Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡಿದ್ದವರ ವಿರುದ್ಧ ಕೇಸ್; ಪ್ರತಿಭಟನೆಗಿಳಿದ ಸಿಬ್ಬಂದಿ

ಬೆಳಗಾವಿ ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಗೃಹಲಕ್ಷ್ಮೀ ಅರ್ಜಿ ಹಾಕಲು ಹಣ ಪಡೆದಿದ್ದಕ್ಕೆ ಪೊಲೀಸರು ಕೇಸ್ ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡಿದ್ದವರ ವಿರುದ್ಧ ಕೇಸ್; ಪ್ರತಿಭಟನೆಗಿಳಿದ ಸಿಬ್ಬಂದಿ
ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಒನ್ ಸಿಬ್ಬಂದಿ
Follow us
Sahadev Mane
| Updated By: ಆಯೇಷಾ ಬಾನು

Updated on: Jul 31, 2023 | 2:49 PM

ಬೆಳಗಾವಿ, ಜುಲೈ 31: ಸರ್ಕಾರ ರಾಜ್ಯಾದ್ಯಂತ ಗೃಹಲಕ್ಷ್ಮೀ ಯೋಜನೆಗೆ(Gruha Jyothi Scheme) ಅರ್ಜಿ ಸಲ್ಲಿಸಲು ಹಣ ಪಡೆಯದಂತೆ ಹಾಗೂ ಹಣ ಪಡೆದರೆ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಆದ್ರೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ ಒಂದು ಅರ್ಜಿಗೆ ನೂರಾರು ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ಒನ್ ಕೇಂದ್ರದ ಮೇಲೆ ಹಲವು ಕಡೆ ಕೇಸ್ ದಾಖಲಾಗಿದೆ. ಹೀಗಾಗಿ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ(Protest) ನಡೆಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರ ಬಂದ್ ಮಾಡಿ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಗೃಹಲಕ್ಷ್ಮೀ ಅರ್ಜಿ ಹಾಕಲು ಹಣ ಪಡೆದಿದ್ದಕ್ಕೆ ಪೊಲೀಸರು ಕೇಸ್ ದಾಖಲಿಸುತ್ತಿದ್ದಾರೆ. ಲ್ಯಾಮಿನೇಷನ್, ಪ್ರಿಂಟ್‌ಗೆ ಹಣ ಪಡೆಯುತ್ತಿದ್ದೇವೆ. ಅದನ್ನ ಅರ್ಜಿಗೆ ಹಣ ಪಡೆಯುತ್ತಿದ್ದಾರೆ ಅಂತಾ ಬಿಂಬಿಸಿ ಕೇಸ್ ಹಾಕ್ತಿದ್ದಾರೆ. ಸರ್ಕಾರದ ಸೇವೆ ಮಾಡ್ತಿದ್ರೂ ಸರ್ಕಾರವೇ ನಮ್ಮ ಮೇಲೆ ಕೇಸ್ ಹಾಕ್ತಿದೆ. ಸರ್ಕಾರ ನೀಡುವ ಸಹಾಯ ಧನ 12ರೂಪಾಯಿಯಲ್ಲಿ ಟ್ಯಾಕ್ಸ್ ತೆಗೆದು ಆರು ರೂ ಬರುತ್ತೆ. ಆ ಹಣ ಕೂಡ ಯಾವಾಗ ಬರುತ್ತೆ ಗೊತ್ತಿಲ್ಲ ಆದ್ರೂ ಕೆಲಸ ಮಾಡ್ತಿದ್ದೇವೆ. ಹೀಗೆ ಆದ್ರೇ ಗ್ರಾಮ ಒನ್ ಬಂದ್ ಮಾಡಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಪ್ರತಿಭಟನೆ ವೇಳೆ ಸಿಬ್ಬಂದಿ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Belagavi News: ಗೃಹಲಕ್ಷ್ಮೀ ಅರ್ಜಿ ನೋಂದಣಿಗೆ ಹಣ ವಸೂಲಿ ಆರೋಪ; ಗ್ರಾಮ ಒನ್ ಕೇಂದ್ರದ ಲಾಗ್‌ಇನ್ ಐಡಿ ರದ್ದು

ಗೃಹಿಣಿಯರು ಸೇರಿದಂತೆ ಬಡ ಜನರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2 ಸಾವಿರ ಹಣ ಪಡೆಯೋಕ್ಕೆ ಕ್ಯೂ ನಲ್ಲಿ ನಿಲ್ತಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸೂಕ್ಕೆ ಅಂತ ಬರ್ತಿರುವ ಬಡ ಜನರ ಬಳಿ ಗ್ರಾಮ ಒನ್ ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ ನೂರು ಇನ್ನೂರು ರೂಪಾಯಿಯನ್ನ ವಸೂಲಿ ಮಾಡ್ತಿದ್ದಾರೆ ಎಂಬ ಬಗ್ಗೆ ಅನೇಕ ಜಿಲ್ಲೆಗಳಲ್ಲಿ ದೂರು ದಾಖಲಾಗಿದೆ. ಇನ್ನೂ ಹಣ ವಸೂಲಿ ಬಗ್ಗೆ ಜನರು ಕೂಡ ತಮ್ಮ ಅಳಲು ತೋಡಿಕೊಂಡಿದ್ದಾರೆ. ನೂರು ರೂಪಾಯಿ ಕೊಟ್ರೆ ಮಾತ್ರ ಅರ್ಜಿ ಹಾಕೋದು ಅಂತ ಅರ್ಜಿದಾರರ ಮೇಲೆ ಸಿಬ್ಬಂದಿ ದಬ್ಬಾಳಿಕೆ ಮಾಡಿದ್ದಾರೆ ಎನ್ನಲಾದ ಅದೆಷ್ಟೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!