AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ

ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ
ಆರೋಪಿಗಳು ಅರೆಸ್ಟ್
Sahadev Mane
| Edited By: |

Updated on:Sep 27, 2023 | 10:38 AM

Share

ಬೆಳಗಾವಿ, ಸೆ.27: ರೈಲಿನಲ್ಲಿ ಪ್ರಯಾಣಿಸುವವರನ್ನೇ ಟಾರ್ಗೆಟ್​ ಮಾಡಿ 20ದಿನಗಳ ಹಿಂದೆ ಗೋವಾ -ಬೆಳಗಾವಿ(Belagavi-Goa) ಮಾರ್ಗದಲ್ಲಿ ತಮ್ಮ ಕೈ ಚಳಕ ತೋರಿಸಿದ್ದ ಚಾಕೊಲೇಟ್ ಗ್ಯಾಂಗ್,​ ಇದೀಗ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಮಧ್ಯಪ್ರದೇಶ ಮೂಲದ ಎಂಟು ಜನರು ಮದ್ದು ಬರುವ ಚಾಕೊಲೇಟ್ ತಿಂದು, ತೀವ್ರ ಅಸ್ವಸ್ಥಗೊಂಡಿದ್ದರು. ಅವರಿಗೆ ಬೆಳಗಾವಿ ಬಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ತಮ್ಮೂರಿಗೆ ಮರಳಿದ್ದರು. ಈ ಸಂಬಂಧ ಗೋವಾ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ್ದ ಗೋವಾದ ಆರ್‌ಪಿಎಫ್ ಪೊಲೀಸರು, ಬಿಹಾರ ಮೂಲದ ಮೂರು ಜನ ಆರೋಪಿಗಳಾದ ಸರ್ತಾಜ್(29), ಚಂದನ್ ಕುಮಾರ್(23) ಹಾಗೂ ದಾರಾ ಕುಮಾರ್(29) ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ರೈಲಿನಲ್ಲಿ ಪ್ರಯಾಣಿಸುವವರೇ ಎಚ್ಚರ, ಮತ್ತೆ ಆ್ಯಕ್ಟೀವ್ ಆಗಿದೆ ಚಾಕೊಲೇಟ್ ಗ್ಯಾಂಗ್; ಇಲ್ಲಿದೆ ವಿವರ

ಸಿಕ್ಕಿಬಿದ್ದಿದ್ದೆ ರೋಚಕ

ಒಂದೇ ರೈಲಿನಲ್ಲಿ ನಿರಂತರವಾಗಿ ಓಡಾಡುತ್ತಿದ್ದ ಇವರನ್ನು ನೋಡಿ, ಸಂಶಯ ಬಂದು ವಿಚಾರಿಸಿದಾಗ ಮೂವರು ಖೆಡ್ಡಾಗೆ ಬಿದ್ದಿದ್ದಾರೆ. ಚಾಕೊಲೇಟ್​ನಲ್ಲಿ ಡ್ರಗ್ಸ್ ಮತ್ತು ನಿದ್ದೆ ಬರುವ ಮಾತ್ರೆಗಳನ್ನು ಪುಡಿ ಮಾಡಿ ಬೆರಸಿ ಇಟ್ಟುಕೊಂಡಿದ್ದ ಇವರು, ರೇಲ್ವೆಯಲ್ಲಿ ಗೆಳೆತನ ಬೆಳೆಸಿ, ಪ್ರಯಾಣಿಕರಿಗೆ ನೀಡುತ್ತಿದ್ದರು. ಅದೇ ಮಾದರಿಯ ಮದ್ದಿಲ್ಲದ ಚಾಕೊಲೇಟ್‌ನ್ನು ಖದೀಮರು ತಿನ್ನುತ್ತಿದ್ದರು. ಮದ್ದು ಬರುವ ಚಾಕೊಲೇಟ್ ತಿನ್ನುತ್ತಿದ್ದಂತೆ ಪ್ರಯಾಣಿಕರು ಮೂರ್ಛೆ ಹೋದ ತಕ್ಷಣ ಅವರ ಬಳಿ ಇದ್ದ ಹಣ, ಮೊಬೈಲ್, ಒಡವೆಗಳನ್ನು ದೋಚಿ ಎಸ್ಕೇಪ್ ಆಗುತ್ತಿದ್ದರು. ಇದೀಗ ಈ ಗ್ಯಾಂಗ್​ಗೆ ಪೊಲೀಸ್​ ಹೆಡೆಮುರಿ ಕಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 27 September 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!