AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಯಿಂದ ದೇಣಿಗೆ ಪಡೆದು ಪೀಕಲಾಟಕ್ಕೆ ಸಿಲುಕಿದ್ರಾ ಬಬಲಾದಿ ಮುತ್ತ್ಯಾ? ಸಿಐಡಿ ವಿಚಾರಣೆ

ಗೋಕಾಕ್‌ನ ಮಹಾಲಕ್ಷ್ಮೀ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಬಲಾದಿ ಮಠದ ಸದಾಶಿವ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ಮಾಡಿ, ಬಿಟ್ಟುಕಳುಹಿಸಿದ್ದಾರೆ. ಆರೋಪಿಯಿಂದಲೇ ಸ್ವಾಮೀಜಿ 80 ಲಕ್ಷ ರೂ ದೇಣಿಗೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಕುರಿತು ವಿಚಾರಣೆ ಮಾಡಲಾಗಿದೆ. ಈ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಆರೋಪಿಯಿಂದ ದೇಣಿಗೆ ಪಡೆದು ಪೀಕಲಾಟಕ್ಕೆ ಸಿಲುಕಿದ್ರಾ ಬಬಲಾದಿ ಮುತ್ತ್ಯಾ? ಸಿಐಡಿ ವಿಚಾರಣೆ
ಆರೋಪಿಯಿಂದ ದೇಣಿಗೆ ಪಡೆದು ಪೀಕಲಾಟಕ್ಕೆ ಸಿಲುಕಿದ್ರಾ ಬಬಲಾದಿ ಮುತ್ತ್ಯಾ? ಸಿಐಡಿಯಿಂದ ವಿಚಾರಣೆ
Sahadev Mane
| Edited By: |

Updated on:Mar 22, 2025 | 9:22 PM

Share

ಬೆಳಗಾವಿ, ಮಾರ್ಚ್​ 22: ಜಿಲ್ಲೆ ಗೋಕಾಕ್​ನಲ್ಲಿರುವ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಪೊಲೀಸರಿಂದ ಬಬಲಾದಿ ಮಠದ ಸ್ವಾಮೀಜಿ (Babaladi Sadashiva) ವಿಚಾರಣೆ ಮುಕ್ತಾಯವಾಗಿದ್ದು, ಇದೀಗ ಬಿಟ್ಟುಕಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿರುವ ಹೊಸ ಬಬಲಾದಿ ಮಠ ಸದಾಶಿವ ಮುತ್ತ್ಯಾರನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.  ಆರ್ಥಿಕವಾಗಿ ದಿವಾಳಿಯಾಗಿರುವ ಮಹಾಲಕ್ಷ್ಮೀ ಸಹಕಾರ ಬ್ಯಾಂಕ್​​ನ ಹಣ ಲಪಟಾಯಿಸಿದ್ದ ಆರೋಪಿಯಿಂದ ಸ್ವಾಮೀಜಿ 80 ಲಕ್ಷ ರೂಪಾಯಿ ದೇಣಿಗೆ ಪಡೆದುಕೊಂಡಿದ್ದರೆಂಬ ಮಾಹಿತಿ ಬಗ್ಗೆ ಸಿಐಡಿ ತನಿಖೆಯಲ್ಲಿ ಗೊತ್ತಾಗಿ ಸ್ವಾಮೀಜಿ ವಿಚಾರಣೆ ಮಾಡಲಾಗಿದೆ. ಮೂರನೇ ಬಾರಿಗೆ ಸದಾಶಿವ ಮುತ್ತ್ಯಾರನ್ನು ವಿಚಾರಣೆ ಮಾಡಿರುವ ಸಿಐಡಿ, ಬಳಿಕ ಬಿಟ್ಟು ಕಳಿಸಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿಯನ್ನ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಇದಕ್ಕೆ ಪ್ರಮುಖ ಕಾರಣ, ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನ ಬೆಳಗಾವಿ ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದರು.

ಇದನ್ನೂ ಓದಿ: ಐತಿಹಾಸಿಕ ಬೆಂಕಿ ಬಬಲಾದಿ ಮಠದ ಕಾಲಜ್ಞಾನ ವಾಣಿಗೆ ಅಪಸ್ವರ: ಏನದು?

ಇದನ್ನೂ ಓದಿ
Image
ಐತಿಹಾಸಿಕ ಬೆಂಕಿ ಬಬಲಾದಿ ಮಠದ ಕಾಲಜ್ಞಾನ ವಾಣಿಗೆ ಅಪಸ್ವರ: ಏನದು?
Image
ರಾಜ್ಯ ರಾಜಕೀಯದ ಬಗ್ಗೆ ಸದಾಶಿವ ಮುತ್ಯಾ ಸ್ಫೋಟಕ ಭವಿಷ್ಯ
Image
"ಬ್ಯಾನ್​ ಡ್ರೀಮ್​ 11" ಇಳಕಲ್​ ಸೀರೆ ಮೇಲೆ ನೇಯ್ದು ಮೋದಿಗೆ ಮನವಿ
Image
ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಖಾತೆಗೆ ಲಕ್ಷ ಲಕ್ಷ ರೂ ಹಣ ವರ್ಗಾವಣೆ ಆಗಿದೆ ಎನ್ನಲಾಗಿದೆ. ಸುಮಾರು 80 ಲಕ್ಷಕ್ಕೂ ಅಧಿಕ ಹಣ ಸ್ವಾಮೀಜಿ ಹಾಗೂ ಕುಟುಂಬಸ್ಥರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಸಹ ಇದೆ. ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ಶ್ರೀಗಳನ್ನ ವಶಕ್ಕೆ ಪಡೆದು ತನಿಖೆ ಮಾಡಿದ್ದಾರೆ.

ಇನ್ನೂ ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯೇ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿದ್ದ ಸಿಐಡಿ, ಇಂದು ಕೋರ್ಟ್​ಗೆ ಹಾಜರು ಪಡಿಸಿದರು.

ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಗುಮಾಸ್ತನಾಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್​ನಲ್ಲಿ ಇದ್ದ ನೂರಾರು ಕೋಟಿ ರೂ ವಂಚನೆ ಮಾಡಲಾಗಿತ್ತು. ಬ್ಯಾಂಕ್​ನಲ್ಲಿ ಅಕ್ರಮವಾಗಿ 76 ಕೋಟಿ ರೂ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್‌ಬಿಐ ಅಧಿಕಾರಿಗಳೇ ದಂಗಾಗುವಂತೆ ಆರೋಪಿಗಳು ವಂಚನೆ ಮಾಡಿದರು. ಆಡಿಟ್ ವೇಳೆ ಸಾಲಗಾರರ ಸೀಟ್ ಹಾಗೂ ಠೇವಣಿ ಸೀಟ್ ತಿದ್ದುಪಡಿಯನ್ನು ಆರೋಪಿಗಳು ಮಾಡಿದರು. ಈ ರೀತಿ ವಂಚನೆ ಪ್ರಕರಣ ಕಳೆದ ಕೆಲ ತಿಂಗಳ ಹಿಂದೆ ಬೆಳಕಿಗೆ ಬಂದಿತ್ತು, ಇದನ್ನ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದರು. ಕೋಟ್ಯಾಂತರ ರೂಪಾಯಿ ವಂಚನೆ ಹಿನ್ನೆಲೆ ಬೆಳಗಾವಿ ಎಸ್ ಪಿ ಡಾ.ಭೀಮಾಶಂಕರ್ ಗುಳೇದ್ ಸಿಐಡಿಗೆ ವಹಿಸಿದ್ದರು. ಇದೀಗ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸಿಐಡಿ ಟೀಮ್ ತನಿಖೆಯನ್ನ ಚುರುಕುಗೊಳಿಸಿದೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ: ಬಬಲಾದಿಯ ಸದಾಶಿವ ಮುತ್ಯಾ ಕಾಲಜ್ಞಾನ ಭವಿಷ್ಯ

ಮೂರು ವರ್ಷಗಳ ಆಡಿಟ್ ವೇಳೆ ವಂಚನೆ ಪ್ರಕರಣ ಬೆಳಕಿಗೆ ಬಾರದಂತೆ ಆರೋಪಿಗಳು ನೋಡಿಕೊಂಡಿದ್ರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ ನಗರದಲ್ಲಿ, ಹುಬ್ಬಳ್ಳಿಯಲ್ಲಿ ಜಮೀನನ್ನು ಖರೀದಿ ಮಾಡಲಾಗಿತ್ತು. ಬ್ಯಾಂಕ್ ಮಾಲೀಕ ನೀಡಿದ ದೂರಿನನ್ವಯ ಪ್ರಕರಣ ಬೇಧಿಸಿದ್ದ ಗೋಕಾಕ್ ‌ಪೊಲೀಸರು, ಸದ್ಯ ಆರೋಪಿಗಳ ಸೈಟ್, ಜಾಗ ಎಲ್ಲವನ್ನೂ ಮಾರಾಟ ಮಾಡಿ ಠೇವಣಿದಾರರಿಗೆ ಹಣ ಕೊಡುವ ಕೆಲಸ ಮಾಡಿದ್ದಾರೆ. ಮುಂದೆ ಯಾವ ಹಂತಕ್ಕೆ ಪ್ರಕರಣ ಹೋಗುತ್ತೆ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 pm, Sat, 22 March 25

Follow Us
Sahadev Mane
Sahadev Mane
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?