AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಭೀಕರ ಬರದ ಛಾಯೆ: ಮಳೆ ಆಗದೆ ಒಣಗಿ ಹುಲ್ಲಿನಂತಾದ ಭತ್ತ, ಕಂಗಾಲಾದ ರೈತರು

Belagavi News: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಭಾಗದಲ್ಲಿ ಅತೀ ಹೆಚ್ಚು ಭತ್ತ ಬೆಳೆಯುತ್ತಾರೆ. ಉತ್ತಮವಾದ ಮಳೆಯಾಗಿ ಒಳ್ಳೆಯ ಫಸಲು ತೆಗೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ಬಾರಿ ಮಳೆರಾಯ ಶಾಕ್ ಕೊಟ್ಟಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಸೂಕ್ತ ಸಮಯಕ್ಕೆ ಸರಿಯಾದ ಮಳೆ ಆಗದ ಹಿನ್ನೆಲೆ ಇದೀಗ ಸಂಪೂರ್ಣವಾಗಿ ಬೆಳೆ ಒಣಗಿ ಹೋಗಿದ್ದು, ರೈತರು ಕಂಗಾಲಾಗಿದ್ದಾರೆ.

ಬೆಳಗಾವಿ: ಭೀಕರ ಬರದ ಛಾಯೆ: ಮಳೆ ಆಗದೆ ಒಣಗಿ ಹುಲ್ಲಿನಂತಾದ ಭತ್ತ, ಕಂಗಾಲಾದ ರೈತರು
ಒಣಗಿ ಹುಲ್ಲಿನಂತಾದ ಭತ್ತ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Sep 25, 2023 | 3:33 PM

ಬೆಳಗಾವಿ, ಸೆಪ್ಟೆಂಬರ್​ 25: ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಆ ಜಿಲ್ಲೆಯ ಉಪವಿಭಾಗವೊಂದರಲ್ಲಿ ಪಂಚನದಿಗಳು ಹರಿದಿವೆ. ಆ ಉಪವಿಭಾಗದಲ್ಲಿ ಶೇಕಡ 25ರಷ್ಟು ಗ್ರಾಮಗಳು ನದಿಪಾತ್ರದಲ್ಲಿದ್ದು ನೀರಾವರಿ ಪ್ರದೇಶವಾಗಿದ್ದರೆ. ಉಳಿದ ಶೇಕಡ 75ರಷ್ಟು ಭಾಗದಲ್ಲಿ ನೀರಿಲ್ಲದೇ ಬೆಳೆಗಳು ಒಣಗುತ್ತಿವೆ. ಮಳೆ ಆಗದ ಹಿನ್ನೆಲೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಬೆಳೆದ ಅತೀ ಹೆಚ್ಚು ಭತ್ತ (paddy crop) ಒಣಗಿ ಹುಲ್ಲಿನಂತಾಗಿದೆ. ಮಳೆ ಇಲ್ಲದ್ದಕ್ಕೆ ಒಣಗಿದ ಬೆಳಿಯಿಂದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ಭೀಕರ ಬರದ ಪರಿಸ್ಥಿತಿ ಎದುರಾಗಿದೆ. ಸಂತೋಷ ಪಾಟೀಲ್ ಎಂಬುವವರ ಮೂರು ಎಕರೆಯಲ್ಲಿ ಭತ್ತ ಬೆಳೆದಿದ್ದರು. ಆದರೆ ಮಳೆ ಆಗದ ಹಿನ್ನೆಲೆ ಬೆಳೆ ಸಂಪೂರ್ಣ ಹಾಳಾಗಿದೆ. ಹಾಗಾಗಿ ಭತ್ತವನ್ನ ಕಿತ್ತು ಗದ್ದೆಯಿಂದ ಹೊರ ಎಸೆದಿದ್ದಾರೆ.

ಮಕ್ಕಳ ಶಾಲೆಗೆ ಶುಲ್ಕ ಕಟ್ಟಲು ಸಹ ಹಣವಿಲ್ಲ‌ದಂತಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ್ದು ಬೆಳೆಯೂ ಕೈ ಕೊಟ್ಟಿದೆ. ಸಾಲಗಾರರು ವಾಪಾಸ್ ಹಣ ಕೊಡುವಂತೆ ಕೇಳುತ್ತಿದ್ದಾರೆ. ಇನ್ನೊಂದಡೆ ಸರ್ಕಾರ ಪರಿಹಾರ ಘೋಷಣೆ ಮಾಡುತ್ತಿಲ್ಲ. ಬದುಕುವುದೇ ಕಷ್ಟವಾಗಿದ್ದು ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಒಂದೇ ದಾರಿ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಮಳೆ ಬಾರದೇ ಒಣಗುತ್ತಿದೆ ಬೆಳೆ: ರೈತರ ನರಕಯಾತನೆ, ನದಿಪಾತ್ರದ ಗ್ರಾಮಗಳಲ್ಲಿ ಕಳ್ಳರ ಕಾಟ

ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಭಾಗದಲ್ಲಿ ಅತೀ ಹೆಚ್ಚು ಭತ್ತ ಬೆಳೆಯುತ್ತಾರೆ. ಉತ್ತಮವಾದ ಮಳೆಯಾಗಿ ಒಳ್ಳೆಯ ಫಸಲು ತೆಗೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ಬಾರಿ ಮಳೆರಾಯ ಶಾಕ್ ಕೊಟ್ಟಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಸೂಕ್ತ ಸಮಯಕ್ಕೆ ಸರಿಯಾದ ಮಳೆ ಆಗದ ಹಿನ್ನೆಲೆ ಇದೀಗ ಸಂಪೂರ್ಣವಾಗಿ ಬೆಳೆ ಒಣಗಿ ಹೋಗಿದೆ.

ಇಷ್ಟೊತ್ತಿಗಾಗಲೇ ಫಸಲು ಕೈಗೆ ಬರುತ್ತೆ ಅಂದುಕೊಂಡಿದ್ದವರಿಗೆ ಒಣಗಿದ ಬೆಳೆ ಕಂಡು ಸಂಕಟ ಪಡುತ್ತಿದ್ದಾರೆ. ಅಲ್ಪಸ್ವಲ್ಪ ಬೆಳೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಆಗಷ್ಟ್ ತಿಂಗಳಲ್ಲಿ ಒಂದೇ ಒಂದು ಹನಿ ಮಳೆ ಆಗದ ಹಿನ್ನೆಲೆ ಭತ್ತದ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿದೆ. ಮಳೆಗೆ ಕಾದು ಕಾದು ಸುಸ್ತಾದ ರೈತರು ಇದೀಗ ಬೆಳೆ ಒಣಗಿದ್ದನ್ನ ಕಂಡು ಭತ್ತದ ಬೆಳೆಯನ್ನ ಕಟಾವು ಮಾಡಿ ಬಿಸಾಡುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ: ರೈತನ ಪಾಲಿಗೆ ಕಹಿಯಾದ ಸಿಹಿ ಗೆಣಸು

ಮುಂದಿನ ಬೆಳೆ ಬೆಳೆಯಲು ಭೂಮಿಯನ್ನ ತಯಾರು ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇನ್ನೂ ಕಟಾವು ಮಾಡಲು ಕೂಡ ಹಣ ಖರ್ಚು ಮಾಡಬೇಕು, ಬಿತ್ತನೆ, ಕೀಟನಾಶಕ ಸೇರಿದಂತೆ ಎಲ್ಲದಕ್ಕೂ ಖರ್ಚಾಗುತ್ತೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಅಂತಾ ರೈತರು ಒತ್ತಾಯ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಳೆ ಆಗದ ಹಿನ್ನೆಲೆ ಸಾಕಷ್ಟು ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಕಡೆಗಲ್ಲಿ ಬೆಳೆ ಒಣಗಿ ರೈತರೇ ಕಿತ್ತೆಸೆಯುವ ಕೆಲಸ ಮಾಡ್ತಿದ್ದು, ಬೆಳೆ ಹಾನಿ ಸರ್ವೇ ಮಾಡಲು ಅಧಿಕಾರಿಗಳು ಮುಂದಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆ ಹಾನಿ ಪ್ರದೇಶದ ಸರ್ವೇ ಮಾಡಿಸಿ ಪರಿಹಾರ ನೀಡುವ ಕೆಲಸವಾಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:32 pm, Mon, 25 September 23

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್