Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ

ಬೆಳಗಾವಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದನ್ನು ಉಲ್ಲಂಘಿಸಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ಮಾಡಿದ್ದರು. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಲಾಗಿತ್ತು. ಸದ್ಯ ಇವರ ವಿರುದ್ಧವೂ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬೆಳಗಾವಿ ಅರಣ್ಯ ಪ್ರದೇಶದಲ್ಲಿ ಮದ್ಯದ ಪಾರ್ಟಿ ಪ್ರಕರಣ: ಉಳಿದ ನಾಲ್ವರ ವಿರುದ್ಧವೂ ತನಿಖೆಗೆ ಡಿ.ಸಿ. ಸೂಚನೆ
ಜಾಂಬೋಟಿ ಅರಣ್ಯ ವಲಯದ ಜಲಪಾತದ ಬಳಿ ಮದ್ಯದ ಪಾರ್ಟಿ ಮಾಡಿದ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ
Follow us
Sahadev Mane
| Updated By: Rakesh Nayak Manchi

Updated on:Jul 31, 2023 | 5:22 PM

ಬೆಳಗಾವಿ, ಜುಲೈ 31: ಆದೇಶ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿರುವ ಜಲಪಾತದ ಬಳಿ ಅಧಿಕಾರಿಗಳು ಮದ್ಯದ ಪಾರ್ಟಿ ನಡೆಸಿದ ಪ್ರಕರಣ ಸಂಬಂಧ ಕೈಬಿಡಲಾಗಿದ್ದ ಇತರ ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬೆಳಗಾವಿ (Belagavi) ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಅರಣ್ಯ ಇಲಾಖೆಗೆ (Forest Department) ಆದೇಶಿಸಿದ್ದಾರೆ.

ಅರಣ್ಯ ವ್ಯಾಪ್ತಿಯ ಫಾಲ್ಸ್​​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಜುಲೈ 27 ರಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಉಲ್ಲಂಘನೆ ಮಾಡಿ ಹೆಸ್ಕಾಂ ಸಿಬ್ಬಂದಿ, ವೈದ್ಯರು ಮದ್ಯದ ಪಾರ್ಟಿ ನಡೆಸಿ ಮೋಜು ಮಸ್ತಿ ಮಾಡಿದ್ದರು.

ಇದನ್ನೂ ಓದಿ: Gokak Falls: ಮೈದುಂಬಿ ಹರಿಯುತ್ತಿರುವ ಬೆಳಗಾವಿಯ ಗೋಕಾಕ್ ಫಾಲ್ಸ್​ಗೆ ಪ್ರವೇಶ ನಿರ್ಬಂಧ, ಬಿಗಿ ಪೊಲೀಸ್ ಬಂದೋಬಸ್ತ್

ಪ್ರಕರಣ ಸಂಬಂಧ ವೈದ್ಯ ಸೇರಿ ನಾಲ್ವರ ವಿರುದ್ಧ ಜಾಂಬೋಟಿ ಅರಣ್ಯ ವಲಯದಲ್ಲಿ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಟ್ಟು ಕಳುಹಿಸಿದ್ದರು. ಈ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಧಿಕಾರಿ ನಿತೇಸ್ ಪಾಟೀಲ್ ಉಳಿದ ನಾಲ್ವರ ವಿರುದ್ಧವೂ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಭಾರೀ ಮಳೆ ಹಿನ್ನೆಲೆ ಜಲತಾಗಳು ದುಮ್ಮಿಕ್ಕುತ್ತಿದೆ, ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಜಾಂಬೋಟಿ ಬಳಿ ಇರುವ ಜಲಪಾತ ವೀಕ್ಷಣೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅದರಂತೆ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣು ತಪ್ಪಿಸಿ ಹೆಸ್ಕಾಂ ಅಧಿಕಾರಿಗಳು ಮತ್ತು ವೈದ್ಯರ ತಂಡ ಜಲಪಾತದ ಬಳಿ ಮದ್ಯದ ಪಾರ್ಟಿ ನಡೆಸಿದ್ದರು. ಅಷ್ಟೇ ಅಲ್ಲದೆ, ಅಲ್ಲೇ ಅಡುಕೆ ಮಾಡಿ ಸೇವನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 31 July 23

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು