AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಬೆಳಗಾವಿಯಲ್ಲಿ ಆಘಾತಕಾರಿ ಸೈಬರ್ ವಂಚನೆ ಬೆಳಕಿಗೆ ಬಂದಿದೆ. 'ಡಿಜಿಟಲ್ ಅರೆಸ್ಟ್' ನೆಪದಲ್ಲಿ ವಂಚಕರು ವೃದ್ಧ ಉದ್ಯಮಿಯೊಬ್ಬರಿಂದ 15 ಕೋಟಿ ರೂ. ದೋಚಿದ್ದಾರೆ. ಹಣ ವರ್ಗಾವಣೆಗೆ ಬೆದರಿಸಿದ ವಂಚಕರು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾರೆ. ದೂರು ದಾಖಲಾದ ನಂತರ ಪೊಲೀಸರು 90 ಲಕ್ಷ ರೂ. ಇರುವ ಖಾತೆ ಫ್ರೀಜ್ ಮಾಡಿದ್ದಾರೆ. ಸೈಬರ್ ವಂಚನೆಗಳಿಂದ ಎಚ್ಚರವಾಗಿರುವಂತೆ ಮತ್ತು ಯಾವುದೇ ಅನುಮಾನವಿದ್ದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!
ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!
ಸಹದೇವ್​ ಮಾನೆ
| Edited By: |

Updated on: Mar 21, 2026 | 2:34 PM

Share

ಬೆಳಗಾವಿ, ಮಾರ್ಚ್​ 21: ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು 15 ಕೋಟಿ ರೂಪಾಯಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಸಿರುವ ವಂಚಕರು ಕೋಟಿಗಟ್ಟಲೆ ಹಣ ದೋಚಿದ್ದಾರೆ. ಪ್ರಕರಣ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.

ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡ ವಂಚಕರು

ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿ ಬೆದರಿಸಿದ್ದ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ, ಹಣವನ್ನು ಸುರಕ್ಷತೆಗೆ ಬೇರೆ ಖಾತೆಗೆ ವರ್ಗಾಯಿಸಿ, ಬಳಿಕ ಮರಳಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ 15 ಕೋಟಿ ರೂ. ವರ್ಗಾಯಿಸಿಕೊಂಡಿದ್ದರು. ಬಳಿಕ ಸಂಪರ್ಕ ಕಡಿತಗೊಂಡಾಗ ವೃದ್ಧ ಉದ್ಯಮಿಗೆ ಅನುಮಾನ ಬಂದು ಮಾರ್ಚ್ 18ರಂದು ಬೆಳಗಾವಿ ನಗರದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

90 ಲಕ್ಷ ರೂ. ಇರುವ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೊಲೀಸರು

ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಂಚಕರ ಖಾತೆಗಳನ್ನು ಫ್ರೀಜ್ ಮಾಡಿದ್ದು, 15 ಕೋಟಿಯಲ್ಲಿ 90 ಲಕ್ಷ ರೂ. ಇರುವ ಖಾತೆಯನ್ನು ತಡೆಹಿಡಿದಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಒಂದೇ ತಿಂಗಳಲ್ಲಿ ಮೂವರು ಹಿರಿಯ ನಾಗರಿಕರು ಇಂತಹ ವಂಚನೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ, ಇಂತಹ ಬೆದರಿಕೆಗಳಿಗೆ ಹೆದರದೇ ತಕ್ಷಣ ಪೊಲೀಸರಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?