AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!

ಲವ್ವರ್ ಜತೆ ಮಗಳು ಮನೆ ಬಿಟ್ಟು ಹೋದಳೆಂದು ತಂದೆ ಆಕೆಯ ತಿಥಿ ಮಾಡಿ ಸಂಬಂಧ ಕಡಿದುಕೊಂಡಿದ್ದಲ್ಲದೆ, ಬಂಧು-ಬಳಗ ಹಾಗೂ ಊರಿನವರನ್ನು ಕರೆಸಿ ತಿಥಿ ಊಟ ಹಾಕಿಸಿದ ವಿಲಕ್ಷಣ ವಿದ್ಯಮಾನ ಬೆಳಗಾವಿ ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಮಗಳ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಊರಿನ ಅಲ್ಲಲ್ಲಿ ಹಾಕಿಸಿ ಮನದ ನೋವು, ಆಕ್ರೋಶ ಹೊರಹಾಕಿದ್ದಾರೆ.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
Sahadev Mane
| Edited By: |

Updated on:Oct 11, 2025 | 2:33 PM

Share

ಚಿಕ್ಕೋಡಿ, ಅಕ್ಟೋಬರ್ 11: ಪ್ರೀತಿಸಿದ ಯುವಕ ಯುವತಿ ಪೋಷಕರ ವಿರೋಧದ ನಡುವೆಯೂ ಓಡಿ ಹೋಗಿ ಮದುವೆಯಾಗುವುದು, ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆಯಾದವರನ್ನು ಪೋಷಕರು ಕೊಲೆ ಮಾಡಿಸುವುದು, ಇತ್ಯಾದಿ ಪ್ರಕರಣಗಳ ಬಗ್ಗೆ ಆಗಾಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಆದರೆ, ಬೆಳಗಾವಿ (Belegavi) ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ಇಲ್ಲಿ, ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ಏನಿದು ಪ್ರಕರಣ?

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ಶಿವಗೌಡ ಎಂಬವರ ಮಗಳು ಅದೇ ಗ್ರಾಮದ ವಿಠ್ಠಲ್ ಬಸ್ತವಾಡೆ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಪೋಷಕರಿಗೆ ಈ ಬಗ್ಗೆ ಸಮ್ಮತಿ ಇರಲಿಲ್ಲ. ಇಂಥ ಸಂದರ್ಭದಲ್ಲೇ ಶಿವಗೌಡ ಮಗಳು ವಿಠ್ಠಲ್ ಬಸ್ತವಾಡೆ ಜತೆ ಪರಾರಿಯಾಗಿದ್ದಾಳೆ. ಮೊದಲಿಗೆ ಶಿವಗೌಡ ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು. ನಂತರ, ಮಗಳು ಪ್ರೀತಿಸಿದ ಯುವಕನ ಜತೆ ಓಡಿಹೋಗಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಅವರು ಮಗಳು ತಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದು ತಿಥಿ ಮಾಡಿದ್ದಾರೆ ಶಿವಗೌಡಗೆ ನಾಲ್ಕು ಜನ ಹೆಣ್ಣುಮಕ್ಕಳಿದ್ದು, ಈ ಪೈಕಿ ಈಗ ಓಡಿಹೋದವಳು ಕೊನೆಯವಳಾಗಿದ್ದಳು. ಮಗಳು ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರುವ ಶಿವಗೌಡ ಪಾಟೀಲ್, ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಗೆಳೆಯನಿಂದ ಪದೇ ಪದೇ ಅತ್ಯಾಚಾರ, 3 ಬಾರಿ ಗರ್ಭಪಾತ

ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಸಿ ಭೋಜನ ಹಾಕಿಸಿದ್ದಾರೆ. ಅಷ್ಟೇ ಅಲ್ಲದೆ, ಮಗಳ ಫೋಟೊ ಹಾಕಿ ಊರ ತುಂಬ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಹಾಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Sat, 11 October 25

Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ