AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ 15 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 20 ದಿನಗಳ ಹಿಂದೆ ನಡೆದ ಘಟನೆ, ನಾಲ್ವರ ಬಂಧನ

Belagavi Gang Rape: ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.

ಬೆಳಗಾವಿಯಲ್ಲಿ 15 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 20 ದಿನಗಳ ಹಿಂದೆ ನಡೆದ ಘಟನೆ, ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Aug 27, 2021 | 3:51 PM

Share

ಬೆಳಗಾವಿ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಆರೋಪಿಗಳ ಬಂಧನಕ್ಕೂ ಮುನ್ನವೇ  ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿ ನಾಲ್ವರನ್ನು ಬಂಧಿಸಿದ್ದಾರೆ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದ ಹತ್ತೇ ಗಂಟೆಯಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಬಂಧಸಿದ್ದಾಗಿ ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಮೈಸೂರು ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರು ಹೇಳಿದ್ದೇನು? ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡಲಿ ಎಂದು ಚಾಮುಂಡಿಯನ್ನು ಪ್ರಾರ್ಥಿಸಿದ್ದೇನೆ. ಇನ್ನೂ ಆರೋಪಿ ಗಳು ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ ಸಮಯ ಬೇಕಿದೆ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ. ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಾಡದೇವತೆ ಚಾಮುಂಡಿಯನ್ನು ಪ್ರಾರ್ಥಿಸಿ ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡೆಂದು ಬೇಡಿಕೊಂಡಿರುವೆ. ಅಂತೆಯೇ, ಎಲ್ಲರ ಮನಸ್ಸಿಗೂ ಒಳ್ಳೆಯ ಭಾವನೆ ಕೊಡು ಎಂದು ಕೇಳಿಕೊಂಡಿದ್ದೇನೆ ಎನ್ನುವುದಾಗಿ ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಗೃಹ ಸಚಿವರು ಈಗಾಗಲೇ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸಂತೃಸ್ತೆಯ ಸ್ನೇಹಿತ ಹೇಳಿದ್ದೇನು? ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂದು ವಿವರಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಯುವಕ ಹೇಳಿದ ವಿಷಯ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸುವಂತಿದೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.

ಆಗಸ್ಟ್​ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ಹೋಗಿ 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ರೂಪಾಯಿ ಹಣ ಕೊಡುವಂತೆ ಒತ್ತಾಯ ಮಾಡಿದರು. ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಪೊಲೀಸರಿಗೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ:

 1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ -ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತು

(Belagavi Gang rape Massacre of 15 year old girl case registered in Ghataprabha Police station)

Published On - 3:07 pm, Fri, 27 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ