AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಸಚಿವ ಜಾರಕಿಹೊಳಿ ಬೆಂಬಲಿಸಿದಕ್ಕೆ ಗಂಡನ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಹೊಡೆದ ಮಹಿಳೆ!

ಬೆಳಗಾವಿ ಜಿಲ್ಲೆಯ ಸಹಕಾರಿ ರಂಗದ ಹಿಡಿತ ಸಾಧಿಸಲು ಜಾರಕಿಹೊಳಿ ಮತ್ತು ಕತ್ತಿ ಕುಟುಂಬದ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಅದರಲ್ಲೂ ಹುಕ್ಕೇರಿ ಮತಕ್ಷೇತ್ರದಲ್ಲಿ ಪಿಕೆಪಿಎಸ್ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆ ಎರಡು ಮನೆತನದ ನಡುವೆ ವೈಯಕ್ತಿಕ ಜಿದ್ದಿಗೆ ಬಿದ್ದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಇದೇ ಕಾರಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ಗಂಡನ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಹೊಡೆದು ಎಳೆದಾಡಿದ ಘಟನೆ ನಡೆದಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಸಚಿವ ಜಾರಕಿಹೊಳಿ ಬೆಂಬಲಿಸಿದಕ್ಕೆ ಗಂಡನ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಹೊಡೆದ ಮಹಿಳೆ!
ಸಚಿವ ಜಾರಕಿಹೊಳಿ ಬೆಂಬಲಿಸಿದಕ್ಕೆ ಗಂಡನ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಹೊಡೆದ ಮಹಿಳೆ!
ಸಹದೇವ್​ ಮಾನೆ
| Edited By: |

Updated on:Sep 09, 2025 | 9:51 AM

Share

ಬೆಳಗಾವಿ, ಸೆಪ್ಟೆಂಬರ್ 9: ಸಚಿವ ಸತೀಶ್ ಜಾರಕಿಹೊಳಿಯನ್ನು (Satish Jarkiholi) ಬೆಂಬಲಿಸಿದ್ದಕ್ಕೆ ಗಂಡನ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಹೊಡೆದು ಎಳೆದಾಡುತ್ತಿರುವ ಮಹಿಳೆ, ಮಧ್ಯದಲ್ಲಿ ಸಿಕ್ಕು ದಿಕ್ಕೇ ತೋಚದಂತಾಗಿ ನಿಂತ ಸಚಿವರು. ಎರಡು ಗುಂಪುಗಳಿಂದ ಪರಸ್ಪರ ಪರ-ವಿರುದ್ದ ಘೋಷಣೆ, ಪೊಲೀಸರಿಂದ ಪರಿಸ್ಥಿತಿ ಹತೋಟೆಗೆ ತರಲು ಹರಸಾಹಸ. ಈ ಎಲ್ಲ ದೃಶ್ಯಗಳು ಕಂಡು ಬಂದಿದ್ದು ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ. ಸೋಮವಾರ ಮಧ್ಯಾಹ್ನ ಈ ಗ್ರಾಮದಲ್ಲಿ ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮೇಲಾಗಿ ದೊಡ್ಡವರೇ ಇಲ್ಲಿ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು ಇಡೀ ಜಿಲ್ಲೆಯ ಜನರನ್ನೇ ಬೆಚ್ಚಿ ಬೀಳಿಸಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು, ಹೀಗಾಗಿ ಈ ಗ್ರಾಮದ ಪಿಕೆಪಿಎಸ್ ಸದಸ್ಯರು ಸೇರಿಕೊಂಡು ಒಬ್ಬರಿಗೆ ಮತದಾನ ಮಾಡುವ ಹಕ್ಕು ನೀಡುತ್ತಾರೆ. ಅದಕ್ಕಾಗಿ ಸೋಮವಾರ ಸಭೆ ಕೂಡ ಸೇರಲಾಗಿತ್ತು. ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಒಂದು ವಾರದಿಂದ ನಾಪತ್ತೆಯಾದವರು ದಿಢೀರ್ ಸಭೆಗೆ ಆಗಮಿಸಿದ್ದಾರೆ. ಸಭೆ ಇರುವ ಕಾರಣ ಪಿಕೆಪಿಎಸ್​ಗೆ ಸಚಿವ ಸತೀಶ್ ಜಾರಕಿಹೊಳಿ ಕೂಡ ಆಗಮಿಸಿದ್ದರು. ಇದೇ ವೇಳೆ ಮಾರುತಿ ಪತ್ನಿ ಕೂಡ ಅಲ್ಲಿಗೆ ಎಂಟ್ರಿ ಕೊಟ್ಟಿದ್ದಾರೆ. ಗಂಡ ವಾರದಿಂದ ಸಂಪರ್ಕಕ್ಕೆ ಸಿಗದಿದ್ದ ಹಿನ್ನೆಲೆ ಆಕ್ರೋಶಗೊಂಡು ಬಂದಾಕೆ ಆತನ ಕೊರಳು ಪಟ್ಟಿ ಹಿಡಿದು ಕೆನ್ನೆಗೆ ಬಾರಿಸಿ ಎಳೆದಾಡಿದ್ದಾರೆ. ಸಚಿವರ ಮುಂದೆಯೇ ಗಂಡ ಹೆಂಡತಿ ಹೈಡ್ರಾಮಾ ನಡೆಯುತ್ತಿದ್ದರೆ, ಇವರ ಜಗಳ ಬಿಡಿಸಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಸುಸ್ತಾಗಿ ಹೋದರು.

ಗಂಡನಿಗೆ ಕಪಾಳಮೋಕ್ಷ ಮಾಡಿದ ಎಳೆದಾಡಿದ ಮಹಿಳೆ: ವಿಡಿಯೋ ಇಲ್ಲಿದೆ ನೋಡಿ

ತಕ್ಷಣ ಇಬ್ಬರ ಜಗಳ ಬಿಡಿಸಿ ಮಾರುತಿ ಸನದಿಯನ್ನು ಮತ್ತೆ ಸತೀಶ್ ಜಾರಕಿಹೊಳಿ ಬೆಂಬಲಿಗರು ತಮ್ಮೊಟ್ಟಿಗೆ ಕರೆದುಕೊಂಡು ಹೋದರು. ಇತ್ತ ಸ್ಥಳಕ್ಕೆ ಬಂದ ಮಾಜಿ ಸಂಸದ ರಮೇಶ್ ಕತ್ತಿ ನೇರವಾಗಿ ಸತೀಶ್ ಜಾರಕಿಹೊಳಿ ಹಾಗೂ ತಂಡಕ್ಕೆ ಸವಾಲು ಹಾಕಿದರು. ತಮ್ಮ ರಾಜಕೀಯ ಇತಿಹಾಸ ಯಾವಾಗಿನಿಂದ ಶುರು ಆಗಿದೆ ಎಂಬುದನ್ನು ಹೇಳುತ್ತಾ ಪೊಲೀಸರ ವಿರುದ್ದ ಕೂಡ ಅಸಮಾಧಾನ ಹೊರ ಹಾಕಿದರು.

ಗಲಾಟೆ ಶುರುವಾಗುತ್ತಿದ್ದಂತೆ ಪಿಕೆಪಿಎಸ್ ಒಳ ಹೋದ ಸತೀಶ್ ಜಾರಕಿಹೊಳಿ ಕೆಲವೇ ಹೊತ್ತಲ್ಲಿ ತಮ್ಮ ಬೆಂಬಲಿಗರೊಂದಿಗೆ ಅಲ್ಲಿಂದ ಹೊರ ನಡೆದರು. ಇದಾದ ಬಳಿಕ ಮಾಜಿ ಸಂಸದ ರಮೇಶ್ ಕತ್ತಿ ಪರ ಬೆಂಬಲಿಗರು ಕಚೇರಿಗೆ ಒಳಗೆ ಬಂದು ಅಲ್ಲಿದ್ದ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡರು. ಇತ್ತ ಹೊರಗಡೆ ಭಾಗದಲ್ಲಿ ಸತೀಶ್ ಹಾಗೂ ರಮೇಶ್ ಕತ್ತಿ ಬೆಂಬಲಿಗರು ಜಮಾವಣೆಗೊಂಡಿದ್ದು ಪರಸ್ಪರ ವಾಗ್ವಾದ ಕೂಡ ಮಾಡಿಕೊಂಡರು. ಒಬ್ಬರಿಗೊಬ್ಬರು ಎಳೆದಾಡುವ ಮಟ್ಟಿಗೆ ಹೋಗ್ತಿದ್ದಂತೆಯೇ ಪೊಲೀಸರು ಜಗಳ ಬಿಡಿಸಿ ಎರಡು ಗುಂಪಿನವರನ್ನು ಅಲ್ಲಿಂದ ಕಳುಹಿಸುವ ಕೆಲಸ ಮಾಡಿದ್ದಾರೆ.

ಇತ್ತ ಮಾರುತಿ ಸನದಿಯನ್ನು ಮತ್ತೆ ಕಿಡ್ಯಾಪ್ ಮಾಡಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದು, ಇನ್ನೊಂದು ಕಡೆ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಯಿತು. ಇತ್ತ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ಇದ್ದು, ಸದ್ಯ ಒಂದು ಡಿಆರ್ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ, ಆಯೋಗಕ್ಕೆ ಸರ್ಕಾರ ಶಿಫಾರಸು

ಒಂದು ಕಡೆ ಸತೀಶ್ ಜಾರಕಿಹೊಳಿ ಮುಂದೆ ಗಂಡ ಹೆಂಡತಿ ಜಗಳವಾಡಿಕೊಂಡರೆ, ಇನ್ನೊಂದು ಕಡೆ ಮಾಜಿ ಸಂಸದ ರಮೇಶ್ ಕತ್ತಿ ಪಂಚೆ ಬನಿಯನ್​ನಲ್ಲೇ ಹೊರ ಬಂದು ತಮ್ಮ ರಾಜಕೀಯ ಇತಿಹಾಸ ಹೇಳಿ ಟಾಂಗ್ ಕೊಡುವ ಕೆಲಸ ಮಾಡಿದರು. ಎರಡು ಮನೆತನದ ನಡುವಿನ ವೈಯಕ್ತಿಕ ಜಗಳ ಇದೀಗ ಬೀದಿಗೆ ಬಿದ್ದಿದ್ದು, ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 am, Tue, 9 September 25

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ