goa) ಮಾರ್ಗದಲ್ಲಿ ತಮ್ಮ ಕೈ ಚಳಕ ತೋರಿಸಿದ್ದ ಚಾಕೊಲೇಟ್ ಗ್ಯಾಂಗ್,​ ಇದೀಗ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಮಧ್ಯಪ್ರದೇಶ ಮೂಲದ ಎಂಟು ಜನರು ಮದ್ದು ಬರುವ ಚಾಕೊಲೇಟ್ ತಿಂದು, ತೀವ್ರ ಅಸ್ವಸ್ಥಗೊಂಡಿದ್ದರು. ಅವರಿಗೆ ಬೆಳಗಾವಿ ಬಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ತಮ್ಮೂರಿಗೆ ಮರಳಿದ್ದರು. ಈ ಸಂಬಂಧ ಗೋವಾ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ್ದ ಗೋವಾದ ಆರ್‌ಪಿಎಫ್ ಪೊಲೀಸರು, ಬಿಹಾರ ಮೂಲದ ಮೂರು ಜನ ಆರೋಪಿಗಳಾದ ಸರ್ತಾಜ್(29), ಚಂದನ್ ಕುಮಾರ್(23) ಹಾಗೂ ದಾರಾ ಕುಮಾರ್(29) ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ರೈಲಿನಲ್ಲಿ ಪ್ರಯಾಣಿಸುವವರೇ ಎಚ್ಚರ, ಮತ್ತೆ ಆ್ಯಕ್ಟೀವ್ ಆಗಿದೆ ಚಾಕೊಲೇಟ್ ಗ್ಯಾಂಗ್; ಇಲ್ಲಿದೆ ವಿವರ

ಸಿಕ್ಕಿಬಿದ್ದಿದ್ದೆ ರೋಚಕ

ಒಂದೇ ರೈಲಿನಲ್ಲಿ ನಿರಂತರವಾಗಿ ಓಡಾಡುತ್ತಿದ್ದ ಇವರನ್ನು ನೋಡಿ, ಸಂಶಯ ಬಂದು ವಿಚಾರಿಸಿದಾಗ ಮೂವರು ಖೆಡ್ಡಾಗೆ ಬಿದ್ದಿದ್ದಾರೆ. ಚಾಕೊಲೇಟ್​ನಲ್ಲಿ ಡ್ರಗ್ಸ್ ಮತ್ತು ನಿದ್ದೆ ಬರುವ ಮಾತ್ರೆಗಳನ್ನು ಪುಡಿ ಮಾಡಿ ಬೆರಸಿ ಇಟ್ಟುಕೊಂಡಿದ್ದ ಇವರು, ರೇಲ್ವೆಯಲ್ಲಿ ಗೆಳೆತನ ಬೆಳೆಸಿ, ಪ್ರಯಾಣಿಕರಿಗೆ ನೀಡುತ್ತಿದ್ದರು. ಅದೇ ಮಾದರಿಯ ಮದ್ದಿಲ್ಲದ ಚಾಕೊಲೇಟ್‌ನ್ನು ಖದೀಮರು ತಿನ್ನುತ್ತಿದ್ದರು. ಮದ್ದು ಬರುವ ಚಾಕೊಲೇಟ್ ತಿನ್ನುತ್ತಿದ್ದಂತೆ ಪ್ರಯಾಣಿಕರು ಮೂರ್ಛೆ ಹೋದ ತಕ್ಷಣ ಅವರ ಬಳಿ ಇದ್ದ ಹಣ, ಮೊಬೈಲ್, ಒಡವೆಗಳನ್ನು ದೋಚಿ ಎಸ್ಕೇಪ್ ಆಗುತ್ತಿದ್ದರು. ಇದೀಗ ಈ ಗ್ಯಾಂಗ್​ಗೆ ಪೊಲೀಸ್​ ಹೆಡೆಮುರಿ ಕಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 27 September 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್