AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ

ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು.

ಬೆಳಗಾವಿ: ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್ ಕಡೆಗೂ ಲಾಕ್; ಸಿಕ್ಕಿಬಿದ್ದಿದ್ದೆ ರೋಚಕ
ಆರೋಪಿಗಳು ಅರೆಸ್ಟ್
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 27, 2023 | 10:38 AM

ಬೆಳಗಾವಿ, ಸೆ.27: ರೈಲಿನಲ್ಲಿ ಪ್ರಯಾಣಿಸುವವರನ್ನೇ ಟಾರ್ಗೆಟ್​ ಮಾಡಿ 20ದಿನಗಳ ಹಿಂದೆ ಗೋವಾ -ಬೆಳಗಾವಿ(Belagavi-Goa) ಮಾರ್ಗದಲ್ಲಿ ತಮ್ಮ ಕೈ ಚಳಕ ತೋರಿಸಿದ್ದ ಚಾಕೊಲೇಟ್ ಗ್ಯಾಂಗ್,​ ಇದೀಗ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ-ಗೋವಾ ರೈಲಿನಲ್ಲಿ ಆ್ಯಕ್ಟೀವ್ ಆಗಿದ್ದ ಚಾಕೊಲೇಟ್ ಗ್ಯಾಂಗ್, ಪ್ರಯಾಣಿಕರ ಸೊಗಿನಲ್ಲಿ ಬಂದು ಸಹ ಪ್ರಯಾಣಿಕರ‌ ಗೆಳೆತನ ಬೆಳಸಿ ದರೋಡೆ ಮಾಡುತ್ತಿದ್ದರು. ಅದರಂತೆ ಇದೆ ಸೆ.13 ರಂದು ಎಂಟು ಜನ ಪ್ರಯಾಣಿಕರಿಗೆ ಮದ್ದು ಬರುವ ಚಾಕೊಲೇಟ್ ನೀಡಿ ಹಣ, ಮೊಬೈಲ್ ದೋಚಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಮಧ್ಯಪ್ರದೇಶ ಮೂಲದ ಎಂಟು ಜನರು ಮದ್ದು ಬರುವ ಚಾಕೊಲೇಟ್ ತಿಂದು, ತೀವ್ರ ಅಸ್ವಸ್ಥಗೊಂಡಿದ್ದರು. ಅವರಿಗೆ ಬೆಳಗಾವಿ ಬಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ತಮ್ಮೂರಿಗೆ ಮರಳಿದ್ದರು. ಈ ಸಂಬಂಧ ಗೋವಾ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ್ದ ಗೋವಾದ ಆರ್‌ಪಿಎಫ್ ಪೊಲೀಸರು, ಬಿಹಾರ ಮೂಲದ ಮೂರು ಜನ ಆರೋಪಿಗಳಾದ ಸರ್ತಾಜ್(29), ಚಂದನ್ ಕುಮಾರ್(23) ಹಾಗೂ ದಾರಾ ಕುಮಾರ್(29) ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ರೈಲಿನಲ್ಲಿ ಪ್ರಯಾಣಿಸುವವರೇ ಎಚ್ಚರ, ಮತ್ತೆ ಆ್ಯಕ್ಟೀವ್ ಆಗಿದೆ ಚಾಕೊಲೇಟ್ ಗ್ಯಾಂಗ್; ಇಲ್ಲಿದೆ ವಿವರ

ಸಿಕ್ಕಿಬಿದ್ದಿದ್ದೆ ರೋಚಕ

ಒಂದೇ ರೈಲಿನಲ್ಲಿ ನಿರಂತರವಾಗಿ ಓಡಾಡುತ್ತಿದ್ದ ಇವರನ್ನು ನೋಡಿ, ಸಂಶಯ ಬಂದು ವಿಚಾರಿಸಿದಾಗ ಮೂವರು ಖೆಡ್ಡಾಗೆ ಬಿದ್ದಿದ್ದಾರೆ. ಚಾಕೊಲೇಟ್​ನಲ್ಲಿ ಡ್ರಗ್ಸ್ ಮತ್ತು ನಿದ್ದೆ ಬರುವ ಮಾತ್ರೆಗಳನ್ನು ಪುಡಿ ಮಾಡಿ ಬೆರಸಿ ಇಟ್ಟುಕೊಂಡಿದ್ದ ಇವರು, ರೇಲ್ವೆಯಲ್ಲಿ ಗೆಳೆತನ ಬೆಳೆಸಿ, ಪ್ರಯಾಣಿಕರಿಗೆ ನೀಡುತ್ತಿದ್ದರು. ಅದೇ ಮಾದರಿಯ ಮದ್ದಿಲ್ಲದ ಚಾಕೊಲೇಟ್‌ನ್ನು ಖದೀಮರು ತಿನ್ನುತ್ತಿದ್ದರು. ಮದ್ದು ಬರುವ ಚಾಕೊಲೇಟ್ ತಿನ್ನುತ್ತಿದ್ದಂತೆ ಪ್ರಯಾಣಿಕರು ಮೂರ್ಛೆ ಹೋದ ತಕ್ಷಣ ಅವರ ಬಳಿ ಇದ್ದ ಹಣ, ಮೊಬೈಲ್, ಒಡವೆಗಳನ್ನು ದೋಚಿ ಎಸ್ಕೇಪ್ ಆಗುತ್ತಿದ್ದರು. ಇದೀಗ ಈ ಗ್ಯಾಂಗ್​ಗೆ ಪೊಲೀಸ್​ ಹೆಡೆಮುರಿ ಕಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 27 September 23

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ