AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ದುರ್ಯೋಧನ ಐಹೊಳೆಗೆ ಏಕವಚನದಲ್ಲಿ ಅವಾಜ್ ಹಾಕಿದ ಅರಣ್ಯ ಅಧಿಕಾರಿ: ಆಡಿಯೋ ವೈರಲ್

ಬೆಳಗಾವಿ ಜಿಲ್ಲೆಯ ಗೋಕಾಕ್​ ಡಿಸಿಎಫ್​​ಓ ಶಿವಾನಂದ ನಾಯಕವಾಡಿ ಅವರು ರಾಯಬಾಗ ಶಾಸಕ ದುರ್ಯೋಧನ ಐಹೊಳೆಗೆ ಏಕವಚನದಲ್ಲಿ ಮಾತನಾಡಿ ಅವಾಜ್ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ತಡೆ ಹಿಡಿದ ಕಟ್ಟಡ ಕಾಮಗಾರಿಯನ್ನು ಮತ್ತೆ ಶುರು ಮಾಡುವಂತೆ ಶಾಸಕ ಐಹೊಳೆ ಕರೆ ಮಾಡಿ ಕೇಳಿಕೊಂಡಿದ್ದಾರೆ.

ಶಾಸಕ ದುರ್ಯೋಧನ ಐಹೊಳೆಗೆ ಏಕವಚನದಲ್ಲಿ ಅವಾಜ್ ಹಾಕಿದ ಅರಣ್ಯ ಅಧಿಕಾರಿ: ಆಡಿಯೋ ವೈರಲ್
ಶಾಸಕ ದುರ್ಯೋಧನ ಐಹೊಳೆ, ಗೋಕಾಕ್ DCFO ಶಿವಾನಂದ ನಾಯಕವಾಡಿ
Sahadev Mane
| Edited By: |

Updated on: Jan 10, 2024 | 7:29 PM

Share

ಬೆಳಗಾವಿ, ಜನವರಿ 10: ಜಿಲ್ಲೆಯ ಗೋಕಾಕ್​ ಡಿಸಿಎಫ್​​ಓ ಶಿವಾನಂದ ನಾಯಕವಾಡಿ ಅವರು ರಾಯಬಾಗ ಶಾಸಕ ದುರ್ಯೋಧನ ಐಹೊಳೆ (Duryodhana Aihole)ಗೆ ಏಕವಚನದಲ್ಲಿ ಮಾತನಾಡಿ ಅವಾಜ್ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ತಡೆ ಹಿಡಿದ ಕಟ್ಟಡ ಕಾಮಗಾರಿಯನ್ನು ಮತ್ತೆ ಶುರು ಮಾಡುವಂತೆ ಶಾಸಕ ಐಹೊಳೆ ಕರೆ ಮಾಡಿ ಕೇಳಿಕೊಂಡಿದ್ದಾರೆ. ಈ ವೇಳೆ ಏಕವಚನದಲ್ಲೇ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.

ರಾಯಬಾಗ ಪಟ್ಟಣದಲ್ಲಿ ಸಾಮಾಜಿಕ ಅರಣ್ಯ ಕಚೇರಿ ಮಂಜೂರಾಗಿತ್ತು. 33 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ಸರ್ಕಾರಿ ಕಾಮಗಾರಿಗೆ ಅಕ್ರಮ ಕಾಮಗಾರಿ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಪಾನಿಪುರಿ ತಿಂದು ಹಣ ಕೇಳಿದ್ದಕ್ಕೆ ನೆಲಮಂಗಲದಲ್ಲಿ ಪುಡಿ ರೌಡಿಯ ಅವಾಜ್, ಜನರ ಎದುರು ಷರ್ಟ್ ಬಿಚ್ಚಿ ದರ್ಪ!

ನಿನ್ನಂತಹ ಶಾಸಕರು ಬಹಳ ಜನರನ್ನು ನೋಡಿದ್ದೇನೆ. ನೀನು ಯಾರು, ನೀನು ಹೇಗೆ ಮಾತನಾಡುತ್ತೀಯಾ ನಾನು ಹಾಗೆ ಮಾತಾಡುತ್ತೇನೆ. ಎಂಎಲ್‌ಎ ಅಂತ ನನಗೆ ಅವಾಜ್ ಹಾಕುತ್ತೀಯಾ. ನೀವು ನನಗೆ ಗೌರವ ಕೊಟ್ಟರೆ, ಎರಡೇ ನಿಮಿಷದಲ್ಲಿ ಕೆಲಸ ಮಾಡುತ್ತೇನೆ ಎಂಬ ಶಾಸಕ ಮತ್ತು ಅಧಿಕಾರಿ ನಡುವಿನ ಸಂಭಾಷಣೆ ಭಾರಿ ವೈರಲ್ ಆಗಿದೆ.

ಪೊಲೀಸರಿಗೆ ಅವಾಜ್ ಹಾಕಿದ್ದ ಕಾಂಗ್ರೆಸ್ ಮುಖಂಡರು

ಗದಗ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಹೆಲಿಪ್ಯಾಡ್​ಗೆ ಪೊಲೀಸ್​ ಬಿಗಿ ಭದ್ರತೆ ಒದಗಿಸಿದ್ದರು. ಆದರೆ ಕಾಂಗ್ರೆಸ್ ಮುಖಂಡರ ಗುಂಪು ಆಗಮಿಸಿ ಒಳಗೆ ಬಿಡುವಂತೆ ಕೇಳಿದ್ದರು. ಪೊಲೀಸ್ ಅಧಿಕಾರಿಗಳು ಒಳಗೆ ಬಿಡಲಿಲ್ಲ. ಈ ವೇಳೆ ಕಾಂಗ್ರೆಸ್​ ಯುವ ಘಟಕದ ಅಧ್ಯಕ್ಷ ಪೊಲೀಸರಿಗೆ ಅವಾಜ್ ಹಾಕಿದ್ದರು.

ಇದನ್ನೂ ಓದಿ: ಎಐಸಿಸಿ ಪಟ್ಟಿಯನ್ನೇ ಬದಲಾಯಿಸಿದ ಡಿಕೆ ಶಿವಕುಮಾರ್: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸ್ಥಾನ!

ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಮಂದಾಲಿಯ ಅಸಭ್ಯ ವರ್ತನೆಗೆ ಗರಂ ಆದ ಪೊಲೀಸರು ಎಚ್ಚರಿಕೆಯಿಂದ ಮಾತನಾಡಿ ಅಂತ ವಾರ್ನಿಂಗ್ ಕೊಟ್ಟಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಏಕ ವಚನದಲ್ಲಿ ಅವಾಜ್ ಹಾಕಿದ ಅಧ್ಯಕ್ಷ ನಾವು ಸಾಮಾನ್ಯ ಎಂದು ತಿಳಿದುಕೊಂಡಿದ್ದೀರಾ ಎಂದು ಏರುಧ್ವನಿಯಲ್ಲಿ ಮಾತನಾಡಿದ್ದರು.

ಡಿವೈಎಸ್ಪಿ ಶಿವಾನಂದ ಚನ್ನಬಸಪ್ಪ ಸೇರಿದಂತೆ ಹಲವು ಅಧಿಕಾರಿಗಳಿಗೆ ಅವಾಜ್ ಹಾಕಿದ್ದರು. ಅಷ್ಟೇ ಅಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ್ದಿರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sahadev Mane
Sahadev Mane
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?