AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತೆ ರೀ ಓಪನ್ ಮಾಡುತ್ತಾ ಸರ್ಕಾರ..?

ಸದ್ಯ ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘ ಹಾಗೂ ಸರ್ಕಾರದ ವಿರುದ್ಧ ಜಟಾಪಟಿ ಜೋರಾಗಿದೆ. ಇದರ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಮತ್ತೆ ರೀ ಓಪನ್ ಮಾಡುತ್ತಾ? ಎನ್ನುವ ಸುದ್ದಿ ಹಬ್ಬಿದೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತೆ ರೀ ಓಪನ್ ಮಾಡುತ್ತಾ ಸರ್ಕಾರ..?
ಸಂತೋಷ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 11, 2023 | 11:33 AM

Share

ಬೆಳಗಾವಿ, (ಆಗಸ್ಟ್ 11): ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಪ್ರಕರಣ(Santosh Suicide Case) ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಅಲ್ಲದೇ ಈ ಪ್ರಕರಣ ಕೆಎಸ್​ ಈಶ್ವರಪ್ಪ (KS Eshwarappa) ತಲೆದಂಡಕ್ಕೂ ಕಾರಣವಾಗಿತ್ತು. ನಂತರ ಈ ಪ್ರಕರಣದಲ್ಲಿ ಈಶ್ವರಪ್ಪಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್​​ಚಿಟ್ ನೀಡಿತ್ತು. ಇದೀಗ ಈ ಕೇಸ್​ ಮತ್ತೆ ಮರು ಜೀವ ಪಡೆಯುತ್ತಾ? ಎನ್ನುವ ಚರ್ಚೆಗಳು ಶುರುವಾಗಿವೆ. ಹೌದು.. ಇದಕ್ಕೆ ಪೂರಕವೆಂಬಂತೆ ಸಂತೋಷ ಕುಟುಂಬಸ್ಥರು ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Corruption In Karnataka: ಮೃತ ಗುತ್ತಿಗೆದಾರ ಸಂತೋಷ್ ಪತ್ನಿಯಿಂದ ರಾಜ್ಯಪಾಲರಿಗೆ ಪತ್ರ: ಪಾರದರ್ಶಕ ತನಿಖೆಗೆ ಆಗ್ರಹ

ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಈ ಹಿಂದೆ ಸಂತೋಷ ನಿವಾಸಕ್ಕೆ ಭೇಟಿ ನೀಡಿ ನ್ಯಾಯ ಕೊಡಿಸುವ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದರಿಂದ ಸಂತೋಷ ಕುಟುಂಬಸ್ಥರು ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದಾರೆ. ಸಂತೋಷ ಪಾಟೀಲ್ ಪತ್ನಿ ಜಯಶ್ರೀ, ಪುತ್ರ ರಚೇತ್‌ಗೌಡ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಅವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಂತೋಷ ಪಾಟೀಲ್ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ಅನ್ಯಾಯ ಆಗಿದೆ. ಪ್ರಕರಣವನ್ನ ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಮನವಿ ಮಾಡಲಿದ್ದಾರಂತೆ. ಹೀಗಾಗಿ ಸಂತೋಷ್​ ಕುಟುಂಬಸ್ಥರ ಮನವಿ ಮೇರೆ ಸರ್ಕಾರ ಪ್ರಕರಣವನ್ನು ಮತ್ತೆ ರೀ ಓಪನ್ ಮಾಡಿಸಿ ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುತ್ತಾ ಎಂದು ಕಾದು ನೋಡಬೇಕಿದೆ.

2022ರ ಏಪ್ರಿಲ್ 13 ರಂದು ಉಡುಪಿಯ ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ, ಡೆತ್​ನೋಟ್​ನಲ್ಲಿ ಅಂದಿನಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಉಲ್ಲೇಖಿಸಿ 40 ಪರ್ಸೆಂಟ್​ ಕಮಿಷನ್​ ಆರೋಪ ಮಾಡಿದ್ದರು. ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್​​ ಆರೋಪಿಸಿದ್ದರು. ಇದರಿಂದಾಗಿ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು. ಪ್ರಕರಣದ ತನಿಖೆ ಬಳಿಕ ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ