AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ದುರ್ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಸ್ಥಳೀಯರ ಜತೆಗೂಡಿ ಬಿದ್ದ ಮನೆಯ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Oct 06, 2021 | 10:30 PM

Share

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ ಐವರು ಮೃತಪಟ್ಟ ವಿಷಾದಕರ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ. 7 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಂಗವ್ವ ಭೀಮಪ್ಪ(80), ಸತ್ಯವ್ವ ಅರ್ಜುನ್‌(45), ಕಾಶವ್ವ(8), ಪೂಜಾ ಅರ್ಜುನ್‌(8), ಸವಿತಾ ಭೀಮಪ್ಪ(28) ಮೃತರು. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಸ್ಥಳದಲ್ಲೇ ಐವರು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಸ್ಥಳೀಯರ ಜತೆಗೂಡಿ ಬಿದ್ದ ಮನೆಯ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸಚಿವ ಗೋವಿಂದ ಕಾರಜೋಳ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಗ್ರಾಮಕ್ಕೆ ಭೇಟಿ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ.

ಅರ್ಜುನ್‌ ಖನಗಾವಿ ಅವರು 9 ವರ್ಷಗಳ ಹಿಂದೆ ಮಣ್ಣಿನ ಮನೆ ಕಟ್ಟಿದ್ದರು. ಅದು ಮಣ್ನಿನ ಮನೆಯಾಗಿದ್ದ ಕಾರಣ ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಹೊಸ ಮನೆ ನಿರ್ಮಾಣ ಹಿನ್ನೆಲೆ ಪಕ್ಕದ ಮನೆಗೆ ಶಿಫ್ಟ್ ಆಗಿದ್ದರು. ಮಳೆ ನಿಂತ ನಂತರ ಮಣ್ಣಿನ ಮನೆ ನೋಡಲು ಕುಟುಂಬ ಸಮೇತ ಆಗಮಿಸಿದ್ದರು. ಈ ವೇಳೆ ಏಕಾಏಕಿ ಮಣ್ಣಿನ ಮನೆ ಕುಸಿದು ಬಿದ್ದು ದುರ್ಘಟನೆ ಸಂಭವಿಸಿದೆ. ಗೆಳತಿ ಜತೆ ಹೋಗಿದ್ದ ಪಕ್ಕದ ಮನೆಯ ಬಾಲಕಿ ಕಾಶವ್ವ ಸಹ ಸಾವನ್ನಪ್ಪಿದ್ದಾರೆ.

ಮಂಗಳೂರು: ಅಣಬೆ ಸೇವಿಸಿ 12 ಮಂದಿ ಅಸ್ವಸ್ಥ ಮಂಗಳೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಊಟದ ಜತೆಗೆ ಅಣಬೆ ಪದಾರ್ಥವನ್ನು ಸೇವಿಸಿದ್ದರು. ರಾಘವ (42), ಲತಾ (35), ತ್ರಿಶಾ (10), ಕೇಶವ (45), ಅರ್ಚನಾ (10), ಹೊನ್ನಮ್ಮ (60), ಬೇಬಿ (35) ಸೇರಿ ಇತರರು ಅಸ್ವಸ್ಥ. 12 ಮಂದಿಯೂ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 

ಸಿಎಂ ಚಾಮರಾಜನಗರ ಭೇಟಿ; ಅಧಿಕಾರ ಕಳೆದುಕೊಳ್ಳುವ ಮೌಢ್ಯ ಅಳಿಸಲು ಮುಂದಾದ ಬೊಮ್ಮಾಯಿ: ಇಲ್ಲಿದೆ ಇತಿಹಾಸ

ಕಟೀಲು ದುರ್ಗಾ ಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ? ಗೊಂದಲಕ್ಕೆ ಇಲ್ಲಿದೆ ಉತ್ತರ

Published On - 9:10 pm, Wed, 6 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ