AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ

ಬೆಳಗಾವಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದನ್ನು ಉಲ್ಲಂಘಿಸಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ಮಾಡಿದ್ದರು. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಲಾಗಿತ್ತು. ಸದ್ಯ ಇವರ ವಿರುದ್ಧವೂ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ
ಜಾಂಬೋಟಿ ಅರಣ್ಯ ವಲಯದ ಜಲಪಾತದ ಬಳಿ ಮದ್ಯದ ಪಾರ್ಟಿ ಮಾಡಿದ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ
Sahadev Mane
| Edited By: |

Updated on:Jul 31, 2023 | 5:22 PM

Share

ಬೆಳಗಾವಿ, ಜುಲೈ 31: ಆದೇಶ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿರುವ ಜಲಪಾತದ ಬಳಿ ಅಧಿಕಾರಿಗಳು ಮದ್ಯದ ಪಾರ್ಟಿ ನಡೆಸಿದ ಪ್ರಕರಣ ಸಂಬಂಧ ಕೈಬಿಡಲಾಗಿದ್ದ ಇತರ ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬೆಳಗಾವಿ (Belagavi) ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಅರಣ್ಯ ಇಲಾಖೆಗೆ (Forest Department) ಆದೇಶಿಸಿದ್ದಾರೆ.

ಅರಣ್ಯ ವ್ಯಾಪ್ತಿಯ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಜುಲೈ 27 ರಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಉಲ್ಲಂಘನೆ ಮಾಡಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ನಡೆಸಿ ಮೋಜು ಮಸ್ತಿ ಮಾಡಿದ್ದರು.

ಇದನ್ನೂ ಓದಿ: Gokak Falls: ಮೈದುಂಬಿ ಹರಿಯುತ್ತಿರುವ ಬೆಳಗಾವಿಯ ಗೋಕಾಕ್ ಫಾಲ್ಸ್​ಗೆ ಪ್ರವೇಶ ನಿರ್ಬಂಧ, ಬಿಗಿ ಪೊಲೀಸ್ ಬಂದೋಬಸ್ತ್

ಪ್ರಕರಣ ಸಂಬಂಧ ವೈದ್ಯ ಸೇರಿ ನಾಲ್ವರ ವಿರುದ್ಧ ಜಾಂಬೋಟಿ ಅರಣ್ಯ ವಲಯದಲ್ಲಿ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಿದ್ದರು. ಈ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಧಿಕಾರಿ ನಿತೇಸ್ ಪಾಟೀಲ್ ಉಳಿದ ನಾಲ್ವರ ವಿರುದ್ಧವೂ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಭಾರೀ ಮಳೆ ಹಿನ್ನೆಲೆ ಜಲತಾಗಳು ದುಮ್ಮಿಕ್ಕುತ್ತಿದೆ, ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಜಾಂಬೋಟಿ ಬಳಿ ಇರುವ ಜಲಪಾತ ವೀಕ್ಷಣೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅದರಂತೆ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣು ತಪ್ಪಿಸಿ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ ಜಲಪಾತದ ಬಳಿ ಮದ್ಯದ ಪಾರ್ಟಿ ನಡೆಸಿದ್ದರು. ಅಷ್ಟೇ ಅಲ್ಲದೆ, ಅಲ್ಲೇ ಅಡುಕೆ ಮಾಡಿ ಸೇವನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 31 July 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​