AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ

5 ಬಾರಿ ಕಿತ್ತೂರು ಕ್ಷೇತ್ರದ ಶಾಸಕರಾಗಿ, ಅರಸು, S.M.ಕೃಷ್ಣ, ಎಸ್.ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಬಿ.ಇನಾಮಾದಾರ್ ನಿಧನರಾಗಿದ್ದಾರೆ.

DB Inamdar Passes Away: ಮಾಜಿ ಸಚಿವ ಡಿಬಿ ಇನಾಮದಾರ್ ನಿಧನ, ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಆಘಾತ
ಡಿ.ಬಿ.ಇನಾಮಾದಾರ್
ರಮೇಶ್ ಬಿ. ಜವಳಗೇರಾ
|

Updated on:Apr 25, 2023 | 10:30 AM

Share

ಬೆಳಗಾವಿ(ಏ.25): ಬೆಳಗಾವಿಯ ಹಿರಿಯ ಕಾಂಗ್ರೆಸ್ ‌ನಾಯಕ, ಮಾಜಿ ಸಚಿವ ಡಿಬಿ ಇನಾಮದಾರ್ ಅವರು ಇಂದು(ಮಂಗಳವಾರ) ವಿಧಿವಶರಾಗಿದ್ದಾರೆ(DB Inamdar Passes Away). ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ‌ಅವರು ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆ ‌ಹೊತ್ತಲ್ಲೇ ಇನಾಮದಾರ್ ನಿಧನದಿಂದ ಬೆಳಗಾವಿ ‌ಕಾಂಗ್ರೆಸ್‌ಗೆ ಆಘಾತವಾಗಿದೆ.

ಇದನ್ನೂ ಓದಿ: ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ 

ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ‌ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.

2023ರ ಚುನಾವಣೆಯಲ್ಲಿ ‌ಕಿತ್ತೂರು ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿ ‌ಆಗಿದ್ದ ಡಿ.ಬಿ ಇನಾಮದಾರ್, ಅನಾರೋಗ್ಯ ಕಾರಣಕ್ಕೆ ‌ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮೀ ಇನಾಮದಾರ್‌ಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಗೆ ಕಾಂಗ್ರೆಸ್​ ಹೈಕಮಾಂಡ್ ಬಾಬಾಸಾಹೇಬ್ ‌ಪಾಟೀಲ್‌ಗೆ ಟಿಕೆಟ್ ನೀಡಿದೆ.

Published On - 10:08 am, Tue, 25 April 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ