ಭೀಕರ ಪ್ರವಾಹಕ್ಕೆ ತತ್ತರಿಸಿದ ಬೆಳಗಾವಿ; ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಲೈನ್​ಮನ್​ಗಳು!

Belagavi Rain: ಭೀಕರ ಮಳೆ ಹಾಗೂ ಪ್ರವಾಹಕ್ಕೆ ಬೆಳಗಾವಿ ಜಿಲ್ಲೆ ತತ್ತರಿಸಿದೆ. ಘಟಪ್ರಭಾ, ಕೃಷ್ಣಾ, ವೇದಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ದಡದಲ್ಲಿದ್ದ ಜನರನ್ನು ಅಪಾಯದಿಂದ ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಪ್ರವಾಹದ ನಡುವೆಯೇ ಕೈನ್​ಮಾನ್​ಗಳು ಕೆಲಸ ನಿರ್ವಹಿಸುತ್ತಿದ್ದಾರೆ.

ಭೀಕರ ಪ್ರವಾಹಕ್ಕೆ ತತ್ತರಿಸಿದ ಬೆಳಗಾವಿ; ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಲೈನ್​ಮನ್​ಗಳು!
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಹರಿಯುವ ಕೃಷ್ಣಾ ನದಿ ಸೃಷ್ಟಿಸಿರುವ ಪ್ರವಾಹ
Follow us
| Updated By: shivaprasad.hs

Updated on:Jul 24, 2021 | 2:22 PM

ಬೆಳಗಾವಿ: ಇಡೀ ಜಿಲ್ಲೆಯು ಭೀಕರ ಮಳೆಯಿಂದ ತತ್ತರಿಸಿದ್ದು ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಜೀವದ ಹಂಗು ತೊರೆದು ಲೈನ್​ಮನ್​ಗಳು ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರ್ಣಿ ಗ್ರಾಮದಲ್ಲಿ ಘಟನೆ ನಡೆದಿದ್ದು ಲೈನ್​ಮನ್​ಗಳು ಮಳೆಯಲ್ಲಿಯೇ ತೆರಳಿ ಟಿಸಿಗಳು ಮತ್ತು ವಿದ್ಯುತ್ ಕಂಬಗಳನ್ನು ಪರಿಶೀಲಿಸಿದ್ದಾರೆ. ಮೇಲಾಧಿಕಾರಿಗಳ ಸೂಚನೆಯ ಮೇರೆಗೆ ಹಿರಣ್ಯಕೇಶಿ ನದಿಯ ಹಿನ್ನೀರಿನಿಂದ ಬಂದ್ ಆಗಿರುವ ಹಿಡಕಲ್ ಡ್ಯಾಂ- ಹುಕ್ಕೇರಿ ರಸ್ತೆಯಲ್ಲಿ‌ ರಭಸವಾಗಿ ಹರಿಯುವ ನೀರಿನಲ್ಲಿ‌ ಹೋಗಿ ಲೈನ್​ಮನ್​ಗಳು ಟಿಸಿಗಳನ್ನ ಪರಿಶೀಲಿಸಿ ಮರಳಿ ಬಂದಿದ್ದಾರೆ. ಪ್ರಾಣದ ಹಂಗು ತೊರೆದು ನೀರಿನಲ್ಲಿ ಹೋಗಿ ಪರಿಶೀಲನೆ ಮಾಡಿ ಬಂದಿದ್ದೇವೆ ಎಂದು ಲೈನ್​ಮನ್ ಹೇಳಿಕೆ ನೀಡಿದ್ದಾರೆ.

ನಿಪ್ಪಾಣಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಲ್ಲಿ ಸಿಲುಕಿದ್ದ ಗರ್ಭಿಣಿ ಮಹಿಳೆಯನ್ನು ಎನ್​ಡಿಆರ್​ಎಫ್ ತಂಡ ರಕ್ಷಿಸಿದೆ. ವೇದಗಂಗಾ ನದಿಯ ಪ್ರವಾಹದಿಂದ ಕುರ್ಲಿ ಗ್ರಾಮ ಮುಳುಗಡೆಯಾಗಿತ್ತು. ಸ್ಥಳಕ್ಕೆ ತೆರಳಿದ ಸಿಬ್ಬಂದಿ ಗ್ರಾಮದಲ್ಲಿ ಸಿಲುಕಿದ್ದ ಗರ್ಭಿಣಿ ಮಹಿಳೆ ಹಾಗೂ ಇನ್ನೊರ್ವ ರೋಗಿಯನ್ನು ರಕ್ಷಿಸಿ ಬೋಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

NDRF rescuing a Lady Belagavi

ಎನ್​ಡಿಆರ್​ಎಫ್ ಸಿಬ್ಬಂದಿ ಮಹಿಳೆಯೊಬ್ಬರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿರುವುದು

ಚಿಕ್ಕೋಡಿ: ಕೃಷ್ಣಾ ನದಿಯ ನೀರು ನುಗ್ಗಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ನಡುಗಡ್ಡೆಯಂತಾಗಿದೆ. ಎನ್‌ಡಿಆರ್‌ಎಫ್‌ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ಗ್ರಾಮದಲ್ಲಿ ಸಿಲುಕಿದ್ದ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಕೃಷ್ಣಾ ನದಿ ಪ್ರವಾಹಕ್ಕೆ ದಡದ ಅಕ್ಕಪಕ್ಕದಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ಸಾವಿರ ಹೆಕ್ಟೇರ್ ಪ್ರದೇಶದಲ್ಲಿದ್ದ ಕಬ್ಬು ಬೆಳೆ ಹಾನಿಯಾಗಿದೆ. 3 ವರ್ಷದಿಂದ ನೆರೆಯಿಂದ ಬೆಳೆ ಕಳೆದುಕೊಳ್ಳುತ್ತಿರುವ ರೈತರಿಗೆ ಈ ಬಾರಿಯೂ ನೆರೆಯಿಂದ ಬೆಳೆ ಹಾನಿಯಾಗಿರುವುದು ಆಘಾತ ಉಂಟುಮಾಡಿದ್ದು ಕಂಗಾಲಾಗಿದ್ದಾರೆ.

ಹುಕ್ಕೇರಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ‌ ಮುಂದುವರಿದ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಟಬಾಗಿ ಗ್ರಾಮದ ದುರ್ಗಾದೇವಿ ದೇಗುಲ ಜಲಾವೃತಗೊಂಡಿದೆ. ಅರ್ಚಕರು ಸೇರಿದಂತೆ ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ಕೋಟಬಾಗಿ ಗ್ರಾಮದ ದುರ್ಗಾದೇವಿ ದೇಗುಲ ಜಲಾವೃತಗೊಂಡಿದೆ

ಹುಕ್ಕೇರಿ ತಾಲೂಕಿನ ಕುರ್ಣಿ ಗ್ರಾಮದಲ್ಲಿ ಭಾರಿ ಮಳೆಗೆ ಬೆಳೆ, ಮನೆಗಳು ಜಲಾವೃತವಾಗಿವೆ. ಹಿರಣ್ಯಕೇಶಿ ನದಿಯ ನೀರು ನುಗ್ಗಿ 20 ಮನೆಗಳು ಜಲಾವೃತಗೊಂಡಿವೆ. ಸಂತ್ರಸ್ತರು ಸೂರು ಕಳೆದುಕೊಂಡು ದಿಕ್ಕೆಟ್ಟಿದ್ದು ಸಹಾಯ ಮಾಡುವಂತೆ ಅಂಗಲಾಚುತ್ತಿದ್ಧಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಕುರಿತ ವಿಡಿಯೊ ವರದಿ ಇಲ್ಲಿದೆ:

ಇದನ್ನೂ ಓದಿ: ಎದೆ ತನಕ ನದಿ ನೀರು ನುಗ್ಗಿ ಬರುತ್ತಿದ್ದರೂ ಜೀವದ ಹಂಗು ತೊರೆದು ಪಂಪ್ ಸೆಟ್​ ರಕ್ಷಣೆ ಮಾಡಿಕೊಂಡ ರೈತ; ಟಿವಿ 9 ಕ್ಯಾಮರಾದಲ್ಲಿ ಸೆರೆ

(Belagavi district is suffering by heavy rain and flood even in this situation Lineman’s are working bravely)

Published On - 1:29 pm, Sat, 24 July 21

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!