AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಐವರಿಗೆ ಚಾಕು ಇರಿತ

ಕನ್ನಡ ರಾಜ್ಯೋತ್ಸವ ಮೆರವಣಿ ವೇಳೆ ಭಯಾಕನ ಘಟನೆಯೊಂದು ನಡೆದಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳಿಂದ ಐವರಿಗೆ ಚಾಕು ಇರಿತ
ರಾಜ್ಯೋತ್ಸವ ಮೆರವಣಿಗೆ
ಸಹದೇವ್​ ಮಾನೆ
| Edited By: |

Updated on:Nov 01, 2025 | 10:36 PM

Share

ಬೆಳಗಾವಿ, ನವೆಂಬರ್​ 01: ಕನ್ನಡ ರಾಜ್ಯೋತ್ಸವ (Kannada Rajyotsava) ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದು (stabbed) ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಮೂವರು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುನಾಥ್​ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ವಿನಾಯಕ್ ಮತ್ತು ನಜೀರ್ ಪಠಾಣ್‌ ಎಂಬುವರಿಗೆ ಚಾಕು ಇರಿಯಲಾಗಿದೆ.

ನಡೆದದ್ದೇನು?

ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಐವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಬೆಳಗಾವಿಯ ‌ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಕಮಿಷನರ್ ಭೂಷಣ್ ಬೊರಸೆ ಹೇಳಿದ್ದಿಷ್ಟು 

ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಹಲ್ಲೆಗೊಳಗಾದವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈಜಂಕ್ಷನ್ ಬಳಿ ರಾಜ್ಯೋತ್ಸವ ಮೆರವಣಿಗೆ ವೇಳೆ ಘರ್ಷಣೆ ಆಗಿದೆ. ನಾಲ್ವರಿಗೆ ಚಾಕುವಿನಿಂದ ಇರಿದಿದ್ದಾರೆ, ಒಬ್ಬರ ತಲೆಗೆ ಗಾಯ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ರಾಜ್ಯೋತ್ಸವದಂದೇ MES ಕಾರ್ಯಕರ್ತರ ಪುಂಡಾಟ; ಅನುಮತಿ ಇಲ್ಲದಿದ್ರೂ ಕರಾಳ ದಿನ ಆಚರಣೆ!

ಯಾರು ಹಲ್ಲೆ‌ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಘಟನೆ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ಕೂಡ ಮಾಡುತ್ತೇವೆ. ಗಾಯಗೊಂಡ ಎಲ್ಲರೂ ಬೆಳಗಾವಿಯ ನೆಹರುನಗರದ ನಿವಾಸಿಗಳು. ರಾಜ್ಯೋತ್ಸವ ಮೆರವಣಿಗೆಯಲ್ಲಿ ಈವರೆಗೆ 3-4 ಲಕ್ಷ ಜನರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

11ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿ ಪರಾರಿ ಎಂದ ಗಾಯಾಳು 

ಗಾಯಾಳು ರಾಘವೇಂದ್ರ ಎಂಬುವವರು ಮಾತನಾಡಿದ್ದು, ಮೆರವಣಿಗೆಯಲ್ಲಿ ರೂಪಕ ವಾಹನ ತಂದಿದ್ದೇವು. ನಮ್ಮ ವಾಹನದ ಬಳಿ ಬೇರೆಯವರೊಂದಿಗೆ ಅಪರಿಚಿತರು ಜಗಳ ಮಾಡುತ್ತಿದ್ದರು. ನಮ್ಮ ರೂಪಕ ವಾಹನ ನೋಡಿ ನಮ್ಮ ಮೇಲೆ ಹಲ್ಲೆ ಮಾಡಿದರು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಬಂತು: ಬೆಳಗಾವಿಯಲ್ಲಿ ಮತ್ತೆ ಬಾಲ ಬಿಚ್ಚಿದ ಎಂಇಎಸ್

ಕೈಯಲ್ಲಿ ಚಾಕು ಹಿಡಿದು ಬಂದು ಹಲ್ಲೆ ಮಾಡಿದ್ದಾರೆ ಎಂದರು. ಹನ್ನೊಂದಕ್ಕೂ ಅಧಿಕ ಜನರಿಂದ ಎಳೆಂಟು ಜನರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೆಲವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೋಗಿದ್ದಾರೆ ಎಂದರು.

ಯುವತಿಯರ ಬಳಿ ಅಸಭ್ಯ ವರ್ತನೆ ಮಾಡ್ತಿದ್ದವರಿಗೆ ಲಾಠಿ ಏಟು

ಇನ್ನು ರಾತ್ರಿಯಾದರೂ ಬೆಳಗಾವಿಯಲ್ಲಿ ರಾಜ್ಯೋತ್ಸವ ಉತ್ಸಾಹ ಕಡಿಮೆ ಆಗಿಲ್ಲ. ಯುವತಿಯರ ಪಕ್ಕ ಡ್ಯಾನ್ಸ್ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ಏಟು ನೀಡಿದ್ದು, ಸ್ಥಳದಿಂದ ದಿಕ್ಕಪಾಲಾಗಿದ್ದಾರೆ. ಇಂದು ಬೆಳಗ್ಗೆಯಿಂದಲೂ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ರಾಜ್ಯೋತ್ಸವ ನಡೆಯುತ್ತಿದ್ದು, ಡಿಜೆ ಹಾಡುಗಳಿಗೆ ಯುವಜನತೆ ಕುಣಿದು ಕುಪ್ಪಳಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 pm, Sat, 1 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ