AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಪಾಲಿಕೆ ಸೂಪರ್ ಸೀಡ್: ಅಭಯ್​​ ಪಾಟೀಲ್​, ಸತೀಶ ಜಾರಕಿಹೊಳಿ ಮಧ್ಯೆ ವಾಗ್ಯುದ್ಧ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ತೆರಿಗೆ ಹೆಚ್ಚಳ ಮಾಡಿ ಠರಾವು ಹೊರಡಿಸಲಾಗಿತ್ತು. ಠರಾವು ಪ್ರತಿಯನ್ನು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ತಿದ್ದುಪಡಿ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಯುಕ್ತ ಅಶೋಕ ದುಡದುಂಟಿ ವಿರುದ್ಧ ಯುಪಿಎಸ್ಸಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದರು.

ಬೆಳಗಾವಿ ಪಾಲಿಕೆ ಸೂಪರ್ ಸೀಡ್: ಅಭಯ್​​ ಪಾಟೀಲ್​, ಸತೀಶ ಜಾರಕಿಹೊಳಿ ಮಧ್ಯೆ ವಾಗ್ಯುದ್ಧ
ಶಾಸಕ ಅಭಯ ಪಾಟೀಲ, ಸಚಿವ ಸತೀಶ ಜಾರಕಿಹೊಳಿ
Sahadev Mane
| Edited By: |

Updated on: Oct 22, 2023 | 9:50 AM

Share

ಬೆಳಗಾವಿ ಅ.22: ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಸೂಪರ್ ಸೀಡ್ ವಿಚಾರವಾಗಿ ಸಚಿವ ಹಾಗೂ ಶಾಸಕರ ನಡುವೆ ಬಿಗ್ ಫೈಟ್ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ವಿರುದ್ಧ ಯುಪಿಎಸ್ಸಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ (Abhay Patil) ಹೇಳಿದ್ದರು. ಈ ವಿಚಾರವಾಗಿ ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಯುಪಿಎಸ್ಸಿಗೆ ಪತ್ರ ಬರೆದರೇ ಪಾಲಿಕೆ ಸೂಪರ್ ಸೀಡ್ ಮಾಡುತ್ತೇವೆ ಎಂದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ತೆರಿಗೆ ಹೆಚ್ಚಳ ಮಾಡಿ ಠರಾವು ಹೊರಡಿಸಲಾಗಿತ್ತು. ಠರಾವು ಪ್ರತಿಯನ್ನು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ತಿದ್ದುಪಡಿ ಮಾಡಿರುವ ಆರೋಪ ಕೇಳಿಬಂದಿದೆ.

ಮಹಾನಗರ ಪಾಲಿಕೆ 2023-24 ಸಾಲಿಗೆ ಅನ್ವಯ ಆಗುವಂತೆ ತೆರಿಗೆ ಹೆಚ್ಚಳ ಮಾಡಿದೆ. ಆದರೆ 2024-25 ಸಾಲಿನ ತೆರಿಗೆ ಹೆಚ್ಚಳ ಎಂದು ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ರಾಜ್ಯ ಸರ್ಕಾರ ಪತ್ರ ರವಾನೆ ಮಾಡಿದ್ದರು. ಈ ವಿಚಾರವಾಗಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ಸದಸ್ಯರು ಸರ್ಕಾರದ ದಿಕ್ಕು ತಪ್ಪಿಸಿ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್​ಗೆ ಯತ್ನಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದರು. ಪಾಲಿಕೆ ಆಯುಕ್ತ ಅಶೋಕ ದುಡದುಂಟಿಗೆ ಕೆಲ ದಿನಗಳಲ್ಲಿ ಪ್ರಮೋಷನ್ ಸಿಗಲಿದೆ. ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ಕೆಎಎಸ್​ನಿಂದ ಐಎಎಸ್ ಪ್ರಮೋಷನ್ ಆಗಲಿದೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ, ಅಖಾಡಕ್ಕಿಳಿದ ಸತೀಶ್ ಜಾರಕಿಹೊಳಿ

ಯುಪಿಎಸ್ಸಿಗೆ ಪತ್ರ ಬರೆಯುವ ಮೂಲಕ ಪ್ರಮೋಷನ್ ತಡೆಯಲು ಅಭಯ್ ಪಾಟೀಲ್​ ಯತ್ನಿಸಿದ್ದಾರೆ. ಶಾಸಕ ಅಭಯ ಪಾಟೀಲ್ ಪತ್ರ ಬರೆದರೇ ಅದನ್ನೇ ಇಟ್ಟುಕೊಂಡು ಪಾಲಿಕೆ ಸೂಪರ್ ಸೀಡ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಮತ್ತು ಸದಸ್ಯರಿಗೆ ಸಚಿವ ಸತೀಶ್ ಜಾರಕಿಹೊಳಿ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಕಡತ ಮಿಸ್

ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಕಡತ ಕಾಣೆಯಾಗಿವೆ. ಆಸ್ತಿ ಕರ ಹೆಚ್ಚಳ ಮಾಡುವ ಕುರಿತು ಸಹಿ ಮಾಡಿದ್ದ, ಸಾಮಾನ್ಯ ಸಭೆಯಲ್ಲಿ ಅಂಗೀಕಾರವಾಗಿ ಸರ್ಕಾರಕ್ಕೆ ಕಳುಹಿಸಬೇಕಿದ್ದ ದಾಖಲೆ ಕಳ್ಳತನವಾಗಿದೆ. ಈ ಪ್ರಕರಣವನ್ನು ಸತೀಶ್​ ಜಾರಕಿಹೊಳಿ ಗಂಭೀರವಾಗಿ ತೆಗೆದುಕೊಂಡಿದ್ದು, ಖುದ್ದು ಮಹಾನಗರ ಪಾಲಿಕೆಗೆ ಅಗಮಿಸಿ ಖಡತ ಮಿಸ್ ಆದ ಬಗ್ಗೆ ಚರ್ಚೆ ನಡೆಸಿ, ಇಂದು 12 ಗಂಟೆ ಒಳಗಾಗಿ ಮೇಯರ್ ಸಹಿ ಮಾಡಿದ ದಾಖಲೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳಿಕ ಸತೀಶ್​ ಜಾರಕಿಹೊಳಿ ಮಾರ್ಕೆಟ್ ಠಾಣೆ ಎಸಿಪಿ, ಸಿಪಿಐ ಇಬ್ಬರನ್ನೂ ಪಾಲಿಕೆಗೆ ಕರೆಯಿಸಿಕೊಂಡು, ತನಿಖೆಗೆ ಸೂಚನೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ