AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ್ದ ಆರೋಪಿಗಳ ವಿರುದ್ಧ ದೂರು ದಾಖಲು, ಓರ್ವ ಬಂಧನ

ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರ ವಾಸಿಗಳು, ಶ್ರೀದೇವಿ ಗೊಡಚಿ ಎಂಬುವರಿಗೆ ಅ.14ರ ಮಧ್ಯರಾತ್ರಿ ನಡುರಸ್ತೆಯಲ್ಲಿ ಚಪ್ಪಲಿ ಹಾರ ಹಾಕಿ ಘಟಪ್ರಭಾದ ಮೃತ್ಯುಂಜಯ ಸರ್ಕಲ್​ನಲ್ಲಿ ಮೆರವಣಿಗೆ ಮಾಡಿದ್ದರು. ಅಲ್ಲದೆ ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿದ್ದರು.

ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ್ದ ಆರೋಪಿಗಳ ವಿರುದ್ಧ ದೂರು ದಾಖಲು, ಓರ್ವ ಬಂಧನ
ಘಟಪ್ರಭಾ ಪೊಲೀಸ್​ ಠಾಣೆ
Sahadev Mane
| Edited By: |

Updated on: Oct 15, 2023 | 10:14 AM

Share

ಬೆಳಗಾವಿ ಅ.15: ಮಧ್ಯರಾತ್ರಿ ಮಹಿಳೆಗೆ (Woman) ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಅಮಾನವೀಯವಾಗಿ ನಡೆದುಕೊಂಡಿದ್ದ ಎ1 ಆರೋಪಿ ಅರ್ಜುನ್ ಗುಂಡಪ್ಪಗೋಳ ಸೇರಿದಂತೆ 20 ಕ್ಕೂ ಅಧಿಕ ಜನರ ವಿರುದ್ಧ ಘಟಪ್ರಭಾ (Gataprabha) ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ1 ಆರೋಪಿ ಅರ್ಜುನ ಗುಂಡಪ್ಪಗೋಳ ಅನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂತ್ರಸ್ತ ಮಹಿಳೆ ಶ್ರೀದೇವಿ ಗೊಡಚಿ ಅವರು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಅವಾಚ್ಯವಾಗಿ ನಿಂದನೆ, ಕೊಲೆಗೆ ಯತ್ನ ಮತ್ತು ಮಾನಹರಾಜು ಹಾಕಿದ್ದಾರೆಂದು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಎ1 ಆರೋಪಿ ಅರ್ಜುನ್​​ನನ್ನು ಬಂಧಿಸಲಾಗಿದೆ. ಇನ್ನುಳಿದ ಪುರುಷ ಮತ್ತು ಮಹಿಳಾ ಆರೋಪಿಗಳನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ. ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಸಿ ಥಳಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ್ದಾರೆ. 307, 143, 147, 323, 342, 352, 355, 504, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್‌‌ಪಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

ಮಧ್ಯರಾತ್ರಿ ಮಹಿಳೆಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರ ವಾಸಿಗಳು, ಶ್ರೀದೇವಿ ಗೊಡಚಿ ಎಂಬುವರಿಗೆ ಅ.14ರ ಮಧ್ಯರಾತ್ರಿ ನಡುರಸ್ತೆಯಲ್ಲಿ ಚಪ್ಪಲಿ ಹಾರ ಹಾಕಿ ಘಟಪ್ರಭಾದ ಮೃತ್ಯುಂಜಯ ಸರ್ಕಲ್​ನಲ್ಲಿ ಮೆರವಣಿಗೆ ಮಾಡಿದ್ದರು. ಅಲ್ಲದೆ ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಪೊಲೀಸ್​ ಠಾಣೆಯಲ್ಲಿ ಎಎಸ್​ಐ ಮೇಲೆ ಚಪ್ಪಲಿ ಎಸೆದು, ಪಿಎಸ್​​ಐಗೆ ಕಚ್ಚಿದ ಮಹಿಳೆ

ಶ್ರೀದೇವಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಗಳು ಆಕೆಯ ಮನೆಗೆ ಹೋಗಿ ಪ್ರಶ್ನಿಸಿದ್ದರು. ಈ ವೇಳೆ ಮಹಿಳೆಯರಿಗೆ ಶ್ರೀದೇವಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಳು ಎಂದು ಆರೋಪಿಗಳು ಶ್ರೀದೇವಿಯನ್ನು ಮನೆಯಿಂದ ಹೊರ ತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಒಪ್ಪಿಸಿದ್ದರು.

5 ಲಕ್ಷ ರೂ. ನೀಡದಿದ್ದಕ್ಕೆ ಈ ರೀತಿ ಮಾಡಿದ್ದಾರೆ

ಕಳೆದ ತಿಂಗಳು 30ನೇ ತಾರೀಖು ದಲಿತ ಸಂಘಟನೆಯವರು ನನ್ನ ಬಳಿ ಬಂದು ಐದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಲ್ಲವಾದರೆ ನಿನ್ನ ಗಡಿಪಾರು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಆಗ ನಾನು ಭೀಕ್ಷೆ ಬೇಡಿಕೊಂಡು ಜೀವನ ಮಾಡುತ್ತೇನೆ, ನಾನು ಎಲ್ಲಿಂದ ಹಣ ಕೊಡಬೇಕು ಎಂದು ಪ್ರಶ್ನಿಸಿದ್ದೆ. ಮತ್ತೆ ನಿನ್ನೆ ರಾತ್ರಿ ನಮ್ಮ ಮನೆಗೆ ಬಂದು ಐದು ಲಕ್ಷ ಕೊಡು ಎಂದು ಪೀಡಿಸಿದರು‌. ನಾನು ಯಾಕೆ ಹಣ ಕೊಡಬೇಕು ಎನ್ನುತ್ತಿದ್ದಂತೆ ನನಗೆ ಸಿಕ್ಕಾಪಟ್ಟೆ ಹೊಡೆದರು‌. ನಂತರ ಬೆತ್ತಲೆಗೊಳಿಸಿ, ಅತ್ಯಾಚಾರ ಮಾಡಿದ್ದರು. ಬಳಿಕ ಚಪ್ಪಲಿ ಮಾಲೆ ಹಾಕಿ ಮೆರವಣಿಗೆ ಮಾಡಿದ್ದರು ಎಂದು ಮಹಿಳೆ ಕಣ್ಣೀರು ಹಾಕಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!