AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!

ಲವ್ವರ್ ಜತೆ ಮಗಳು ಮನೆ ಬಿಟ್ಟು ಹೋದಳೆಂದು ತಂದೆ ಆಕೆಯ ತಿಥಿ ಮಾಡಿ ಸಂಬಂಧ ಕಡಿದುಕೊಂಡಿದ್ದಲ್ಲದೆ, ಬಂಧು-ಬಳಗ ಹಾಗೂ ಊರಿನವರನ್ನು ಕರೆಸಿ ತಿಥಿ ಊಟ ಹಾಕಿಸಿದ ವಿಲಕ್ಷಣ ವಿದ್ಯಮಾನ ಬೆಳಗಾವಿ ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಮಗಳ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಊರಿನ ಅಲ್ಲಲ್ಲಿ ಹಾಕಿಸಿ ಮನದ ನೋವು, ಆಕ್ರೋಶ ಹೊರಹಾಕಿದ್ದಾರೆ.

ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
ಸಹದೇವ್​ ಮಾನೆ
| Edited By: |

Updated on:Oct 11, 2025 | 2:33 PM

Share

ಚಿಕ್ಕೋಡಿ, ಅಕ್ಟೋಬರ್ 11: ಪ್ರೀತಿಸಿದ ಯುವಕ ಯುವತಿ ಪೋಷಕರ ವಿರೋಧದ ನಡುವೆಯೂ ಓಡಿ ಹೋಗಿ ಮದುವೆಯಾಗುವುದು, ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆಯಾದವರನ್ನು ಪೋಷಕರು ಕೊಲೆ ಮಾಡಿಸುವುದು, ಇತ್ಯಾದಿ ಪ್ರಕರಣಗಳ ಬಗ್ಗೆ ಆಗಾಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಆದರೆ, ಬೆಳಗಾವಿ (Belegavi) ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ಇಲ್ಲಿ, ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ಏನಿದು ಪ್ರಕರಣ?

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ ಶಿವಗೌಡ ಎಂಬವರ ಮಗಳು ಅದೇ ಗ್ರಾಮದ ವಿಠ್ಠಲ್ ಬಸ್ತವಾಡೆ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಪೋಷಕರಿಗೆ ಈ ಬಗ್ಗೆ ಸಮ್ಮತಿ ಇರಲಿಲ್ಲ. ಇಂಥ ಸಂದರ್ಭದಲ್ಲೇ ಶಿವಗೌಡ ಮಗಳು ವಿಠ್ಠಲ್ ಬಸ್ತವಾಡೆ ಜತೆ ಪರಾರಿಯಾಗಿದ್ದಾಳೆ. ಮೊದಲಿಗೆ ಶಿವಗೌಡ ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು. ನಂತರ, ಮಗಳು ಪ್ರೀತಿಸಿದ ಯುವಕನ ಜತೆ ಓಡಿಹೋಗಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಅವರು ಮಗಳು ತಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದು ತಿಥಿ ಮಾಡಿದ್ದಾರೆ ಶಿವಗೌಡಗೆ ನಾಲ್ಕು ಜನ ಹೆಣ್ಣುಮಕ್ಕಳಿದ್ದು, ಈ ಪೈಕಿ ಈಗ ಓಡಿಹೋದವಳು ಕೊನೆಯವಳಾಗಿದ್ದಳು. ಮಗಳು ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರುವ ಶಿವಗೌಡ ಪಾಟೀಲ್, ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಗೆಳೆಯನಿಂದ ಪದೇ ಪದೇ ಅತ್ಯಾಚಾರ, 3 ಬಾರಿ ಗರ್ಭಪಾತ

ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಸಿ ಭೋಜನ ಹಾಕಿಸಿದ್ದಾರೆ. ಅಷ್ಟೇ ಅಲ್ಲದೆ, ಮಗಳ ಫೋಟೊ ಹಾಕಿ ಊರ ತುಂಬ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಹಾಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Sat, 11 October 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ