AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​

Belagavi News: ಸಿಎಂ ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ಪ್ರವಾಸದ ವೇಳೆ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ ತಜ್ಞ ವೈದ್ಯರನ್ನು ನಿಯೋಜಿಸದೆ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ (DHO) ಈಶ್ವರ ಗಡಾದಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಈ ನೋಟಿಸ್​​ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​
ಬೆಳಗಾವಿ ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​Image Credit source: Tv9 Kannada
ಸಹದೇವ್​ ಮಾನೆ
| Edited By: |

Updated on:Jul 21, 2026 | 2:58 PM

Share

ಮುಖ್ಯಾಂಶಗಳು

  • ಸಿಎಂ ಪ್ರವಾಸದ ವೇಳೆ ಕರ್ತವ್ಯಲೋಪ ಆರೋಪ
  • ಬೆಳಗಾವಿ ಡಿಹೆಚ್​​ಒಗೆ ಶೋಕಾಸ್​​ ನೋಟಿಸ್​​ ಜಾರಿ
  • ಏಳು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚನೆ

ಬೆಂಗಳೂರು, ಜುಲೈ 21: ಸಿಎಂ ಡಿ.ಕೆ. ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಡಿಹೆಚ್‌ಒ ಯಡವಟ್ಟು ಮಾಡಿದ್ದು, ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಬೇಜವಾಬ್ದಾರಿ ತೋರಿರುವ ಆರೋಪ ಕೇಳಿಬಂದಿದೆ. ಸರ್ಕಾರ ನಿರ್ದೇಶನವಿದ್ದರೂ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ನೀಡದೆ ಸಾಮಾನ್ಯ ಆ್ಯಂಬುಲೆನ್ಸ್ ನಿಯೋಜಿಸದ ಜೊತೆಗೆ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಸಾಧಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಸಿಎಂ ವಾಸ್ತವ್ಯ ಸ್ಥಳದಲ್ಲಿ ತಜ್ಞ ವೈದ್ಯರ ಬದಲು ಪಿಜಿ ವೈದ್ಯರ ನಿಯೋಜನೆ ಮಾಡುವ ಮೂಲಕ ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ಶಿಷ್ಟಾಚಾರ ಉಲ್ಲಂಘಿಸಿದ ಡಿಹೆಚ್‌ಒ ಈಶ್ವರ ಗಡಾದಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಶೋಕಾಸ್​​ ನೋಟಿಸ್​​​ನಲ್ಲಿ ಏನಿದೆ?

ಮುಖ್ಯಮಂತ್ರಿಗಳ ಪ್ರವಾಸದ ವೇಳೆ ಅವರ ಭದ್ರತೆಗೆ ಅಗತ್ಯವಾಗಿದ್ದ ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಇರುವುದು ಪರಿಶೀಲನೆ ವೇಳೆ ದೃಢಪಟ್ಟಿದೆ. ಅಲ್ಲದೆ ಆ ವೇಳೆ ತಾವು ಕೂಡ ಹಾಜರಿಲ್ಲದೆ ಇರುವುದು ಗಮನಕ್ಕೆ ಬಂದಿದ್ದು, ಕನಿಷ್ಠ ಸೌಲಭ್ಯಗಳಾದ ಗ್ಲುಕೋಮೀಟರ್ ಮತ್ತು ಬಿಪಿ ಅಪಾರ್ಚರ್ಸ್ ಸಹ ಇಲ್ಲದಿರೋದು ಗೊತ್ತಾಗಿದೆ. ವಿಐಪಿ/ವಿವಿಐಪಿ ಪ್ರೋಟೋಕಾಲ್​​ಗೆ ಅನುಗುಣವಾಗಿ ಸುಸಜ್ಜಿತ ಜೀವ ರಕ್ಷಕ ವಾಹನ ಹಾಗೂ ಅಗತ್ಯ ಉಪಕರಣಗಳನ್ನು ಒದಗಿಸದೆ ಕರ್ತವ್ಯಲೋಪ ಎಸಗಲಾಗಿದೆ ಎಂದು ಶೋಕಾಸ್​​ ನೋಟಿಸ್​​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಈ ನೋಟಿಸ್​​ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಕಾಲಮಿತಿಯೊಳಗೆ ಸಮರ್ಪಕ ಉತ್ತರ ಸಲ್ಲಿಸದಿದ್ದಲ್ಲಿ ಅಥವಾ ಉತ್ತರ ತೃಪ್ತಿಕರವಾಗಿರದಿದ್ದಲ್ಲಿ ಅನ್ವಯಿಸುವ ನಿಯಮಗಳಡಿ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಸೂಚಿಸೋದಾಗಿ ಬೆಳಗಾವಿ ಜಿಲ್ಲಾ ಪಂಚಾಯತ್​​​ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಟಿಸ್​​​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:00 pm, Tue, 21 July 26

Follow Us
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು