AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ

5 ಬಾರಿ ಕಿತ್ತೂರು ಕ್ಷೇತ್ರದ ಶಾಸಕರಾಗಿ, ಅರಸು, S.M.ಕೃಷ್ಣ, ಎಸ್.ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಬಿ.ಇನಾಮಾದಾರ್ ನಿಧನರಾಗಿದ್ದಾರೆ.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ
ಡಿ.ಬಿ.ಇನಾಮಾದಾರ್
ರಮೇಶ್ ಬಿ. ಜವಳಗೇರಾ
|

Updated on:Apr 25, 2023 | 10:30 AM

Share

ಬೆಳಗಾವಿ(ಏ.25): ಬೆಳಗಾವಿಯ ಹಿರಿಯ ಕಾಂಗ್ರೆಸ್ ‌ನಾಯಕ, ಮಾಜಿ ಸಚಿವ ಡಿಬಿ ಇನಾಮದಾರ್ ಅವರು ಇಂದು(ಮಂಗಳವಾರ) ವಿಧಿವಶರಾಗಿದ್ದಾರೆ(DB Inamdar Passes Away). ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ‌ಅವರು ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆ ‌ಹೊತ್ತಲ್ಲೇ ಇನಾಮದಾರ್ ನಿಧನದಿಂದ ಬೆಳಗಾವಿ ‌ಕಾಂಗ್ರೆಸ್‌ಗೆ ಆಘಾತವಾಗಿದೆ.

ಇದನ್ನೂ ಓದಿ: ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ 

ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ‌ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.

2023ರ ಚುನಾವಣೆಯಲ್ಲಿ ‌ಕಿತ್ತೂರು ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿ ‌ಆಗಿದ್ದ ಡಿ.ಬಿ ಇನಾಮದಾರ್, ಅನಾರೋಗ್ಯ ಕಾರಣಕ್ಕೆ ‌ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮೀ ಇನಾಮದಾರ್‌ಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಗೆ ಕಾಂಗ್ರೆಸ್​ ಹೈಕಮಾಂಡ್ ಬಾಬಾಸಾಹೇಬ್ ‌ಪಾಟೀಲ್‌ಗೆ ಟಿಕೆಟ್ ನೀಡಿದೆ.

Published On - 10:08 am, Tue, 25 April 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ