AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಮನಮೆಚ್ಚಿದ ಬೆಳಗಾವಿ ರೈತನ ಸಾಧನೆ ಬಗ್ಗೆ ತಿಳಿಯಿರಿ

ಬೆಳಗಾವಿಯ ರೈತನ ಮೀನು ಸಾಕಾಣಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫಿದಾ ಆಗಿದ್ದಾರೆ. ಅವರ ಸಾಧನೆ ಕಂಡು ಇಂದಿನ ತಮ್ಮ ಮನ್ ಕಿ ಬಾತ್​ ಕಾರ್ಯಕ್ರಮದಲ್ಲಿ ಹಾಡಿಹೊಗಳಿದ್ದಾರೆ. ಆ ಮೂಲಕ ಕನ್ನಡಿಗ ಕೃಷಿಕನ ಹೆಸರು ದೇಶಾದ್ಯಂತ ಮೊಳಗಿದೆ. ಹಾಗಾದರೆ ಯಾರು ಈ ರೈತ, ಅವರು ಮಾಡಿದ ಸಾಧನೆಯಾದರೂ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಧಾನಿ ಮೋದಿ ಮನಮೆಚ್ಚಿದ ಬೆಳಗಾವಿ ರೈತನ ಸಾಧನೆ ಬಗ್ಗೆ ತಿಳಿಯಿರಿ
ಮಗ ರಾಜುನೊಂದಿಗೆ ಶಿವಲಿಂಗಪ್ಪ ಸಾತಪ್ಪ ಹುದ್ದಾರImage Credit source: tv9 kannada
Sahadev Mane
| Edited By: |

Updated on:Mar 29, 2026 | 8:39 PM

Share

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಳಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

30 ಲಕ್ಷಕ್ಕೂ ಅಧಿಕ ಖರ್ಚು: ಮೂರು ವರ್ಷದಿಂದ ಮೀನು ಸಾಗಾಣಿಕೆ

ಬೋಡಕ್ಯಾನಟ್ಟಿ ಎನ್ನುವ ಪುಟ್ಟ ಗ್ರಾಮದಲ್ಲಿ ಶಿವಲಿಂಗಪ್ಪ ಅವರು ತಮ್ಮ ಪುತ್ರ ರಾಜು ನೆರವಿನಿಂದ ಒಂದು ಎಕರೆಯಲ್ಲಿ ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನವನ್ನು ಬಳಸಿ ಕುಚ್ಚು(ಮರಲ್) ಮೀನು ಸಾಕಾಣಿಕೆ ಮಾಡುತ್ತಿದ್ದಾರೆ. ಮೀನುಗಾರಿಕೆಗೆ 30 ಲಕ್ಷಕ್ಕೂ ಅಧಿಕ ಖರ್ಚು ಮಾಡಿ ಆರಂಭಿಸಿರುವ ಶಿವಲಿಂಗಪ್ಪ, ಕಳೆದ ಮೂರು ವರ್ಷದಿಂದ ಮೀನು ಸಾಗಾಣಿಕೆ ಮಾಡುತ್ತಿದ್ದಾರೆ.

ಒಂದು ಎಕರೆ ಜಮೀನಿನಲ್ಲಿ ನಾಲ್ಕು ಕೃಷಿ ಹೊಂಡ‌ ನಿರ್ಮಿಸಿ 15 ಸಾವಿರ ಮೀನುಗಳನ್ನ ಸಾಗಾಣಿಕೆ ಮಾಡಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಿಂದ ಮೀನು‌ ಮರಿಗಳನ್ನ ತರುತ್ತಾರೆ. ಏಳರಿಂದ ಎಂಟು‌ ತಿಂಗಳವರೆಗೆ ಒಂದು ಬ್ಯಾಚ್ ರೆಡಿಯಾಗುತ್ತೆ. ಮೀನು ಬೇಕಾದವರು ಇವರ ಕೃಷಿ ಹೊಂಡಕ್ಕೆ ಬಂದು ತೆಗೆದುಕೊಂಡು ಹೋಗುತ್ತಾರೆ. ಪ್ರತಿ 15 ದಿನಕ್ಕೊಮ್ಮೆ ಕೃಷಿ ಹೊಂಡದ ನೀರು ಬದಲಾವಣೆ ಮಾಡುತ್ತಾರೆ. ಮೊದಲ ಬ್ಯಾಚ್​ನಲ್ಲಿ 25 ಲಕ್ಷ, ಎರಡನೇ ಬ್ಯಾಚ್​​ನಲ್ಲಿ 22 ಲಕ್ಷ ಹೀಗೆ ಲಕ್ಷ ಲಕ್ಷ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ಇನ್ನು ಈ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದು ವಿಶೇಷ. ಅಷ್ಟೇ ಅಲ್ಲದೆ ಇಂದು ಮನ್ ಕಿ ಬಾತ್​ನಲ್ಲಿ ಶಿವಲಿಂಗಪ್ಪ ಹುದ್ದಾರ ಅವರ ಯಶಸ್ವಿ ಮೀನುಗಾರಿಕೆ ಬಗ್ಗೆ ದೇಶಕ್ಕೆ ಪರಿಚಯಿಸಿದರು. ಈ ರೀತಿ ಎಲ್ಲಾ ರೈತರು ವಿಭಿನ್ನವಾಗಿ ಪ್ರಯತ್ನಿಸಿದರೆ ದೇಶ ಆರ್ಥಿಕವಾಗಿ ಸದೃಢ ಆಗಬಹುದು. ಅಲ್ಲದೇ ದೇಶದ ಆರ್ಥಿಕ ಶಕ್ತಿಗೂ‌ ದೊಡ್ಡ ಕೊಡುಗೆ ನೀಡಬಹುದು ಎಂದು ಕರೆ ನೀಡಿದ್ದಾರೆ.

ಲಕ್ಷಾಂತರ ರೂ ಗಳಿಸಿದಾಗಲೂ ಇಷ್ಟು ಖುಷಿಯಾಗಿರಲಿಲ್ಲ: ಶಿವಲಿಂಗಪ್ಪ ಹುದ್ದಾರ 

ಪ್ರಧಾನಿ ಮೋದಿಯವರು ತಮ್ಮ ಹೆಸರು ಉಲ್ಲೇಖ ಮಾಡಿದ ವಿಚಾರ ಶಿವಲಿಂಗಪ್ಪ ಹುದ್ದಾರ ಅವರ ಸಂತಸಕ್ಕೆ ಪಾರವೇ ಇರಲ್ಲ. ದೇಶದ ಪ್ರಧಾನಿ ಮೋದಿ ತಮ್ಮ ಬಗ್ಗೆ ಮಾತನಾಡಿದ್ದು ಹೆಮ್ಮೆ ತಂದಿದೆ ಅಂತಾ ಸಂತಷ ಹಂಚಿಕೊಂಡಿದ್ದಾರೆ. ನಾವು ಲಕ್ಷ ಲಕ್ಷ ಆದಾಯ ಗಳಿಸಿದಾಗಲೂ ಇಷ್ಟು ಖುಷಿ ಆಗಿರಲಿಲ್ಲ. ನಾನು, ನನ್ನ ಮಕ್ಕಳಾದ ರಾಜು ಮತ್ತು ಸಾತೇಶ ಪಟ್ಟ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ರಾಜು ಹುದ್ದಾರ

ಶಿವಲಿಂಗಪ್ಪ ಪುತ್ರ ರಾಜು ಹುದ್ದಾರ ಮಾತನಾಡಿದ್ದು, ಮನ್ ಕಿ ಬಾತ್​ನಲ್ಲಿ ಮೋದಿ ಅವರು ನಮ್ಮ ಬಗ್ಗೆ ಮಾತನಾಡಿದ್ದಕ್ಕೆ ಬಹಳಷ್ಟು ಖುಷಿ ಆಗುತ್ತಿದೆ. ಇದನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಆದರೆ, ನಮ್ಮ ಮೀನು ಸಾಕಾಣಿಕೆ ಸಾಧನೆ ಪ್ರಧಾನಮಂತ್ರಿಗಳವರೆಗೂ ಮುಟ್ಟಿದ್ದು ನಮಗೆ ಇನ್ನಿಲ್ಲದ ಸಂತಸ ತಂದಿದೆ. ಬಹಳಷ್ಟು ಜನರು ಫೋನ್‌ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ‌ ಅಂತಾ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:21 pm, Sun, 29 March 26

Follow Us
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ
ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ
ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್
ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್
BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!
BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!